Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

January 13, 2026

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

January 10, 2026

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

January 9, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»28, 29 మత్తు 30రందు యాదగిరియల్లి ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ
Home

28, 29 మత్తు 30రందు యాదగిరియల్లి ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

Raghu ShettyBy Raghu ShettyDecember 15, 2025No Comments3 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
  1. 28, 29 మత్తు 30రందు యాదగిరియల్లి ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳ
ಶಿವಮೊಗ್ಗ-ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತು ವತಿಯಿಂದ 2025 ಡಿಸೆಂಬರ್ 28, 29, ಮತ್ತು 30 ರಂದು ಮೂರುದಿನಗಳ ಕಾಲ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನವನ್ನು ಯಾದಗಿರಿಯ ಜಿಲ್ಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವೈಜ್ಞಾನಿಕ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಡಿ.ರವಿಕುಮಾರ್ ಹೇಳಿದರು.
ಅವರು ಬಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಚಿರಾತನಾಡಿ ಡಾಲಿಕಲ್ ನಟರಾಜ್ -ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹೆಸರಾಂತ ವಿಜ್ಞಾನಿ ಇಸ್ರೋದ ಮಾಜಿ ಅಧ್ಯಕ್ಷರಾದ ಡಾ.ಎ.ಎಸ್.ಕಿರಣ್ ಕುಮಾರ್ ಹಾಗೂ ಜಸ್ಟೀಸ್ ನಾಗಮೋಹನ್ ದಾಸ್ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಪರಿಷತ್ತು ಆರಂಭವಾಗಿ ಐದು ವರ್ಷಗಳು ತುಂಬಿದ್ದು ಈಗಾಗಲೇ ರಾಜ್ಯದ ಉದ್ದಗಲಕ್ಕೂ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಶಾಖೆಗಳನ್ನು ಆರಂಭಿಸಿ ಈ ಮೂಲಕ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದೆ. ಈಗಾಗಲೇ ಐವತ್ತು ಸಾವಿರಕ್ಕೂ ಹೆಚ್ಚಿನ ಸದಸ್ಯರನ್ನು ಹೊಂದಿರುವ ಸಂಸ್ಥೆ ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸತ್ತ ಬಂದಿದೆ. ನಾಯಕತ್ವ ಕಾರ್ಯಾಗಾರ, ನಾನೂ ವಿಜ್ಞಾನಿ ಶಿಬಿರ, ವೃತ್ತಿ ನಿರತ ನೌಕರರಿಗೆ ವೃತ್ತಿ ಮಾರ್ಗದರ್ಶನ, ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಶ್ರಮಿಕ ವರ್ಗದವರಿಗೆ ಮೇ 1 ರಂದು ಕಾಯಕರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಪ್ರತಿ ವರ್ಷ ಡಿಸೆಂಬರ್ ನಲ್ಲಿ ಬರುವ ಕುವೆಂಪು ಜನ್ಮ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಸಾಧಕರಿಗೆ ಹೆಚ್.ಎನ್.ಪ್ರಶಸ್ತಿ, ಮಹಿಳೆಯರಿಗೆ ಚೈತನ್ಯಶ್ರೀ ಪ್ರಶಸ್ತಿಯನ್ನು ವಿಶೇಷ ಸಾಧಕ ಸೇವಾ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಇಸ್ರೋ. ಡಿ.ಆ‌ರ್.ಡಿ.ಓ, ನೆಹರೂ ತಾರಾಲಯ ಹಾಗೂ ವಿವಿಧ ವಿಜ್ಞಾನ ಸಂಸ್ಥೆಗಳು ವಿಜ್ಞಾನ ವಸ್ತು ಪ್ರದರ್ಶನ, ವಿವಿಧ ವಿಷಯಗಳ ಕುರಿತು ವಿಚಾರಗೋಷ್ಠಿಗಳು, ಸಾಂಸ್ಕೃತಿಕ ವೈವಿಧ್ಯ, ನಾಟಕ ಪ್ರದರ್ಶನ ಆಯೋಜಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಸಾರ್ವಜನಿಕರು ಭಾಗವಹಿಸುವ ಈ ಸಮ್ಮೇಳನದಲ್ಲಿ ಅನೇಕ ಸಚಿವರು, ಶಾಸಕರು, ವಿಜ್ಞಾನಿಗಳು ಆನೇಕ ಗಣ್ಯ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಮೊದಲ ವೈಜ್ಞಾನಿಕ ಸಮ್ಮೇಳನವು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ವಿಜ್ಞಾನಿ ಡಾ.ಎ.ಎಸ್.ಕಿರಣ್ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ನಂತರ ವಿವಿಧ ಜಿಲ್ಲೆಗಳಲ್ಲಿ ಸಮ್ಮೇಳನಗಳನ್ನು ಆಯೋಜಿಸಲಾಗುತ್ತ ಬರಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಕುಪ್ಪಳ್ಳಿಯಲ್ಲಿ ರಾಜ್ಯ ಮಟ್ಟದ ನಾನೂ ನಾಯಕಿ ಶಿಬಿರವನ್ನು ಮಹಿಳೆಯರಿಗಾಗಿ ಆಯೋಜನೆ ಮಾಡಲಾಗುತ್ತಿದೆ ಹೀಗೆ ಪರಿಷತ್ತು ನಿರಂತರವಾಗಿ ತೊಡಗಿಸಿಕೊಂಡು ಬಂದಿದೆ.
ಈ ಬಾರಿ ಪ್ರಗತಿಪರ ಚಿಂತಕ ಹಿರಿಯ ಪತ್ರಕರ್ತ ವಿಶ್ವರಾಧ್ಯ ಸತ್ಯಂಪೇಟೆ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ವೈಜ್ಞಾನಿಕ ಸಮ್ಮೇಳನಕ್ಕೆ ರಾಜ್ಯದ ಉದ್ದಗಲಕ್ಕೂ ಸಹಸ್ರಾರು ಸಂಖ್ಯೆಲ್ಲಿ ಜನರು ಭಾಗವಹಿಸಲಿದ್ದಾರೆ. ಎಂದು ಮಾತನಾಡಿದರು
ಈ ಸಮ್ಮೇಳನದಲ್ಲಿ ಅನೇಕ ಸಾಧಕರಿಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯ ಮಟ್ಟದ ವಿಶೇಷ “ಸಾಹಿತ್ಯ ಸೇವಾ ರತ್ನ” ಪ್ರಶಸ್ತಿಯನ್ನು ವಿ.ಟಿ.ಸ್ವಾಮಿ ಸಾಗರ ಇವರಿಗೆ, ಸಾಮಾಜಿಕ ಕ್ಷೇತ್ರದಲ್ಲಿ ಶಿವಮೊಗ್ಗದ ವಿರೂಪಾಕ್ಷ ಎಸ್.ಡಿ ಹೆಚ್.ಎನ್.ಪ್ರಶಸ್ತಿ ಹಾಗೂ ಮಹಿಳಾ ಕ್ಷೇತ್ರದಿಂದ ಸೊರಬದ ಪವಿತ್ರ ಎ.ವಿ -ಇವರಿಗೆ ಚೈತನ್ಯಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಸಮ್ಮೇಳನಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನಕ್ಕೆ ಭಾಗವಹಿಸುವಂತೆ ಪತ್ರಿಕಾ ಗೋಷ್ಠಿಯಲ್ಲಿ ಕೋರಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷರಾದ ಜಯಪ್ಪ ಸಿ ಹೆಬ್ಬಳಗೆರೆ ಉಪಾಧ್ಯಕ್ಷೆ ಸೀಮಾ ಸೆರಾವ್, ಸಾದಿಕ ಬಾನು, ಬಸವರಾಜ್ ಹಿರೆಮಠ, ಪ್ರಸನ್ನ ಟಿ. ಪ್ರಧಾನ ಕಾರ್ಯದರ್ಶಿ ಮೂರ್ತಿ ಸಿ, ಕಾರ್ಯದರ್ಶಿ ನಾಗೇಶ್ ಪಿ ರೇವಣಕರ್, ಕೋಶಾಧ್ಯಕ್ಷ ಎಸ್.ಡಿ.ಮೋಹನ್ రుమారా, సంఘటనా రాయదకి జంద్రనాయ్య. జిల్లా గంజాలక విరణవాక్ష ఎనో డి. ನಿರ್ದೇಶಕರಾದ ಮಮತಾ ಶೇಟ್, ವೆಂಕಟೇಶ್ ಚಂದಳ್ಳಿ, ನಂಜನಾಯಕ್, ಪರಮೇಶ್ ಎಚ್.ಎಂ. ದೇವೇಂದ್ರಪ್ಪ ತಾಲ್ಲೂಕು ಅಧ್ಯಕ್ಷರಾದ ನಾರಾಯಣ ಎಸ್. ಶಿವಮೊಗ್ಗ, ಬಿ ವರಲಕ್ಷ್ಮಿ.ಲೋಕೇಶ್ ಸಾಗರ, ಪವಿತ್ರ ಸೊರಬ, ಎಂ.ಈಶ್ವರಪ್ಪ ಭದ್ರಾವತಿ. ಮೊದಲಾದವರು ಉಪಸ್ಥಿತರಿದ್ದರು.
ಸಾಹಿತ್ಯ ಕ್ಷೇತ್ರದಲ್ಲಿ “ವಿಶೇಷ ಸೇವಾ ರತ್ನ ಪ್ರಶಸ್ತಿ” ವಿ.ಟಿ.ಸ್ವಾಮಿ ಸಾಗರ:
ಕಳೆದ ಮೂರುವರೆ ದಶಕಗಳಿಂದ ಶಿಕ್ಷಣ, ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಪತ್ರಿಕೋದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಬಂದಿರುವ ಇವರು. ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದು ಈಗಾಗಲೇ ಮೂವತ್ತೈದಕ್ಕೂ ಹೆಚ್ಚಿನ ಕೃತಿಗಳನ್ನು ಕನ್ನಡ ಸಾಹಿತ್ಯ ಸಾರಸ್ವತ ಲೋಕಕ್ಕೆ ಅರ್ಪಿಸಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿಯನ್ನು ಪಡೆದಿರುವ ಇವರು ಸ್ಥಳೀಯ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಅನೇಕ ಪತ್ರಿಕೆಗಳಲ್ಲಿ ವಿವಿಧ ವಿಷಯಗಳ ಕುರಿತು ನೂರಾರು ಲೇಖನಗಳನ್ನು ಪ್ರಕಟಿಸಿದ್ದಾರೆ. ಕವಿಗೋಷ್ಠಿ, ವಿವಿಧ ವಿಚಾರಗೋಷ್ಠಿ. ಸಮ್ಮೇಳನಗಳಲ್ಲಿ ವಿದ್ವತ್ ಪೂರ್ಣ ವಿಷಯಗಳನ್ನು ಮಂಡಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸಾಕಷ್ಟು ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನಮನ ಸೆಳೆದಿದ್ದಾರೆ. ಹಲವಾರು ಸಮ್ಮೇಳನಗಳನ್ನು ಹಾಗೂ ಉತ್ಸವಗಳನ್ನು ಆಯೋಜಿಸಿದ ಕೀರ್ತಿ ಇವರಿಗಿದೆ. ಶಿಕ್ಷಣ ಸಾಹಿತ್ಯ ಶಿಬಿರ, ಕಾರ್ಯಾಗಾರಗಳನ್ನು ಆಯೋಜನೆ ಮಾಡಿ ಮಾರ್ಗದರ್ಶನ ನೀಡುವ ಕೆಲಸವನ್ನು ಮಾಡುತ್ತ ಬಂದಿದ್ದಾರೆ.
ಹೆಚ್.ಎನ್.ಪ್ರಶಸ್ತಿ ಪುರಸ್ಕೃತ ವಿರೂಪಾಕ್ಷಪ್ಪ ಎಸ್.ಡಿ : ಶಿವಮೊಗ್ಗದ ನಿವಾಸಿಯಾದ ಎಸ್ ಡಿ ವಿರೂಪಾಕ್ಷಪ್ಪ
ನವರು ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ವ್ಯಾಪಾರ ವಹಿವಾಟುಗಳನ್ನು ನಡೆಸಿಕೊಂಡು ಬರುತ್ತಿದ್ದು ಜೊತೆಗೆ ಪರೋಪಕಾರಂ ತಂಡದಿಂದ ಸಾಮಾಜಿಕ ಕೆಲಸಗಳನ್ನು ಮಾಡುತ್ತ ಬಂದಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾರ್ಯ, ಅನಾಥ ಮಕ್ಕಳಿಗೆ ಸಹಾಯ.ಯೋಗ, ಮೂಢನಂಬಿಕೆ ಹಾಗೂ ವಿಜ್ಞಾನದ ಅರಿವಿನ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನ ನಡೆಸಿರುತ್ತಾರೆ. ಹೀಗೆ ಅನೇಕ ಸಾರ್ವಜನಿಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತ ಬಂದಿದ್ದು ನಂದಿ ಸಿಂಗರ್ಸ್ ಕಲಾ ವೇದಿಕೆ ಯಿಂದ ಸುಮಾರ್ ಇನ್ನೂರಕ್ಕೂ ಹೆಚ್ಚಿನ ಕಲಾವಿದರಿಗೆ ವೇದಿಕೆಗೆ ಅವಕಾಶವನ್ನು ಕಲ್ಪಿಸಿದ್ದಾರೆ.
ಚೈತನ್ಯಶ್ರೀ ಪ್ರಶಸ್ತಿ ಪುರಸ್ಕೃತ ಪವಿತ್ರ ಏ.ವಿ: ಸೊರಬದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪವಿತ್ರ ಅವರು ಉನ್ನತ ಶಿಕ್ಷಣವನ್ನು ಪಡೆದು ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಜೊತೆಗೆ ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಬಂದಿದ್ದು ನಿರೂಪಣೆ, ಹಿನ್ನೆಲೆ ಧ್ವನಿ, ಗಾಯನ ವಿವಿಧ ವಿಷಯಗಳ ಮಂಡನೆ, ಸಂಘಟನೆಯನ್ನು ಮಾಡುತ್ತಿದ್ದು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಉದಯ ಟಿವಿಯ ಅಕ್ಷರ ಮಾಲೆ ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ. ಹೀಗೆ ಇವರಿಗೆ ಅನೇಕ ಪ್ರಶಸ್ತಿ ಪುರಸ್ಕಾರಗಳು ಲಬಿಸಿವೆ.
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಜನಮನ ಕನ್ನಡ ರಕ್ಷಣಾ ವೇದಿಕೆಯಿಂದ ಕುವೆಂಪು ಜನ್ಮದಿನಾಚರಣೆ

December 30, 2025

ಸೀತಾಕಲ್ಯಾಣ ಶತಮಾನೋತ್ಸವ ಡಿ.07-ಜ.05 ರವರಗೆ

December 5, 2025

ಕಾಣೆಯಾದ ಬಾಲಕಿಯನ್ನು ಪತ್ತೆ ಹಚ್ಚಿದ ಸಾಕು ನಾಯಿ…

December 1, 2025
Top Posts

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025218 Views

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

November 16, 2025204 Views

ಗುರೋಜಿ ರಾವ್ 4 ವರ್ಷ ಕಠಿಣ ಸಜೆ ಮತ್ತು 20,000 ರೂ ದಂಡ -ಕಳ್ಳನ ಬಂಧನ ; ಲಕ್ಷಾಂತರ ರೂ. ವಶ

September 24, 2025204 Views

ಶಿವಮೊಗ್ಗ ಪೊಲೀಸರ ಕಾರ್ಯ ಶ್ಲಾಘನೀಯ

November 4, 2025185 Views
Don't Miss
ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

By Raghu ShettyJanuary 13, 20260

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ…

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

January 10, 2026

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

January 9, 2026

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

January 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಅರ್ಜಿ ಆಹ್ವಾನ

November 11, 20250 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.