Author: Raghu Shetty

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಮೂಲಗಳ ಪ್ರಕಾರ, ವಿಶ್ವನಾಥ್ ಮೇಲೆ ಸುಮಾರು 6 ರಿಂದ 7 ಮಂದಿಯ ತಂಡ ಏಕಾಏಕಿ ದಾಳಿ ನಡೆಸಿದ್ದು, ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದೆ ಎನ್ನಲಾಗಿದೆ. ದಾಳಿಕೋರರು ವಿಶ್ವನಾಥ್ ಅವರನ್ನು ಬೆನ್ನಟ್ಟಿ ಹಿಡಿದು ತಲ್ವಾರ್ ಹಾಗೂ ಇತರೆ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಿಂದ ತೀವ್ರ ರಕ್ತಸ್ರಾವಗೊಂಡ ವಿಶ್ವನಾಥ್ ಅವರನ್ನು ಸ್ಥಳೀಯರು ಮತ್ತು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರು ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ವಿಶ್ವನಾಥ್ ಭದ್ರಾವತಿ ಪ್ರದೇಶದಲ್ಲಿ ಇಸ್ಪೀಟ್ ಕಿಂಗ್ ಎಂದೇ ಪರಿಚಿತರಾಗಿದ್ದು, ಇಸ್ಪೀಟ್ ಮತ್ತು ಇತರೆ ವಿಚಾರಗಳಿಗೆ ಸಂಬಂಧಿಸಿದ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆ…

Read More

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಕ್ಷುಲ್ಲಕ ಗಲಾಟೆ ವಿಕೋಪಕ್ಕೆ ತಿರುಗಿದೆ. ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಲಾಗಿದೆ. ನಗರದ ಅಣ್ಣಾನಗರದ 6ನೇ ಕ್ರಾಸ್‌ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಇಮ್ತಿಯಾಜ್ (37) ಹಲ್ಲೆಗೊಳಗಾದನು. ಸ್ನೇಹಿತರ ಮಧ್ಯೆ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ನಾಲ್ಕೈದು ಯುವಕರಿದ್ದ ಗುಂಪು ಇಮ್ತಿಯಾಜ್ ಅವರನ್ನು ಓಡಿಸಿಕೊಂಡು ಬಂದು ಹಲ್ಲೆ ನಡೆಸಿದೆ. ಆತನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ ಎಂದ ಆರೋಪಿಸಲಾಗಿದೆ. ತೀವ್ರ ಗಾಯಗೊಂಡಿರುವ ಇಮ್ತಿಯಾಜ್‌ನನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಮ್ತಿಯಾಜ್‌ಗೆ ಚಿಕಿತ್ಸೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದವರಿಗೆ ಶೋಧ ಕಾರ್ಯ ನಡೆಯುತ್ತಿದೆ.

Read More

ಶಿವಮೊಗ್ಗ : ಶರಾವತಿ ಹಿನ್ನೀರು ಮಟ್ಟ ಗಣನೀಯ ಕುಸಿತವಾದ ಕಾರಣ ಸೋಮವಾರದಿಂದ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಸಿರುಮಕ್ಕಿಯಲ್ಲಿ ಮಳೆಯ ಕೊರತೆಯಿಂದ ಹಿನ್ನೀರಿನ ಮಟ್ಟ ಕುಸಿತವಾಗಿದೆ. ಹೀಗಾಗಿ ಮುಪ್ಪಾನೆ ಬಳಿಕ ಇದೀಗ ಹಸಿರುಮಕ್ಕಿ ಲಾಂಚ್ ಕೂಡ ಸ್ಥಗಿತವಾಗಿದೆ. ಹಸಿರುಮಕ್ಕಿ ಸಾಗರ- ಕೊಲ್ಲೂರು ಮಧ್ಯೆ ಪ್ರಮುಖ ಮಾರ್ಗವಾಗಿದೆ. ಹೊಸನಗರ ತಾಲೂಕಿನ ಹಲವು ಊರುಗಳಿಗೆ ಹೋಗಲು ಈ ಮಾರ್ಗ ಅನುಕೂಲವಾಗಿತ್ತು. ಸಾವಿರಾರು ಜನರು ದಿನನಿತ್ಯ ಈ ಮಾರ್ಗ ಬಳಸುತ್ತಾರೆ. ಲಾಂಚ್ ಸ್ಥಗಿತದ ಕಾರಣದಿಂದ ಇದೀಗ ಹೊಸನಗರ- ನಗರ-ನಿಟ್ಟೂರು ಮಾರ್ಗವಾಗಿ ಜನರ ಓಡಾಟ ನಡೆಸಬೇಕಾಗಿದೆ.

Read More

ಶಿಕಾರಿಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಂತರವಾಗಿ ರೈತರ ವಿರುದ್ದ ಗದಾಪ್ರಹಾರದಲ್ಲಿ ನಿರತವಾಗಿದ್ದು, ವಿದ್ಯುತ್‌ ಖಾಸಗೀಕರಣ,ಸೀಮಿತ ಗೊಬ್ಬರ ವಿತರಣೆ,ಸಾಗುವಳಿದಾರರ ಒಕ್ಕಲೆಬ್ಬಿಸುವಿಕೆ ಮೂಲಕ ರೈತ ನೆಮ್ಮದಿಯಿಂದ ಬದುಕಲು ಸಾದ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಈರಣ್ಣ ಪ್ಯಾಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತಾ.ರೈತ ಸಂಘದ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ನಡೆದ ಪ್ರತಿಭಟನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಅತಿವೃಷ್ಠಿ ಅನಾವೃಷ್ಟಿ ಜತೆಗೆ ರೈತರ ಉತ್ಪನ್ನಗಳ ಬೆಲೆ ಕುಸಿತದಿಂದ ಪ್ರತಿ ವರ್ಷ ರೈತರ ಬದುಕು ತೀವ್ರ ಸಂಕಷ್ಟದಲ್ಲಿದ್ದು ಇದರೊಂದಿಗೆ ಪದೇಪದೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ನೀತಿಯಿಂದ ರೈತರು ಕಂಗೆಟ್ಟಿದ್ದಾರೆ ಎಂದು ತಿಳಿಸಿದ ಅವರು ಇದೀಗ ವಿದ್ಯುತ್ ಖಾಸಗೀಕರಣದ ಸಂಚು ರೂಪಿಸಿರುವ ರಾಜ್ಯ ಸರ್ಕಾರ  ರೈತರಿಗೆ ದ್ರೋಹ ಬಗೆಯುವ ಸಿದ್ದತೆಯಲ್ಲಿದೆ.ಪ್ರತಿ ಬೋರ್ವೆಲ್‌ ಗೆ ಮೀಟರ್ ಅಳವಡಿಸುವ ಕುತಂತ್ರ ಸರ್ಕಾರದಿಂದ ನಡೆಯುತ್ತಿದೆ ಸರ್ಕಾರದ ನೀತಿಯನ್ನು ರೈತರು ಒಗ್ಗಟ್ಟಿನಿಂದ ಖಂಡಿಸಿ ಬೀದಿಗಿಳಿದು ಹೋರಾಟ ಹಮ್ಮಿಕೊಳ್ಳುವುದು…

Read More

ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಬಳಿ ಕಾಮಗಾರಿ ವೇಳೆ ಕೈರ್ನ್ (ಕ್ರೇನ್) ಸಿಕ್ಕಿ ಕೂಲಿ  ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಳಿಗುಡಿ ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ನಾಗೇಶ್ ಅವರು ದೇವಸ್ಥಾನದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ನಿನ್ನೆ ಶಿವಮೊಗ್ಗಕ್ಕೆ ಬಂದಿದ್ದರು. ಇಂದು ಕೆಲಸ ಮಾಡುವ ವೇಳೆ ಕ್ರೇನ್‌ಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಕುರಿತು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡೇನ್ ಗ್ಯಾಸ್ ರಿಫಿಲ್ಲಿಂಗ್ ಘಟಕಕ್ಕೆ ತೆರಳುತ್ತಿದ್ದ ಎಲ್‌ಪಿಜಿ (LPG) ಗ್ಯಾಸ್ ತುಂಬಿದ ಟ್ಯಾಂಕರ್ ಲಾರಿಯೊಂದು ನಗರದ ಡೈರಿ ಸರ್ಕಲ್ ಸಮೀಪ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಬುಧವಾರ ನಡೆದಿದೆ. ಗ್ಯಾಸ್ ತುಂಬಿದ ಟ್ಯಾಂಕರ್ ಸಿಲುಕಿರುವುದರಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಗಳೂರಿನಿಂದ ಇಂಡೇನ್ ಗ್ಯಾಸ್ ರಿಫಿಲ್ಲಿಂಗ್ ಘಟಕದತ್ತ ಸಾಗುತ್ತಿದ್ದ ಟ್ಯಾಂಕರ್, ಡೈರಿ ಸರ್ಕಲ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಮಳೆಯಿಂದ ಉಂಟಾದ ಕೆಸರಿನಲ್ಲಿ ಸಿಲುಕಿಕೊಂಡಿದೆ. ಟ್ಯಾಂಕರ್ ಅನ್ನು ಹೊರತೆಗೆಯಲು ಕ್ರೇನ್ ಬಳಸಿ ಪ್ರಯತ್ನಿಸಿದರೂ ಆರಂಭಿಕ ಹಂತದಲ್ಲಿ ಯಶಸ್ಸು ದೊರಕಿಲ್ಲ ಎಂದು ತಿಳಿದುಬಂದಿದೆ. ಸುರಕ್ಷತಾ ದೃಷ್ಟಿಯಿಂದ ಇಂಡೇನ್ ಕಂಪನಿಯ ಅಗ್ನಿಶಾಮಕ ವಾಹನವನ್ನು ಸ್ಥಳದಲ್ಲೇ ನಿಯೋಜಿಸಲಾಗಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ಯಾಸ್ ತುಂಬಿದ ಟ್ಯಾಂಕರ್ ಆಗಿರುವುದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ನಿಗಾ ವಹಿಸಿದ್ದಾರೆ. ಮಾಚೇನಹಳ್ಳಿಯ ಇಂಡೇನ್ ರಿಫಿಲ್ಲಿಂಗ್ ಘಟಕದಿಂದ ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲಿನ ಸುಮಾರು ಹತ್ತು ಜಿಲ್ಲೆಗಳಿಗೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತದೆ.…

Read More

ಶಿವಮೊಗ್ಗ, : ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹುಡ್ಕೋ ಕಾಲೋನಿಯ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ₹1.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. 2025ರ ಆಗಸ್ಟ್ 3ರಿಂದ 10ರ ಅವಧಿಯಲ್ಲಿ ವಿನೋಬನಗರ ಹುಡ್ಕೋ ಕಾಲೋನಿಯ ಮನೆಯೊಂದರಲ್ಲಿ 12 ಗ್ರಾಂ ತೂಕದ ಚಿನ್ನಾಭರಣ ಕಳವು ನಡೆದಿತ್ತು. ಈ ಸಂಬಂಧ ಕಾಶಿಪುರದ ಲಕ್ಷ್ಮೀಪುರ ಬಡಾವಣೆಯ ನಿವಾಸಿ ಉಷಾ ಅವರು ಮೇ 26, 2026ರಂದು ದೂರು ನೀಡಿದ್ದು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್-2023ರ ಕಲಂ 305ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ. ಹಾಗೂ ಡಿವೈಎಸ್‌ಪಿ ಸಂಜೀವ್ ಕುಮಾರ್ ಟಿ. ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಯಿತು. ವಿನೋಬನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂತೋಷಕುಮಾರ್ ಡಿ.ಕೆ. ಅವರ ನೇತೃತ್ವದಲ್ಲಿ ಪಿಎಸ್‌ಐ ತಿರುಮಲೇಶ್ ಜಿ. ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿತು. ಮಾಹಿತಿ ಸಂಗ್ರಹಿಸಿ…

Read More

ಶಿವಮೊಗ್ಗ : ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಜೂ.5 ರ ಸಂಜೆ 5 ಗಂಟೆಗೆ ‘ಮಾಕ್ ಡ್ರಿಲ್’ (ಅಣಕು ಪ್ರದರ್ಶನ) ಆಯೋಜಿಸಲಾಗಿದೆ. ಇದು ಕೇವಲ ಮುನ್ನೆಚ್ಚರಿಕೆ ಮತ್ತು ತರಬೇತಿಯ ಪ್ರದರ್ಶನವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯಲ್ಲಿ ಆತಂಕಕ್ಕೊಳಗಾಗಬಾರದು ಎಂದು ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ ತಿಳಿಸಿದ್ದಾರೆ. ಗುರುವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಕುರಿತು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಅಣಕು ಪ್ರದರ್ಶನದ ಪೂರ್ವಭಾವಿ ಸಿದ್ದತೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮಾತನಾಡಿ, 2026 ನೇ ಸಾಲಿನಲ್ಲಿ ರಾಷ್ಟçಮಟ್ಟದಲ್ಲಿ ನಾಗರೀಕ ರಕ್ಷಣೆ, ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಅಣಕು ಪ್ರದರ್ಶನ ನಡೆಸಲು…

Read More

ಶಿವಮೊಗ್ಗ : ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದೆ. ತೀರ್ಥಹಳ್ಳಿ ತಾಲೂಕು ಮುಡುಬಾ ಸಮೀಪ ಘಟನೆ ಸಂಭವಿಸಿದೆ. ಬಸ್ಸು ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ತೀರ್ಥಹಳ್ಳಿಗೆ ಸಂಚರಿಸುತ್ತಿತ್ತು. ಮುಡುಬಾ ಸಮೀಪ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರೆಗೆ ಹೋಗಿದೆ. ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆಯಾಗಿಲ್ಲ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ. ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More

ಶಿವಮೊಗ್ಗ : ಭದ್ರಾವತಿ ಹಳೇನಗರದ ಸುಭಾಷ್ ನಗರದ ವಾಸಿ ಕುಮಾರ್ ಮತ್ತು ಲೀಲಾ ಎಂಬುವರ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ ಬಹು ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮರೆದ ಘಟನೆ ನಡೆದಿದೆ. ಕೀರ್ತನಾ ತುಮಕೂರಿನ ಸಿದ್ದಗಂಗಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ನರ್ಸಿಂಗ್ ವಿಭಾಗದಲ್ಲಿ ನೌಕರಿಯಲ್ಲಿದ್ದರು. ತಮ್ಮ ಮನೆಯಿಂದ ಕಳೆದ ಮಂಗಳವಾರ ನೌಕರಿಗೆ ತೆರಳಿದ್ದರು. ಅಂದೇ ರಾತ್ರಿ ಪಾಳೆಯದಲ್ಲಿ ಇವರು ಕರ್ತವ್ಯದಲ್ಲಿದ್ದಾಗ ಇದ್ದಕ್ಕಿದ್ದ ಹಾಗೆ ನೆಲಕ್ಕುರುಳಿ ಪ್ರಜ್ಞೆ ತಪ್ಪಿದೆ. ತಕ್ಷಣ ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆಸ್ಪತ್ರೆಯಿಂದ ಭದ್ರಾವತಿಯಲ್ಲಿನ ಅವರ ತಂದೆ ಕುಮಾರ್‌ಗೆ ಫೋನ್ ಮಾಡಿ ವಿಷಯ ತಿಳಿಸಿದ್ದರು. ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದ್ದರೂ ಪ್ರಜ್ಞೆ ಬಂದಿಲ್ಲ. ಕಳೆದ ರಾತ್ರಿ ವೈದ್ಯರು ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರೆಳೆದಿದ್ದಾರೆಂದು ದೃಢಪಡಿಸಿದ್ದಾರೆ. ನಂತರ ಮೃತ ದೇಹವನ್ನು ಬೆಂಗಳೂರಿನ ಮಹಾದೇವ ಪುರದಲ್ಲಿರುವ ಕೃಷ್ಣ ಕಿಮ್ಸ್ ಆಸ್ಪತ್ರೆಯಲ್ಲಿ ಬಹು ಅಂಗಾಂಗಗಳನ್ನು ಪಡೆಯಲಾಗಿದೆ. ಮೃತ ದೇಹವನ್ನು ನಗರಕ್ಕೆ ತಂದು ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರ ಭೂಮಿಯಲ್ಲಿ…

Read More