Author: Raghu Shetty

ಶಿವಮೊಗ್ಗ : ನಗರದಲ್ಲಿ ಫುಟ್‌ಪಾತ್‌ ಮತ್ತು ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರೆದಿದೆ. ಬಿ.ಹೆಚ್. ರಸ್ತೆಗೆ ಹೊಂದಿರಕೊಂಡಿರುವ ಗಾರ್ಡನ್‌ ಏರಿಯಾದ 1ನೇ ಕ್ರಾಸ್‌ನಲ್ಲಿ ಟ್ರಾಫಿಕ್‌ ಪೊಲೀಸರು ಕಾರ್ಯಾಚರಣೆ ನಡೆಸಿದರು. ರಸ್ತೆಯಲ್ಲಿ ಕಬ್ಬಿಣದ ವಸ್ತುಗಳು, ಟೈರ್‌ಗಳು ಹಾಗೂ ಗುಜರಿ ಸಾಮಗ್ರಿಗಳನ್ನು ವ್ಯಾಪಾರಿಗಳು ಫುಟ್‌ ಪಾತ್‌ ಮತ್ತು ರಸ್ತೆಗಳ ಮೇಲೆ ಇರಿಸಿದ್ದರು. ಇದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿತ್ತು. ಈ ಹಿನ್ನೆಲೆ ಟ್ರಾಫಿಕ್‌ ಪೊಲೀಸರು ಅವುಗಳನ್ನು ತೆರವುಗೊಳಿಸಿದರು. ಇದೇ ವೇಳೆ, ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಯಾವುದೇ ವಸ್ತುಗಳನ್ನು ಇಡಬಾರದು ಎಂದು ಗುಜರಿ ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಈ ನಿಯಮವನ್ನು ಮತ್ತೆ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸಂಚಾರ ಸುಧಾರಣೆಗೆ ಪೊಲೀಸರು ಸರಣಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಹಿಂದೆ ಗಾರ್ಡನ್‌ ಏರಿಯಾದಲ್ಲಿ ಫುಟ್‌ಪಾತ್‌ಗಳನ್ನು ಮುಕ್ತಗೊಳಿಸಲಾಗಿತ್ತು. ಅಲ್ಲದೆ ಬಸವೇಶ್ವರ ಕಾಲೇಜು ಮುಂಭಾಗದಲ್ಲಿದ್ದ ಹೂವಿನ ಅಂಗಡಿಗಳನ್ನು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

Read More

ಶಿವಮೊಗ್ಗ, : ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ ಪ್ರದೇಶದ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಟೀಟ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 9 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಎ-ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಿಂದ ಸರ್ಚ್ ವಾರೆಂಟ್ ಪಡೆದುಕೊಂಡು, ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡವು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿತು. ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹33,470 ನಗದು, 8 ಮೊಬೈಲ್ ಫೋನ್‌ಗಳು ಹಾಗೂ ಇಸ್ಟೀಟ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 200/2026 ಅಡಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 79 ಮತ್ತು 80ರ ಅನ್ವಯ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಶಿವಮೊಗ್ಗ : ಮನೆಗೆ‌ ನುಗ್ಗಿ ನಗದು ದೋಚಿ ಪರಾರಿಯಾಗಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಶಿವಮೊಗ್ಗ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಕಾಶೀಪುರ ಲಕ್ಕಪ್ಪ ಲೇಔಟ್ ನ ಸೋಮಶೇಖರ್ ಎಂಬುವರ ಮನೆಯಲ್ಲಿ ಮೇ 26 ರಂದು ಕಳ್ಳತನವಾಗಿತ್ತು. ಮನೆಯಲ್ಲಿದ್ದ 7 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾಗಿದ್ದರು‌. ಪ್ರಕರಣ ಸಂಬಂಧ ವಿನೋಬನಗರದಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿಪ್ಪುನಗರದ ಮೊಹಮದ್ ಸಲೀಮ್ ಹಾಗೂ ಮೊಹಮದ್ ರಜಾಕ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 5,13,000 ನಗದನ್ನ ಪೊಲೀಸರು ವಶಪಡಿಸಿಕೊಂಡಿದ್ದಾನೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ಎ.ಜಿ. ಕೆಎಸ್‌ಪಿಎಸ್ ಹಾಗೂ ಶಿವಮೊಗ್ಗ ಉಪ ವಿಭಾಗ-ಬಿ ಪೊಲೀಸ್ ಉಪಾಧೀಕ್ಷಕರಾದ ಸಂಜೀವ್ ಕುಮಾರ್ ಟಿ.ಡಿ. ಅವರ ಮಾರ್ಗದರ್ಶನದಲ್ಲಿ ವಿನೋಬನಗರ ಪೊಲೀಸ್ ಠಾಣೆ ವತಿಯಿಂದ ವಿಶೇಷ ತಂಡವನ್ನು ರಚಿಸಲಾಗಿತ್ತು. ವಿನೋಬನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂತೋಷಕುಮಾರ್ ಡಿ.ಕೆ. ಅವರ ಉಸ್ತುವಾರಿಯಲ್ಲಿ ಪೊಲೀಸ್ ಉಪನಿರೀಕ್ಷಕರಾದ ತಿರುಮಲೇಶ್ ಜಿ.…

Read More

ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ೨೫ ಸ್ಥಳಗಳ ಮೇಲೆ ದಾಳಿ ನಡೆಸಿ ಸುಮಾರು 17 ಸಾವಿರ ಮೆಟ್ರಿಕ್ ಟನ್ ಅಕ್ರಮ ಮರಳನ್ನು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿ, ಟ್ರ್ಯಾಕ್ಟರ್, ಬೋಟ್ ಹಾಗೂ ಮರಳು ಫಿಲ್ಟರ್ ಯಂತ್ರ ಸೇರಿದಂತೆ ೫೨ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕ ಲೋಕಾಯುಕ್ತ ಬೆಂಗಳೂರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲ್ಲೂಕುಗಳಲ್ಲಿ ಹರಿಯುವ ತುಂಗಭದ್ರಾ ಮತ್ತು ಶರಾವತಿ ನದಿ ಪಾತ್ರಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಚಟುವಟಿಕೆಗಳ ಪರಿಶೀಲನೆಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಘಟಕದ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ಹಾಗೂ ಪೊಲೀಸ್ ಉಪಾಧೀಕ್ಷಕ ಬಿ.ಪಿ. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ೧೫ ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ಭದ್ರಾವತಿ ತಾಲೂಕಿನ ನಿಂಬೆಗೊಂದಿ, ಮಂಗೋಟೆ,…

Read More

ಶಿವಮೊಗ್ಗ : ಮನೆ ಸಮೀಪವೇ ಕಾಣಿಸಿಕೊಂಡ ಬೃಹತ್ ಕಾಳಿಂಗ ಸರ್ಪವನ್ನ ಸೆರೆಹಿಡಿಯುವಲ್ಲಿ ಉರಗ ತಜ್ಞ ಕಿರಣ್ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಣಗಲಕೊಪ್ಪದ 17 ನೇ ಮೈಲಿಗಲ್ಲು ಮನೆಯ ಮುಂಭಾಗಕ್ಕೆ ಬರೋಬ್ಬರಿ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಬಂದು ನಿಂತಿದ್ದು, ಮನೆಯೊಳಗೆ ನುಗ್ಗಲು ಯತ್ನಿಸಿತ್ತು. ಈ ದೃಶ್ಯವನ್ನು ಕಂಡ ಮನೆಯಲ್ಲಿದ್ದವರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದರು. ಮನೆಯವರ ಕೂಗಾಟ ಕೇಳಿ ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದ್ದು, ಪರಿಸ್ಥಿತಿಯನ್ನು ಗಮನಿಸಿದ ಅಕ್ಕ ಪಕ್ಕದ ನಿವಾಸಿಗಳು ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸ್ನೇಕ್ ಕಿರಣ್ ಕುಮಾರ್ ಅವರನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು. ಸ್ಥಳಕ್ಕೆ ಆಗಮಿಸಿದ ಕಿರಣ್ ಕುಮಾರ್ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸಿ ಕೊನೆಗೂ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾದರು.

Read More

ಶಿವಮೊಗ್ಗ : ಸಾಗರ ಪಟ್ಟಣದ ಜೆಪಿ ನಗರದಲ್ಲಿ ಕೌಟುಂಬಿಕ ಕಲಹ ಹಾಗೂ ಅಕ್ರಮ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೃತನ ಪತ್ನಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಪರಶುರಾಮ್ (40) ಕೊಲೆಯಾದ ವ್ಯಕ್ತಿ. ಇವರ ಪತ್ನಿ ಚೈತ್ರಾ ಹಾಗೂ ಮಂಜು @ ಟೀ ಪುಡಿ ಮಂಜು ನಡುವೆ ಈ ಹಿಂದಿನಿಂದಲೂ ಸಂಬಂಧವಿದ್ದು, ಈ ವಿಚಾರವಾಗಿ ಮನೆಯಲ್ಲಿ ಆಗಾಗ್ಗೆ ಗಲಾಟೆಗಳು ನಡೆಯುತ್ತಿತ್ತೆಂದು ತಿಳಿದುಬಂದಿದೆ. ದಿನಾಂಕ 15-05-2026ರಂದು ರಾತ್ರಿ ಪರಶುರಾಮ್ ಮತ್ತು ಚೈತ್ರಾ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ನಡೆಯುತ್ತಿದ್ದ ವೇಳೆ ಮಂಜು ಮನೆಯೊಳಗೆ ಬಂದಿದ್ದಾನೆ. ಈ ವೇಳೆ ಮಂಜು ಹಾಗೂ ಪರಶುರಾಮ್ ನಡುವೆ ತೀವ್ರ ವಾಗ್ವಾದ ಮತ್ತು ಗಲಾಟೆ ನಡೆದಿದ್ದು, ಪರಶುರಾಮ್ ಮನೆಯಲ್ಲಿದ್ದ ಕುಡುಗೋಲು ಹಿಡಿದಿದ್ದರೆ, ಮಂಜು ಚಾಕು ಹಿಡಿದು ಜಗಳವಾಡಿದ್ದಾನೆ ಎನ್ನಲಾಗಿದೆ. ಗಲಾಟೆಯ ಸಂದರ್ಭ ಪರಶುರಾಮ್ ಹೊಟ್ಟೆ ಹಿಡಿದು “ಮಂಜು ಚುಚ್ಚಿದ್ದಾನೆ” ಎಂದು ಕೂಗಿಕೊಂಡಿದ್ದು, ಬಳಿಕ ಗಾಯಾಳುವನ್ನು ಆಟೋ ಮೂಲಕ ಸಾಗರ ಸರ್ಕಾರಿ ಆಸ್ಪತ್ರೆಗೆ…

Read More

ಶಿವಮೊಗ್ಗ : ಹೊಸನಗರ ತಾಲೂಕಿನ ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಡೈರಿಗೆ ಹಾಲು ಹಾಕಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು ಚಿರತೆ ನೋಡಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಮೇಯಲು ಬಿಟ್ಟ ಸಾಕಷ್ಟು ಜಾನುವಾರುಗಳನ್ನು ಚಿರತೆ ತಿಂದಿರುವ ಬಗ್ಗೆ ಮಾಹಿತಿ ಇದ್ದು ಜಾನುವಾರುಗಳ ಕಳೇಬರಗಳು ಅಲ್ಲಲ್ಲಿ ಕಂಡುಬಂದಿದೆ‌. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಕಡಸೂರು ನಿವಾಸಿಗಳು ಆಗ್ರಹಿಸಿದ್ದಾರೆ.

Read More

ಶಿವಮೊಗ್ಗ, : ಅಬ್ಬಲಗೆರೆಯ ಸಮೀಪ ನಡೆದ ಯುವತಿಯೊಬ್ಬರ ಸರ ಕಳವು ಮಾಡಿದ ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮೇ.೨೨ ರ ಸಂಜೆ ಯುವತಿಯೊಬ್ಬರು ಕಾರಿಂದ ಕೆಳಗೆ ಇಳಿಯುತ್ತಿದ್ದ ವೇಳೆ, ಹಿಂಭಾಗದಿಂದ ಇಕೋ ಸ್ಪೋರ್ಟ್ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರು ಯುವತಿಯ ಕೊರಳಿನಲ್ಲಿದ್ದ ಬಂಗಾರದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಇಲಾಖೆ, ಆರೋಪಿಗಳ ಪತ್ತೆ ಹಾಗೂ ಮಾಲು ವಶಕ್ಕೆ ವಿಶೇಷ ತಖಾ ತಂಡವನ್ನು ರಚಿಸಿತು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಖಿಲ್ ಬಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ಎ.ಜಿ ಹಾಗೂ ಉಪ ವಿಭಾಗ-ಬಿ ಡಿವೈಎಸ್‌ಪಿ ಸಂಜೀವ್ ಕುಮಾರ್ ಟಿ ಅವರ ಮಾರ್ಗದರ್ಶನದಲ್ಲಿ ಪಿಐ ರಾಘವೇಂದ್ರ ಕಾಂಡಿಕೆ ಹಾಗೂ ಪಿಎಸ್‌ಐ ನವೀನ್ ಮಠಪತಿ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ತಖಾ ತಂಡದಲ್ಲಿ ಸಿಪಿಸಿ ಶ್ರೀಕಾಂತ್, ಕಾಶಿನಾಥ ಹಾಗೂ ಕವನ ಸೇರಿದಂತೆ…

Read More

ಶಿವಮೊಗ್ಗ : ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೂರ್ಯ ಬಡಾವಣೆಯಲ್ಲಿ ವೃದ್ಧೆಯೊಬ್ಬರ ಮಾಂಗಲ್ಯ ಸರ ಕಳವು ಮಾಡಿದ ಪ್ರಕರಣವನ್ನು ವಿನೋಬನಗರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 73 ವರ್ಷದ ವೃದ್ಧೆಯೊಬ್ಬರು ಮೇ 13ರಂದು ಬೆಳಗಿನ ವಾಕಿಂಗ್‌ಗೆ ತೆರಳಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0093/2026ರಡಿ ಬಿ.ಎನ್.ಎಸ್ ಕಲಂ 309(4) ಅನ್ವಯ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ ಹಾಗೂ ಡಿವೈಎಸ್ಪಿ ಸಂಜೀವ್ ಕುಮಾರ್ ಟಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಯಿತು. ವಿನೋಬನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂತೋಷ ಕುಮಾರ್ ಡಿ.ಕೆ ನೇತೃತ್ವದಲ್ಲಿ ಪಿಎಸ್ಐ ತಿರುಮಲೇಶ್ ಜಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ರಚಿಸಲಾಗಿತ್ತು. ತನಿಖಾ ತಂಡವು ಪ್ರಕರಣದ ಆರೋಪಿಗಳಾದ ಚಾಲುಕ್ಯನಗರ ಗೋಪಾಳ ನಿವಾಸಿ ಭರತ್ (21)…

Read More

ಶಿವಮೊಗ್ಗ : ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮಾನವೀಯ ಕಾರ್ಯವೊಂದಕ್ಕೆ ಸಾಕ್ಷಿಯಾಗಿದ್ದಾರೆ. ನಗರ ಪೊಲೀಸ್ ಸ್ಟೇಷನ್​ ಬೀಟ್ ಸಿಬ್ಬಂದಿ ತಮ್ಮ ವ್ಯಾಪ್ತಿಯೊಳಗೆ ಗಸ್ತು ತಿರುಗುತ್ತಿದ್ದಾಗ ಅನಾಥವಾಗಿ ಓಡಾಡುತ್ತಿದ್ದ ಮಹಿಳೆಯೊಬ್ಬರನ್ನು ರಕ್ಷಿಸಿ ಅವರಿಗೆ ಆಸರೆ ಒದಗಿಸಿದ್ದಾರೆ. ಮಾಸ್ತಿಕಟ್ಟೆಯಲ್ಲಿ ನಡೆದ ಘಟನೆಯಿದು. ಮಹಿಳೆಯೊಬ್ಬರು ಏಕಾಂಗಿಯಾಗಿ ಅಲೆದಾಡುತ್ತಿರುವುದು ಬೀಟ್ ಸಿಬ್ಬಂದಿ ಗಮನಕ್ಕೆ ಬಂದಿದೆ. ಅಸ್ವಸ್ಥ ಸ್ಥಿತಿಯಲ್ಲಿ ನಿರಾಶ್ರಿತರಾಗಿದ್ದ ಮಹಿಳೆಯನ್ನು ಕಂಡ ಸಿಬ್ಬಂದಿ, ತಕ್ಷಣವೇ ಸ್ಪಂದಿಸಿ ಆಕೆಯ ರಕ್ಷಣೆಗೆ ಮುಂದಾಗಿದ್ದಾರೆ. ಈ ಬಗ್ಗೆ ಠಾಣೆಗೆ ಮಾಹಿತಿ ತಲುಪಿಸಿದ್ದಾರೆ. ಬಳಿಕ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ಸೇರಿ, ಮಹಿಳೆಯ ಪೂರ್ವಾಪರ ಮಾಹಿತಿ ಹಾಗೂ ಆಕೆಯ ಸಂಬಂಧಿಕರ ವಿಷಯವನ್ನು ಕಲೆಹಾಕಿದ್ದಾರೆ. ಹಾಗೂ ಹೀಗೂ ಮಾಡಿ, ಅಸ್ವಸ್ಥ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿದ್ದಾರೆ. ಮಹಿಳೆಯ ವಿಷಯ ತಿಳಿದು ಸಂತ್ರಸ್ತ ಮಹಿಳೆಯ ಚಿಕ್ಕಮ್ಮ ಆಶ್ರಯ ನೀಡಲು ಮುಂದೆ ಬಂದಿದ್ದರಿಂದ ಅವರೊಂದಿಗೆ ಅಸ್ವಸ್ಥ ಮಹಿಳೆಯನ್ನು ಕಳುಹಿಸಿಕೊಟ್ಟಿದ್ದಾರೆ.

Read More