ಶಿವಮೊಗ್ಗ : ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆಯುವ ಮೂಲಕ ತೀರ್ಥಹಳ್ಳಿಯ ಅನಘ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ತೀರ್ಥಹಳ್ಳಿ ವಾಗ್ದೇವಿ ಶಿಕ್ಷಣ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಅನಘ ಕೆ ಎಸ್ ೬೨೫/೬೨೪ ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಮೇಲಿನ ಕಡಗೋಡುವಿನ ಮಂಗಳ ಮತ್ತು ಶಿವಕುಮಾರ ದಂಪತಿಗಳ ಪುತ್ರಿ ಅನಘ ಈ ಸಾಧನೆ ಮಾಡಿದ್ದಾಳೆ.
