Author: Raghu Shetty

ಶಿವಮೊಗ್ಗ; ಏಪ್ರಿಲ್-18 ; (ಕರ್ನಾಟಕ ವಾರ್ತೆ): ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಶಿವಮೊಗ್ಗ ನಗರದ ದೈನಂದಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಅಥವಾ ಯಾವುದೇ ಸಮಸ್ಯೆಯಾದಲ್ಲಿ ತಮ್ಮ ವಾರ್ಡ್ ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ತಮ್ಮ ದೂರಗಳನ್ನು ನೀಡಲು ವಾರ್ಡ್ವಾರು ಅಭಿಯಂತರರ ಹಾಗೂ 24/7 ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ದೂರವಾಣಿ ಸಂಖ್ಯೆಯನ್ನು ಪ್ರಕಟಗೊಳಿಸಿದೆ. ಸಾರ್ವಜನಿಕರು ಈ ಕೆಳಕಂಡ ಅಭಿಯಂತರರ ಹಾಗೂ ಸಿಬ್ಬಂದಿಗಳ ದೂರವಾಣಿಗೆ ಕರೆ ಮಾಡಿ ದೂರನ್ನು ಸಲ್ಲಿಸುವಂತೆ ಹಾಗೂ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಶಿವಮೊಗ್ಗ ನಗರ ಕಾರ್ಯಪಾಲಕ ಅಭಿಯಂತರರು ರಾಘವೇಂದ್ರ ಡಿ.-9480689673, ಸಹಾಯಕ ಕಾರ್ಯಪಾಲಕ ಅಭಿಯಂತರರು ಜೀವನ್ ಯು.-9686731931. ಸಹ್ಯಾದ್ರಿನಗರ, ಅಶ್ವಥನಗರ, ಮಲ್ಲೇಶ್ವರನಗರ, ಗುಡ್ಡೆಕಲ್ಲು, ಗಾಂಧಿನಗರ, ರವೀಂದ್ರನಗರ, ಬಸವನಗುಡಿ, ಟ್ಯಾಂಕ್‌ಮೊಹಲ್ಲಾ, ಅರಮನೆ, ವಿದ್ಯಾನಗರ, ಹರಿಗೆ, ಮಲವಗೊಪ್ಪ, ಶರಾವತಿನಗರ, ಹೊಸಮನೆ, ದುರ್ಗಿಗುಡಿ, ಗಾಂಧೀಬಜಾರ್ (ಪೂರ್ವ ಮತ್ತು ಪಶ್ಚಿಮ) – ಸಹಾಯಕ ಅಭಿಯಂತರರು ಜೀವನ್ ಯು.-9686731931.…

Read More

ಶಿವಮೊಗ್ಗ : ಬೆಂಗಳೂರು-ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆಯನ್ನು ಮೇ 1ರಿಂದ ಸ್ಥಗಿತಗೊಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸೇವೆ ಮುಂದುವರಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಪತ್ರ ಬರೆದಿರುವ ಅವರು, ಈ ಮಾರ್ಗವು ಮಲೆನಾಡು ಭಾಗದ ಜನರಿಗೆ ಪ್ರಮುಖ ವಾಯು ಸಂಪರ್ಕವಾಗಿದ್ದು, ಸೇವೆ ನಿಲ್ಲಿಸಿದರೆ ಲಕ್ಷಾಂತರ ಜನರಿಗೆ ತೊಂದರೆ ಉಂಟಾಗುತ್ತದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವು ಸುಮಾರು 450 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಕಳೆದ ಎರಡು ವರ್ಷಗಳಲ್ಲಿ 2400ಕ್ಕೂ ಹೆಚ್ಚು ವಿಮಾನ ಸಂಚಾರಗಳನ್ನು ನಿರ್ವಹಿಸಿ, 1 ಲಕ್ಷಕ್ಕೂ ಅಧಿಕ ಪ್ರಯಾಣಿಕರಿಗೆ ಸೇವೆ ನೀಡಿದೆ. ಇದು ಯೋಜನೆಯ ಯಶಸ್ಸನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. ಆದರೆ ಪೈಲಟ್ ಕೊರತೆ ಹಾಗೂ ನವೀಕರಿಸದ ಒಪ್ಪಂದದ ಹಿನ್ನೆಲೆಯಲ್ಲಿ ಇಂಡಿಗೋ ಸಂಸ್ಥೆ ಈ ಸೇವೆಯನ್ನು ಸ್ಥಗಿತಗೊಳಿಸಲು ಮುಂದಾಗಿದೆ. ಆ.31-2025ರಲ್ಲಿ ಮುಕ್ತಾಯವಾದ ಒಪ್ಪಂದದ ನಂತರವೂ ಆರು ತಿಂಗಳು ಸೇವೆ ಮುಂದುವರಿದಿದೆ.…

Read More

ಶಿವಮೊಗ್ಗ : ಮಧ್ಯಪ್ರಾಚ್ಯದ ರಾಷ್ಟ್ರಗಳಾದ ಇಸ್ರೇಲ್ ಮತ್ತು ಇರಾನ್ ನಡುವೆ ಉಂಟಾಗುವ ಉದ್ವಿಗ್ನತೆ ಅಥವಾ ಯುದ್ಧವು ಜಗತ್ತಿನ ಅನೇಕ ದೇಶಗಳ ಮೇಲೆ ಪರಿಣಾಮ ಬೀರುತ್ತದೆ. ವಿಶೇಷವಾಗಿ ಇಂಧನ ಸಂಪನ್ಮೂಲಗಳಾದ ಗ್ಯಾಸ್ ಸರಬರಾಜಿನ ಮೇಲೆ ಇದರ ಪರಿಣಾಮ ಗಂಭೀರವಾಗಿರುತ್ತದೆ. ನಗರ ಪ್ರದೇಶಗಳಲ್ಲಿ ಇದು ಇನ್ನಷ್ಟು ತೀವ್ರವಾಗಿದೆ. ಮಧ್ಯಪ್ರಾಚ್ಯವು ಜಗತ್ತಿನ ಪ್ರಮುಖ ತೈಲ ಮತ್ತು ನೈಸರ್ಗಿಕ ಗ್ಯಾಸ್ ಉತ್ಪಾದನಾ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಯುದ್ಧ ಅಥವಾ ಅಶಾಂತಿ ಉಂಟಾದರೆ, ಗ್ಯಾಸ್ ಉತ್ಪಾದನೆ ಮತ್ತು ಸಾಗಣೆ ವ್ಯತ್ಯಯಗೊಳ್ಳುತ್ತದೆ. ಇದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಗ್ಯಾಸ್ ಕೊರತೆ ಉಂಟಾಗುತ್ತದೆ. ಶಿವಮೊಗ್ಗ ನಗರಗಳಲ್ಲಿ ಗೃಹ ಬಳಕೆಗೆ ಬೇಕಾದ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಉಂಟಾಗುತ್ತದೆ. ಜನರು ದೀರ್ಘ ಸಾಲಿನಲ್ಲಿ ನಿಲ್ಲಬೇಕಾಗುತ್ತದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸಣ್ಣ ಉದ್ಯಮಗಳು ತಮ್ಮ ಕಾರ್ಯಗಳನ್ನು ಕಡಿಮೆ ಮಾಡಿಕೊಂಡಿವೆ ಸುಮಾರು 30 ರಿಂದ 30 ಸ್ಥಗಿತಗೊಂಡಿವೆ. ಇದರ ಜೊತೆಗೆ, ಗ್ಯಾಸ್ ಬೆಲೆ ಏರಿಕೆ ಕೂಡ ದೊಡ್ಡ ಸಮಸ್ಯೆಯಾಗುತ್ತದೆ. ಸಾಮಾನ್ಯ ಜನರ ಜೀವನ ವೆಚ್ಚವನ್ನು ಹೆಚ್ಚಿಸುತ್ತದೆ. ಇದರಿಂದ ನಗರಗಳಲ್ಲಿ…

Read More

ಶಿವಮೊಗ್ಗ, : ಜಿಲ್ಲೆಯ ತೀರ್ಥಹಳ್ಳಿ ಹಾಗೂ ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ–52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶಿಸಿದೆ. ಕಳೆದ ಮಳೆಗಾಲದಲ್ಲಿ ಈ ರಸ್ತೆಯ ಹೇರ್‌ಪಿನ್ ತಿರುವಿನಲ್ಲಿ ಭೂಕುಸಿತ ಉಂಟಾಗಿದ್ದರಿಂದ, ತಡೆಗೋಡೆ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿತ್ತು. ಏಪ್ರಿಲ್ 9ರಂದು ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಸುಮಾರು 12 ಮೀಟರ್ ಎತ್ತರದಿಂದ ಮತ್ತೊಮ್ಮೆ ಭೂಕುಸಿತ ಉಂಟಾಗಿ, ಕಾಂಕ್ರೀಟ್ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಇದರಿಂದ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಿರುವುದರಿಂದ, ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ಮಾರ್ಗವನ್ನು ಬಂದ್ ಮಾಡಲಾಗಿದೆ. ಪರ್ಯಾಯ ಮಾರ್ಗಗಳು: ತೀರ್ಥಹಳ್ಳಿ → ಕುಂದಾಪುರ (ಭಾರಿ ವಾಹನಗಳು): ತೀರ್ಥಹಳ್ಳಿ → ರಾವೆ → ಕಾನುಗೋಡು → ನಗರ → ಕೊಲ್ಲೂರು → ಕುಂದಾಪುರ ಯಡೂರು / ಮಾಸ್ತಿಕಟ್ಟೆ ಮಾರ್ಗ: ತೀರ್ಥಹಳ್ಳಿ → ಕಾನುಗೋಡು → ನಗರ → ಕೊಲ್ಲೂರು → ಕುಂದಾಪುರ…

Read More

ಶಿವಮೊಗ್ಗ: 2026ನೇ ಸಾಲಿನ ಪಿಯುಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಶೇಕಡಾ 87.62% ಫಲಿತಾಂಶ ಸಾಧಿಸಿದ್ದಾರೆ. ಜಿಲ್ಲೆಯಲ್ಲಿ 30 ವಿದ್ಯಾರ್ಥಿಗಳು 590 ಅಂಕಗಳಿಗಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದು, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದ ಉತ್ತಮ ಫಲಿತಾಂಶವಾಗಿದೆ. ಕಾಲೇಜುಗಳಲ್ಲಿ ಸಾಧನೆ: ಜಿಲ್ಲೆಯಲ್ಲಿ ಸುಮಾರು 15 ಕಾಲೇಜುಗಳು 100% ಫಲಿತಾಂಶ ಸಾಧಿಸಿರುವುದು ವಿಶೇಷವಾಗಿ ಗಮನ ಸೆಳೆದಿದೆ ಜಿಲ್ಲೆಯಲ್ಲಿ ಕಲಾ ವಿಭಾಗದಲ್ಲಿ ಡಿವಿಎಸ್ ಸ್ವತಂತ್ರ ಪದವಿಪೂರ್ವ ಕಾಲೇಜಿನ ಬೃಂದಾ 590, ಮಾಳೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಸಂಜನ 582, ಶಿಕಾರಿಪುರದ ಬನಸಿರಿ ಲಯನ್ಸ್ ಪದವಿಪೂರ್ವ ಕಾಲೇಜಿನ ಸಂಗೀತಾ ಕೆ.ಎಂ. 582, ಗುತ್ಯಮ್ಮ 582 ಅಂಕ ಗಳಿಸಿದ್ದಾರೆ. ———————————————————————————————– ಆಯನೂರಿನ ಮಹಿನ್ ಖಾನ್ ಅಫ್ರಿದಿ ಜಿಲ್ಲೆಗೆ ಪ್ರಥಮ ರ‍್ಯಾಂಕ್ ಶಿವಮೊಗ್ಗ : ತಾಲ್ಲೂಕಿನ ಆಯನೂರು ಗ್ರಾಮದ ವಿದ್ಯಾರ್ಥಿನಿ ಮಹಿನ್ ಖಾನ್ ಅಫ್ರಿದಿ ಅವರು 600ರಲ್ಲಿ 596 ಅಂಕಗಳನ್ನು ಪಡೆದು ಜಿಲ್ಲೆಯ ಪ್ರಥಮ ರ‍್ಯಾಂಕ್ ಗಳಿಸಿ ಹೆಮ್ಮೆಯ ಸಾಧನೆ ಮಾಡಿದ್ದಾರೆ. ಪ್ರಸ್ತುತ ಅವರು ನಗರದ ಪೇಸ್ ಕಾಲೇಜಿನಲ್ಲಿ…

Read More

ಹುಲಿಕಲ್ ಘಾಟಿ: ಪ್ರಸಿದ್ಧ ಹುಲಿಕಲ್ ಘಾಟಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಭೀಕರ ಮಣ್ಣು ಕುಸಿತದ ದುರಂತ ಸಂಭವಿಸಿದೆ. ಘಟನೆ ಶ್ರೀ ಚಂಡಿಕಾಂಬಾ ದೇವಸ್ಥಾನದ ಸಮೀಪದ ಹೇರ್‌ಪಿನ್ ತಿರುವಿನಲ್ಲಿ ನಡೆದಿದೆ. ಸ್ಥಳೀಯ ಮಾಹಿತಿ ಪ್ರಕಾರ, ಕಾಮಗಾರಿಯ ಸಮಯದಲ್ಲಿ ಏಕಾಏಕಿ ಮೇಲ್ಭಾಗದಿಂದ ಭಾರೀ ಪ್ರಮಾಣದ ಮಣ್ಣು ಕಾರ್ಮಿಕರ ಮೇಲೆ ಜರಿದು ಬಿದ್ದಿದೆ. ಪರಿಣಾಮವಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಣ್ಣಿನಡಿ ಇನ್ನೂ ಕೆಲವರು ಸಿಲುಕಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತರ ವಿವರಗಳು: ರಾಘವೇಂದ್ರ, ತಂದೆ ಕೃಷ್ಣಮೂರ್ತಿ, 37 ವರ್ಷ, ಚಕ್ಕಾರು ನಗರ ರಾಜು, 30 ವರ್ಷ, ನೀಲವಗಲ್ಲು, ಹಾವೇರಿ ತಾಲೂಕು ಶಬ್ಬೀರ್, 40 ವರ್ಷ, ನೆಲವಗಲ್ಲು ಗಂಭೀರವಾಗಿ ಗಾಯಗೊಂಡವರು: ಸುಮಂತ ಮತ್ತು ಪರಮೇಶ್. ಘಟನೆಯ ಮಾಹಿತಿ ತಕ್ಷಣ ನೀಡಲಾಯಿತು, ಸ್ಥಳಕ್ಕೆ ನಗರ ಪೊಲೀಸ್ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರವಾಗಿ ಮುಂದುವರಿಯುತ್ತಿದೆ. ಈ ನಡುವೆ ಓರ್ವ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಯ ಹಿನ್ನೆಲೆ: ಹುಲಿಕಲ್ ಘಾಟಿಯ ಈ ಹೇರ್‌ಪಿನ್ ತಿರುವಿನಲ್ಲಿ ಇತ್ತೀಚೆಗೆ ನಿರಂತರವಾಗಿ…

Read More

‘ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಇವತ್ತು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗುತ್ತಿದೆ. ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಲೋಕಾಯುಕ್ತ ತಂಡಗಳು ಕಾರ್ಯಾಚರಣೆ ಕೈಗೊಂಡಿವೆ. ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿರುವ ಶೋಭಾ ಅವರ ನಿವಾಸ ಹಾಗೂ ಸಾಗರ ತಾಲೂಕಿನ ಅಚಾಪುರ ಬಳಿ ಇರುವ ಅವರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಶೋಭಾ ಅವರ ಆಪ್ತ ಸಹಾಯಕನ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ದಾಳಿಯಲ್ಲಿ ಶಿವಮೊಗ್ಗ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನೊಳಗೊಂಡ ಐದು ಪ್ರತ್ಯೇಕ ತಂಡಗಳು ಪಾಲ್ಗೊಂಡಿವೆ.

Read More

ಶಿವಮೊಗ್ಗ : ಡಸ್ಟರ್ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಗಾಬರಿಗೊಂಡ ಚಾಲಕ ವಾಹನವನ್ನ ಎಡಗಡೆ ತಿರುಗಿಸಿದ ಪರಿಣಾಮ ದರೆಬೈಲಿಗೆ ಗುದ್ದಿ ಸಂಪೂರ್ಣ ಸುಟ್ಟುಹೋಗಿರುವ ಘಟನೆ ಇಂದು ಮಧ್ಯಾಹ್ನ ತೀರ್ಥಹಳ್ಳಿಯ ನಾಲೂರು ಕೋಳಿಗೆ ಬಳಿ ನಡೆದಿದೆ. ಉಡುಪಿಯಿಂದ ಸೊರಬಕ್ಕೆ ತೆರಳುತ್ತಿದ್ದ ಡಸ್ಟರ್ ಕಾರೊಂದು ಆಗುಂಬೆ, ಮೇಘರವಳ್ಳಿಯಿಂದ ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಬಳಿ ಬರುತ್ತಿದ್ದಂತೆ ಡಸ್ಟರ್ ನ ಇಂಜಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ದರೆಬೈಲಿಗೆ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಕಾರು ನೋಡನೋಡುತ್ತಿದ್ದಂತೆಯೇ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನೆ ಸಂಭವಿಸಿದಾಗ ಕಾರಿನಲ್ಲಿ ಚಾಲಕ ಒಬ್ಬರೇ ಇದ್ದು, ಕೂಡಲೇ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನನ್ನ ಸೊರಬದ ಸುಹೇಲ್ ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಶಿವಮೊಗ್ಗ: ಗಲಾಟೆ ಬಿಡಿಸಲು ಹೋಗಿ ಕೊಲೆಯಾಗಿದ್ದ ಶಾಲಾ ಬಾಲಕ ಸಂಕೇತ್‌ನ ಸಮಾಧಿಗೆ ಹಾನಿ ಮಾಡಲಾಗಿದೆ. ಕಳೆದ ಫೆಬ್ರವರಿ 24ರಂದು ಊರಗಡೂರಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆಯಾಗಿತ್ತು. ಸಮೀಪದ ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ಸಂಕೇತ್‌ನ ಅಂತ್ಯೆಕ್ರಿಯೆ ನೆರವೇರಿಸಲಾಗಿತ್ತು. ಸಂಕೇತ್‌ ಸಮಾಧಿಗೆ ಕಟ್ಟೆ ನಿರ್ಮಿಸಿ ಫೋಟೊ ಅಳವಡಿಸಲಾಗಿತ್ತು. ಮಂಗಳವಾರ ಸಂಜೆ ಸಮಾಧಿಯ ಒಂದು ಭಾಗ ಒಡೆದಿರುವುದು ಗೊತ್ತಾಗಿದೆ. ಇದರಿಂದ ಬೇಸರ ಮತ್ತು ಆಕ್ರೋಶಗೊಂಡ ಸಂಕೇತ್‌ನ ಪೋಷಕರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಇನ್ನು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿಂದೂ ರುದ್ರಭೂಮಿಯಲ್ಲಿ ಮಾರ್ಚ್‌ 26ರಂದು ಸಂಕೇತ್‌ ಸಮಾಧಿಗೆ ಕಟ್ಟೆ ಕಟ್ಟಿಸಲಾಗಿತ್ತು. ಕುಟುಂಬದವರು ಸುತ್ತಲು ಗ್ರಾನೈಟ್‌ ಕಲ್ಲು ಹಾಕಿಸಿದ್ದರು. ಮುಂಭಾಗದಲ್ಲಿ ದೀಪ ಇಡಲು ವ್ಯವಸ್ಥೆ ಮಾಡಿದ್ದರು. ಹಿಂಬದಿಯಲ್ಲಿ ಸಂಕೇತ್‌ನ ಫೋಟೊ ಇರಿಸಲಾಗಿತ್ತು. ಕುಟುಂಬದವರು ಪ್ರತಿ ಸಂಜೆ ಸಮಾಧಿ ಸ್ಥಳಕ್ಕೆ ಹೋಗಿ ಪೂಜೆ ಮಾಡಿ ಬರುತ್ತಿದ್ರು, ಸಂಕೇತ್‌ಗೆ ಬುಧವಾರ ಅಂದರೆ ಪ್ರೀತಿ. ಆತ ಪ್ರತಿ ಬುಧವಾರ ಬೆಳಗ್ಗೆ ಬೇಗ ಎದ್ದು…

Read More

ಶಿವಮೊಗ್ಗ, :ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ ಸಂಭವಿಸಿದ ಪಶುವೈದ್ಯೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖಾ ವರದಿ ಅರಣ್ಯ ಸಚಿವರಿಗೆ ಸಲ್ಲಿಸಲಾಗಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಶಿವಮೊಗ್ಗ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ. ಹನುಮಂತಪ್ಪ ತಿಳಿಸಿದ್ದಾರೆ. ,ಮಾ. 20ರ ರಾತ್ರಿ ಥರ್ಮಲ್ ಕ್ಯಾಮರಾ ಮೂಲಕ ಪ್ರಾಣಿಗಳ ತಾಪಮಾನ ಪರಿಶೀಲನೆ ನಡೆಸುವ ವೇಳೆ ನೀರಾನೆ ದಾಳಿ ಸಂಭವಿಸಿದ್ದು, ಈ ದುರಂತದಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟಿರುವುದು ದುಃಖಕರ ಘಟನೆ ಎಂದು ಪತ್ರಿಕೆಗೆ ಶನಿವಾರ ಮಾಹಿತಿ ನೀಡಿದರು. ಘಟನೆ ಕುರಿತು ಸಂಪೂರ್ಣ ಪರಿಶೀಲನೆ ನಡೆಸಿ, ಎಲ್ಲಾ ಅಂಶಗಳನ್ನು ಒಳಗೊಂಡ ಸಮಗ್ರ ವರದಿ ಸಿದ್ಧಪಡಿಸಿ ಅರಣ್ಯ ಸಚಿವರಿಗೆ ಸಲ್ಲಿಸಲಾಗಿದೆ. ವರದಿಯಲ್ಲಿ ಘಟನೆ ಸಂಭವಿಸಿದ ಸಂದರ್ಭ, ಭದ್ರತಾ ವ್ಯವಸ್ಥೆ ಹಾಗೂ ಸಿಬ್ಬಂದಿ ಕಾರ್ಯವಿಧಾನದ ಬಗ್ಗೆ ವಿವರವಾಗಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಮೃಗಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಹೆಚ್ಚುವರಿ ಭದ್ರತಾ ಮಾರ್ಗಸೂಚಿಗಳು, ತರಬೇತಿ ಹಾಗೂ ತಂತ್ರಜ್ಞಾನ…

Read More