Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ಘೋರ ದುರಂತ: ಹಸೆಮಣೆ ಏರಬೇಕಿದ್ದ ಯುವತಿ, ತಂದೆ-ತಾಯಿ ಆತ್ಮಹತ್ಯೆ
Home

ಘೋರ ದುರಂತ: ಹಸೆಮಣೆ ಏರಬೇಕಿದ್ದ ಯುವತಿ, ತಂದೆ-ತಾಯಿ ಆತ್ಮಹತ್ಯೆ

Tragic tragedy: Young woman, parents commit suicide as she was about to climb the mountain
Raghu ShettyBy Raghu ShettyJune 23, 2026Updated:June 23, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಮೈಸೂರು: ಇದೇ ತಿಂಗಳು ೨೪ ರಂದು ಅಂದ್ರೆ ನಾಡಿದ್ದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಮತ್ತು ಹೆತ್ತವರು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ ಯುವತಿಯನ್ನು ರಕ್ಷಿತಾ(೨೧) ಹಾಗೂ ಆಕೆಯ ತಂದೆ ಶಿವಣ್ಣ(೫೪), ತಾಯಿ ನಾಗರತ್ನ(೪೪) ಎಂದು ಗುರುತಿಸಲಾಗಿದೆ. ಈ ಮೂವರ ಸಾವಿಗೂ ಉಲ್ಲಾಸ್ ಗೌಡ ಕಾರಣನೆಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ.
ತಮ್ಮ ಗ್ರಾಮದ ಉಲ್ಲಾಸ್ ಗೌಡ ಯುವತಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಮೂವರು ವಿಷ ಸೇವಿಸಿ ಒಟ್ಟಿಗೆ ಪ್ರಾಣಬಿಟ್ಟಿದ್ದಾರೆ.
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್ ೨೪, ಅಂದರೆ ನಾಡಿದ್ದು ರಕ್ಷಿತಾ ವಿವಾಹ ನಡೆಯಬೇಕಿತ್ತು. ಆದರೆ ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದೆ.
ಮೂರು ತಿಂಗಳ ಹಿಂದೆ ಮೃತ ರಕ್ಷಿತಾಗೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಅವರ ನಿಶ್ಚಿತಾರ್ಥದ ಸಮಯದಲ್ಲಿಯೂ ಉಲ್ಲಾಸ್ ಗೌಡ ಓಡಾಡಿಕೊಂಡಿದ್ದ. ಇದೇ ತಿಂಗಳ ೨೩-೨೪ರಂದು ಮದುವೆ ನಿಗದಿಯಾಗಿತ್ತು. ಆದರೆ ಒಂದು ವಾರದ ಹಿಂದಷ್ಟೇ ಉಲ್ಲಾಸ್ ರಕ್ಷಿತಾಳನ್ನು ಲವ್ ಮಾಡುತ್ತಿದ್ದೇನೆ, ಮದುವೆ ಮಾಡಿಕೊಡಿ ಎಂದು ಆಕೆಯ ಪೋಷಕರ ಬಳಿ ಕೇಳಿದ್ದ. ಆಗ ಬೈದು ಬುದ್ದಿಮಾತು ಹೇಳಿದ್ದರು. ಅಷ್ಟಕ್ಕೂ ಕೇಳದೇ ಗಲಾಟೆ ಮಾಡಿದ್ದ. ರಾತ್ರಿ ಗ್ರಾಮದಲ್ಲಿ ಹಿರಿಯರನ್ನು ಸೇರಿಸಿ ನ್ಯಾಯ ಪಂಚಾಯತಿ ಮಾಡಿದ್ದರು.
ಅದಾದ ಬಳಿಕ ಈ ಹಿಂದೆ ರಕ್ಷಿತಾ ತನಗೆ ಕಳುಹಿಸಿದ್ದ ಕೆಲವು ಮೆಸೇಜ್ ಹಾಗೂ ಫೋಟೋಗಳನ್ನು ಇಟ್ಟುಕೊಂಡು ಆಕೆಗೆ ನಿರಂತರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡುತ್ತಿದ್ದ. ಅಷ್ಟಕ್ಕೇ ನಿಲ್ಲಿಸದೇ ರಕ್ಷಿತಾಳ ಮದುವೆ ನಿಶ್ಚಯವಾಗಿದ್ದ ಯುವಕನಿಗೂ ಆ ಮೆಸೇಜ್ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಇದರಿಂದ ಅವಮಾನಕ್ಕೊಳಗಾದ ಕುಟುಂಬಸ್ಥರು ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ವರುಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,272 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

By Raghu ShettyJuly 28, 20260

​ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ…

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

July 24, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.