ಶಿವಮೊಗ್ಗ : ನಗರದ ಖಾಸಗಿ ಬಸ್ ಸ್ಟಾಂಡ್ ಮುಂಭಾಗದಲ್ಲಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನು ನಿರುದ್ಯೋಗ ದಿನ ಎಂದು ಆಚರಣೆ ಮಾಡಲಾಯಿತು.
ದೇಶದಲ್ಲಿ ವರ್ಷಕ್ಕೆ ೨ ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಹೇಳಿ ಕೇಂದ್ರದಲ್ಲಿ ಮೂರು ಬಾರಿ ಅಧಿಕಾರದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಎರಡು ಅವಧಿ ಮುಗಿಸಿ ಮೂರನೇ ಅವಧಿಯ ವರ್ಷದ ಸಂಭ್ರಮಾಚರಣೆ ಆಚರಿಸಿದರೂ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡದೇ ದೇಶದಲ್ಲಿ ನಿರುದ್ಯೋಗ ತಾಂಡವವಾಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದು, ಇದನ್ನು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದಾರೆ.
೨೦೧೪ರ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ವರ್ಷಕ್ಕೆ ೨ ಕೋಟಿ ಉದ್ಯೋಗ ಸೃಷ್ಟಿಸುವು ದಾಗಿ ನರೇಂದ್ರ ಮೋದಿ ಹೇಳಿದ್ದರು. ಆದರೆ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡಲಿಲ್ಲ. ಬದಲಿಗೆ ಈ ಹಿಂದಿನಿಂದ ಕಾಂಗ್ರೆಸ್ ಬೆಳೆಸಿ, ಪೋಷಿಸಿದ್ದ ಸರ್ಕಾರಿ ಸ್ವಾಮ್ಯದ ಬೃಹತ್ ಕೈಗಾರಿಕೆಗಳನ್ನು ಮುಚ್ಚಿ ಲಕ್ಷಾಂತರ ಉದ್ಯೋಗಿಗಳು ಬೀದಿಗೆ ಬೀಳುವಂತೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು . ಇದೇ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಚ್ ಸಿ ಯೋಗೇಶ್ ರವರು ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸ ಗೀಕರಣ ಮಾಡುವ ಮೂಲಕ ಉದ್ಯೋಗ ಕಡಿತ ಮಾಡುತ್ತಾ ಬರಲಾಯಿತು ಎಂದರು.
ಉದ್ಯೋಗ ಸೃಷ್ಟಿಯ ಬಗ್ಗೆ ಸರ್ಕಾರವನ್ನು ಕೇಳಿದ ಯುವ ಜನತೆಗೆ ‘ಬೋಂಡ ಮಾರಿ, ತರಕಾರಿ ಮಾರಿ, ಚಹಾ ಮಾರಿ ಜೀವನ ನಡೆಸಿ’ ಎಂದು ಪ್ರಧಾನಿ ನರೇಂದ್ರ ಮೋದಿಯವರು ಬಿಟ್ಟಿ ಸಲಹೆ ನೀಡಿ ತಮ್ಮ ಬೇಜವಾ ಬ್ದಾರಿತನ ಪ್ರದರ್ಶಿಸಿದ್ದರು. ಈಗ ಮೂರನೇ ಬಾರಿ ಪ್ರಧಾನಿಯಾಗಿ ತಮ್ಮ ಹುಟ್ಟುಹ ಬ್ಬವನ್ನು ದೇಶಾದ್ಯಂತ ಸಂಭ್ರಮ ದಿಂದ ಆಚರಿಸಿಕೊ ಳ್ಳುತ್ತಿದ್ದಾರೆ. ಆದರೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತನಾಡುತ್ತಿಲ್ಲ ಎಂದರು.ಕೇಂದ್ರ ಸರ್ಕಾರದ ಅವೈಜ್ಞಾನಿ ಕ ಆರ್ಥಿಕ ನೀತಿಗಳಿಂ ದಾಗಿ ಯುವಜನತೆ ಕಂಗಾಲಾಗಿ ದ್ದಾರೆ. ಉನ್ನತ ವ್ಯಾಸಂಗ ಮಾಡಿ ದವರು ದಿನಗೂಲಿ ಕೆಲಸವೂ ಸಿಗದೆ ಪರದಾಡುತ್ತಿದ್ದಾರೆ ಎಂದು ದೂರಿದರು . ಯುವ ಕಾಂಗ್ರೆಸ್ನ ಜಿಲ್ಲಾ ಧ್ಯಕ್ಷ ಹರ್ಷಿತ್ ಗೌಡ ಮಾತನಾಡಿ
ಮೇಕ್ ಇನ್ ಇಂಡಿಯಾ ಮಂತ್ರ ಜಪಿಸುತ್ತಲೇ ಪ್ರಧಾನಿ ಮೋದಿಯವರು ದೇಶದ ವಿದ್ಯಾವಂತ ಯುವಜನತೆಯನ್ನು ನಿರುದ್ಯೋಗಿಗಳನ್ನಾಗಿ ಮಾಡಿ ಅವರ ಬದುಕನ್ನು ದುಸ್ತರ ಮಾಡಿದ್ದಾರೆ ಎಂದರು.
ಆದ್ದರಿಂದ ಈ ದಿನ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ದಿನವನ್ನು ನಿರುದ್ಯೋಗಿ ಯುವಜನತೆ ಬಸ್ ಸ್ಟ್ಯಾಂಡ್ನಲ್ಲಿ ಬೂಟ್ ಪಾಲೀಶ್ ಮಾಡುವ ಮೂಲಕ, ಬೋಂಡ, ತರಕಾರಿ, ಚಹಾ ಮಾರುವ ಮೂಲಕ ಆಚರಿ ಸುತ್ತಿದ್ದು, ದೇಶದ ನಿರುದ್ಯೋಗಿ ಯುವಕರ ಬದುಕನ್ನು ಸರ್ಕಾರಕ್ಕೆ ತೋರಿಸಿಕೊಡುತ್ತಿದ್ದೇವೆ ಎಂದರು.
ಗೌರವಾನ್ವಿತ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಕೇಂದ್ರ ಸರ್ಕಾರಕ್ಕೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲು ನಿರ್ದೇಶನ ಕೊಡಬೇಕು ಎಂದರು.
Subscribe to Updates
Get the latest creative news from FooBar about art, design and business.