Author: Raghu Shetty

ಭದ್ರಾವತಿ:ನಗರದ ಖ್ಯಾತ ರಂಗಭೂಮಿ ಕಲಾವಿದೆ, ಸಮಾಜ ಸೇವಕಿ, ಹಾಗು ಏಕ ವ್ಯಕ್ತಿ ಪ್ರದರ್ಶನ ಕಲಾವಿದೆ, ನಂದಿನಿ ಮಲ್ಲಿಕಾರ್ಜುನ್ ರವರಿಗೆ ಬೆಂಗಳೂರು ಕೆಂಗೇರಿ ಉಪ ನಗರದ ವಳಗೆರೆ ಹಳ್ಳಿಯಲ್ಲಿರುವ ಅಖಿಲ ಕರ್ನಾಟಕ ಅಂಗವಿಕಲರ ಸೇವಾ ಟ್ರಸ್ಟ್ ನಾಗರಭಾವಿ ಮಲ್ಲತ್ತಹಳ್ಳಿಯ ಕಲಾ ಗ್ರಾಮದಲ್ಲಿ ಏರ್ಪಡಿಸಿದ್ದ 2026 ನೇ ಹೊಸ ವರ್ಷದ ಸಮಾರಂಭದ ಅಂಗವಾಗಿ ಹೊಸ ವರ್ಷದ ಪ್ರಶಸ್ತಿಯ ಪುರಸ್ಕಾರ ನೀಡಿ ಗೌರವಿಸಿದ್ದಾರೆ. ಸಾಮಾನ್ಯ ಗೃಹಿಣಿಯಾಗಿ ತಮ್ಮ ಕಟುಂಬದ ನಿರ್ವಹಣೆ ಮಾಡಿಕೊಂಡಿದ್ದ ಇವರು. ಗೃಹಿಣಿಯಾದವಳು ಕೇವಲ ಮನೆಗೆ ಮಾತ್ರ ಸೀಮಿತ ಎಂಬ ಮಾತನ್ನು ಸುಳ್ಳಾಗಿಸಿ, ತಮ್ಮ ಬಿಡುವಿನ ವೇಳೆಯಲ್ಲಿ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಸಮಾಜ ಸೇವೆ ಮಾಡುತ್ತಿದ್ದರು. ಇದರ ಜೊತೆಗೆ ಹವ್ಯಾಸಕ್ಕಾಗಿ ರಂಗಭೂಮಿಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತ ಸಂಧರ್ಭದಲ್ಲಿ ನಾಟಕಗಳಲ್ಲಿ ಅಭಿನಯಿಸುವ ಅವಕಾಶ ದೊರೆಯಿತು. ಇದರ ಪರಿಣಾಮ ನಾಟಕಗಳಲ್ಲಿನ ವಿಭಿನ್ನ ರೀತಿಯ ಪಾತ್ರಗಳನ್ನು ಲೀಲಾಜಾಲವಾಗಿ ಅಭಿನಯಿಸಿದರು. ಇದರ ಫಲವಾಗಿ ಹಲವಾರು ನಾಟಕಗಳಲ್ಲಿ ಅಭಿನಯಿಸುವ ಅವಕಾಶ ದೊರೆಯಿತು. ಇದಲ್ಲದೆ ಏಕ ವ್ಯಕ್ತಿ ಕಲಾವಿದೆ ಯಾಗಿಯೂ…

Read More

ಶಿವಮೊಗ್ಗವನ್ನು ನಶೆ ಮುಕ್ತ ಜಿಲ್ಲೆಯನ್ನಾಗಿಸುವುದು ತಮ್ಮ ಮೊದಲ ಆದ್ಯತೆಯೆಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ನಿಖಿಲ್ ಹೇಳಿದರು. ಡಿಎಆರ್ ಸಭಾಂಗಣದಲ್ಲಿ ನಡೆದ ಮೊದಲ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ವಿರುದ್ಧ ಕಠಿಣ ಹೋರಾಟ ನಡೆಸಲಾಗುವುದಾಗಿ ಸ್ಪಷ್ಟಪಡಿಸಿದರು. ಸಾರ್ವಜನಿಕರು ಮತ್ತು ಪೊಲೀಸ್ ಇಲಾಖೆಯ ನಡುವೆ ನೇರ ಸಂಪರ್ಕಕ್ಕಾಗಿ ‘ಪಬ್ಲಿಕ್ ಐ’ ವಾಟ್ಸ್‌ಅಪ್ ಗ್ರೂಪ್ ಆರಂಭಿಸಲಾಗುವುದು ಎಂದು ತಿಳಿಸಿದರು. ಪ್ರತೀ ಠಾಣೆಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲಾಗುವುದು ಎಂದರು. ಯುವಜನತೆಯಲ್ಲಿ ಡ್ರಗ್ಸ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ‘ಸನ್ಮಿತ್ರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಸೈಬರ್ ಅಪರಾಧ ನಿಯಂತ್ರಣ ಮತ್ತು ಜಾಗೃತಿಗೆ ವಿಶೇಷ ಕ್ರಮ ಕೈಗೊಳ್ಳಲಾಗುವುದು. 15 ದಿನಕ್ಕೊಮ್ಮೆ ‘ಆರಕ್ಷಕ ದಿನ’ ಆಚರಿಸಿ ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಲಾಗುವುದು. ರಸ್ತೆ ಅಪಘಾತ ತಡೆಗೆ ಹೆಲ್ಮೆಟ್ ಧಾರಣೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು; ದಂಡಕ್ಕಿಂತ ಜೀವ ರಕ್ಷಣೆ ಮುಖ್ಯ ಎಂಬ ಸಂದೇಶ ನೀಡಲಾಗುವುದು. ಕಾನೂನಿಗೆ ಗೌರವ ಕೊಡುವವರಿಗೆ ಪೊಲೀಸ್ ಇಲಾಖೆಯಿಂದ ಸಂಪೂರ್ಣ ಗೌರವ ಸಿಗಲಿದೆ; ರಾಜಕೀಯ ಒತ್ತಡವಿದ್ದರೂ…

Read More

ಪಾಲಿಕೆ ವೈಫಲ್ಯ ಖಂಡಿಸಿ 3ಕ್ಕೆ ಪ್ರತಿಭಟನೆ ಶಿವಮೊಗ್ಗ : ಮಹಾನಗರ ಪಾಲಿಕೆಯ ವೈಫಲ್ಯತೆ ಯನ್ನ ಖಂಡಿಸಿ ರಾಷ್ಟ್ರಭಕ್ತರ ಬಳಗ ಜ.೩ ರಂದು ರಾಮಣ್ಣ ಶ್ರೇಷ್ಠಿಪಾರ್ಕ್ ನಿಂದ ಪಾಲಿಕೆಯ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲು ತೀರ್ಮಾ ನಿಸಲಾಗಿದೆ ಎಂದು ರಾಷ್ಟ್ರ ಭಕ್ತ ಬಳಗ ಮುಖಂಡ ಕೆ.ಈ.ಕಾಂತೇಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದನಗರದಲ್ಲಿರುವ ಸವಾರಲೈನ್ ರಸ್ತೆ, ವಿನೋಬ ನಗರ, ಬಹುಮಹಡಿ ಕಟ್ಟಡಗಳ ಮಳಿಗೆಗಳು ಮಹಾನಗರ ಪಾಲಿಕೆಗೆ ಸೇರಿದ್ದು ಮಳಿಗೆ ಹಂಚಿಕೆ ಸರಿಯಾಗಿ ಆಗಿಲ್ಲ. ಡಿಸಿ ಕಚೇರಿ ಎದುರಿನ ಆಟದ ಮೈದಾನಕ್ಕೆ ನ್ಯಾಯಾಲ ಯ ಸೂಕ್ತ ವರದಿ ನೀಡುವಂತೆ ಕೇಳಿದರೂ ಪಾಲಿಕೆ ನ್ಯಾಯಾಲ ಯದ ಆದೇಶವನ್ನೇ ಪಾಲಿಸಿಲ್ಲ. ಗೋವಿಂದಾಪುರ ಮತ್ತು ಗೋಪಿಶೆಟ್ಟಿ ಕೊಪ್ಪದಲ್ಲಿರುವ ಆಶ್ರಯ ಮನೆಗಳನ್ನ ಹಂಚಿಕೆ ಮಾಡಿಲ್ಲ. ರೋಟರಿ ಚಿತಾಗಾರದಲ್ಲಿ ದುರಸ್ತಿಕಾರ್ಯ ವಾಗಿಲ್ಲ. ಕೊಳಚೆ ಪ್ರದೇಶದ ನಿವಾಸಿಗೆ ಹಕ್ಕುಪತ್ರ ನೀಡದೆ ಹಿನ್ನಲೆಯಲ್ಲಿ ಜನವರಿ ೩ ರವರೆಗೆ ರಾಷ್ಟ್ರಭಕ್ತರ ಬಳಗ ಪಾಲಿಕೆಯ ಬಗ್ಗೆ ತೀರ್ಮಾನವನ್ನ ಕಾಯಲಿದೆ. ಇ-ಸ್ವತ್ತಿನಲ್ಲಿ ನಡೆಯುತ್ತಿರುವ ಭ್ರಷ್ಠಾಚಾರವನ್ನ ನಿಯಂತ್ರಿಸಬೇ ಕು. ಗುಂಡಿ ಬಿದ್ದಿರುವ ರಸ್ತೆಯನ್ನ…

Read More

ಜನಮನ ಕನ್ನಡ ರಕ್ಷಣಾ ವೇದಿಕೆ ರಾಜ್ಯ ಸಂಘಟನೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ವನ್ನುಶಿವಮೊಗ್ಗ ನಗರದ ಶಿವಪ್ಪ ನಾಯಕನ ಪ್ರತಿಮೆಯ ಮುಂದೆ ಸಂಭ್ರಮದಿಂದ ಆಚರಿಸಲಾಯಿತು, ಈ ಕಾರ್ಯಕ್ರಮದಲ್ಲಿ ಜನಮನ ಕರವೇ ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷರಾದ ಜನಾರ್ದನ ಸಾಲಿಯನ್, ಕಜಾಂಚಿ ಸಿದ್ದಣ್ಣ, ಪ್ರಧಾನ ಕಾರ್ಯದರ್ಶಿ ಎನ್, ಮಾಲತೇಶ್, ಪತ್ರಕರ್ತರು ಹಾಗೂ ಸಾಹಿತಿಗಳಾದ ಗಾ,ರಾ, ಶ್ರೀನಿವಾಸ್, ಅನಿಲ್, ಪದಾಧಿಕಾರಿಗಳಾದ ಕಿರಣ್, ರಾಮಣ್ಣ ರಾಗಿಗುಡ್ಡ, ರಾಮು, ಪಾರ್ತಿಬನ್, ಮುರುಗನ್, ಪ್ರದೀಪ್, ಗಣೇಶ್, ಪ್ರೇಮ್, ವೀಣಾ, ಹೆಚ್, ಸುಮಾ ಕೆ, ಎಸ್, ಸುಜಾತ, ಪುಷ್ಪ ಒಡೆಯರ್, ಶೋಭಾ, ಪುಷ್ಪ, ಇನ್ನು ಮುಂತಾದವರು ಭಾಗವಹಿಸಿದ್ದರು

Read More

ಶಿವಮೊಗ್ಗ : ಸಂಭ್ರಮಾಚರಣೆಗೆ ಬರುವ ಅತಿಥಿಗಳ ಸುರಕ್ಷತೆ ಹಾಗೂ ಅವರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಸುರಕ್ಷಿತ ವಾತಾವರಣ ಸೃಷ್ಟಿ ಮಾಡಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು. ಅವರು ಜಿಲ್ಲಾ ಪೊಲೀಸ್ ವತಿಯಿಂದ ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಹೋಟೆಲ್, ಲಾಡ್ಜ್, ರೆಸಾರ್ಟ್, ಹೋಂ ಸ್ಟೇ ಹಾಗೂ ಹೊಸ ವರ್ಷ ಆಚರಣೆಯ ಕಾರ್ಯಕ್ರಮ ಆಯೋಜಕರುಗಳ ಸಭೆಯಲ್ಲಿ ಪಾಳ್ಗೊಂಡು ಮುಂಜಾಗ್ರತ ಕ್ರಮ ಬಗ್ಗೆ ವಿವರಿಸಿದರು. ಕುಟುಂಬದವರು ಮತ್ತು ಮಕ್ಕಳು ವಯಸ್ಸಾದವರು ಎಲ್ಲಾ ಬರುತ್ತಾರೆ. ಇಂತಹ ಸಂದರ್ಭದಲ್ಲಿ ಯಾವುದೇ ಕಿರಿಕಿರಿ ಹಾಗೂ ತೊಂದರೆಯಾಗದಂತೆ ಜವಾಬ್ದಾರಿಯಿಂದ ನೋಡಿಕೊಳ್ಳಬೇಕು ಎಂದರು. ಮದ್ಯಪಾನ ಮಾಡಿ ವಾಹನಗಳನ್ನು ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸುವ ಸಾದ್ಯತೆ ಹೆಚ್ಚಿರುತ್ತದೆ, ಆದ್ದರಿಂದ ಯಾರೂ ಕುಡಿದು ವಾಹನ ಚಾಲನೆ ಮಾಡದಂತೆ ನೋಡಿಕೊಳ್ಳಿ, ಮತ್ತು ಅಗತ್ಯ ಸಂದರ್ಭಗಳಲ್ಲಿ 112 ತುರ್ತು ಸಹಾಯವಾಣಿಗೆ ಕರೆ ಮಾಡುವಂತೆ ಸೂಚಿಸಿದರು. ಅಥಿತಿಗಳ ಬಗ್ಗೆ ಮುಂಚಿತವಾಗಿಯೇ ಮಾಹಿತಿಯನ್ನು ಕಲೆ ಹಾಕಿ ಹಾಗೆಯೇ, ಹಾಜರಾಗುವ ಸಂಖ್ಯೆಗೆ…

Read More

ಶಿವಮೊಗ್ಗ : ದೇಶ್ ನೀಟ್ ಅಕಾಡೆಮಿಯು ೨೦೨೫ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ದಾಖಲಾತಿ ಪಡೆದ ಅಕಾಡೆಮಿಯ ೧೨೦ ವಿದ್ಯಾರ್ಥಿಗಳಲ್ಲಿ ೬೯ ವಿದ್ಯಾರ್ಥಿಗಳು ವೈದ್ಯಕೀಯ ಕ್ಷೇತ್ರಕ್ಕೆ ಆಯ್ಕೆಯಾಗಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆದಿದ್ದಾರೆ ಎಂದು ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಎ.ಆರ್. ತಿಳಿಸಿದರು. 2025ರಲ್ಲಿ ಶಿವಮೊಗ್ಗದ ಗಂಧರ್ವ ನಗರದಲ್ಲಿ ಆರಂಭವಾದ ದೇಶ್ ನೀಟ್ ಅಕಾಡೆಮಿ ನೀಟ್ ಪರೀಕ್ಷೆಯ ಮೊದಲ ಬ್ಯಾಚ್‌ನಲ್ಲಿ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಕಂಡಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗದ ಮೊದಲ ವಸತಿಯುತ ಕೋಚಿಂಗ್ ಸೆಂಟರ್ ಆದ ದೇಶ್ ನೀಟ್ ಅಕಾಡೆಮಿಯು ಚೊಚ್ಚಲ ಪ್ರಯತ್ನದಲ್ಲಿಯೇ ಐತಿಹಾಸಿ ಸಾಧನೆ ಮಾಡಿದೆ. ಇದಕ್ಕೆ ವಿದ್ಯಾರ್ಥಿಗಳು, ಪೋಷಕರ, ಉಪನ್ಯಾಸಕ ಪರಿಶ್ರಮಯೇ ಕಾರಣ. : ಅವಿನಾಶ್,  ಅನುಭವಸಂಪನ್ನ ಶಿಕ್ಷಕರು ಸಿಲಿಬಸ್‌ವನ್ನು ವ್ಯವಸ್ಥಿತವಾದ ಮಾರ್ಗದರ್ಶನ, ಉತ್ತಮ ಕ್ಯಾಂಪಸ್, ಪೋಷಕರ ಸಹಕಾರದಿಂದ ಉನ್ನತ ಸಾಧನೆಗೆ ಸಹಕಾರಿ : ವಿದ್ಯಾರ್ಥಿ, ದೇಶ್‌ನೀಟ್‌ ವೈದ್ಯಕೀಯ ಕ್ಷೇತ್ರಕ್ಕೆ 69 ವಿದ್ಯಾರ್ಥಿ ಗಳಲ್ಲಿ ಆಯ್ಕೆ ಎಂಬಿಬಿಎಸ್-39, ಬಿಎಎಂಎಸ್-17, ಡಿಡಿಎಸ್-10 ಹಾಗೂ ವೆಟರ್ನರಿ-3, 7 ವಿದ್ಯಾ…

Read More

ಡಿಸೆಂಬರ್ 31 ರವರೆಗೆ ಈ ಅಭಿಯಾನ ಮುಂದುವರಿಯುತ್ತದೆ. ಠೇವಣಿದಾರರು ಗಡುವಿನ ನಂತರವೂ ತಮ್ಮ ಹಣವನ್ನು ಪಡೆಯಲು ಬ್ಯಾಂಕುಗಳನ್ನು ಸಂಪರ್ಕಿಸಬಹುದು. ಮಂಗಳೂರು: ರಾಜ್ಯಾದ್ಯಂತ ಬ್ಯಾಂಕ್ ಖಾತೆಗಳಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಸುಮಾರು 3,400 ಕೋಟಿ ರೂಪಾಯಿಗಳಷ್ಟು ಹಕ್ಕುದಾರರಿಲ್ಲದ ಹಣ ಬಾಕಿ ಇದೆ ಎಂದು ಜಿಲ್ಲಾ ಸಮಾಲೋಚನಾ ಸಮಿತಿ (DCC) ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (DLRC) ಸಭೆಯಲ್ಲಿ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಈ ಕುರಿತು ಸಭೆಯನ್ನುದ್ದೇಶಿಸಿ ಮಾತನಾಡಿದ ಆರ್‌ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಅರುಣ್ ಕುಮಾರ್, ಕಳೆದ ಮೂರು ತಿಂಗಳಿನಿಂದ ಭಾರತೀಯ ರಿಸರ್ವ್ ಬ್ಯಾಂಕ್ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿ (DEAF) ಅಡಿಯಲ್ಲಿ ಹಕ್ಕುದಾರರಿಲ್ಲದ ಠೇವಣಿಗಳನ್ನು ಅವುಗಳ ನಿಜವಾದ ಮಾಲೀಕರೊಂದಿಗೆ ಮತ್ತೆ ಸಂಪರ್ಕಿಸಲು ರಾಜ್ಯಾದ್ಯಂತ ವಿಶೇಷ ಅಭಿಯಾನವನ್ನು ಜಾರಿಗೊಳಸಿದೆ ಎಂದು ಹೇಳಿದರು. ಡಿಸೆಂಬರ್ 31 ರವರೆಗೆ ಈ ಅಭಿಯಾನ ಮುಂದುವರಿಯುತ್ತದೆ. ಆದರೂ ಠೇವಣಿದಾರರು ಗಡುವಿನ ನಂತರವೂ ತಮ್ಮ ಹಣವನ್ನು ಪಡೆಯಲು ಬ್ಯಾಂಕುಗಳನ್ನು ಸಂಪರ್ಕಿಸಬಹುದು. ಹಕ್ಕುದಾರರು ಹಣ…

Read More

ಶಿವಮೊಗ್ಗ,: ಮಲೆನಾಡು ಪ್ರದೇಶದಲ್ಲಿ ತೀವ್ರತರವಾಗಿರುವ ಅಡಿಕೆ ಎಲೆಚುಕ್ಕೆ ರೋಗದಿಂದಾಗಿ ಸಣ್ಣ ರೈತರಿಗೆ ತುಂಬಾ ತೊಂದರೆಯಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ವಿಜ್ಞಾನಿಗಳಿಂದ ಮಾರ್ಗದರ್ಶನ ಪಡೆದು ಹತೋಟಿ ಕ್ರಮ ಕೈಗೊಳ್ಳುತ್ತಿದ್ದು ರೈತರಿಗೆ ಈ ಬಗ್ಗೆ ಹೆಚ್ಚಿನ ತಿಳುವಳಿಕೆ ನೀಡುವುದು ಅತಿ ಅವಶ್ಯಕವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಎಲೆ ಚುಕ್ಕೆ ರೋಗ ನಿಯಂತ್ರಣ ಮತ್ತು ಇತರೆ ವಿಷಯ ಕುರಿತು ಚರ್ಚಿಸಲು ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲದಲ್ಲಿ ಹೆಚ್ಚಾಗಿ ಹರಡುವ ಎಲೆ ಚುಕ್ಕೆ ರೋಗ ನಿಯಂತ್ರಣ ದುಬಾರಿಯಾಗಿದೆ. ರೋಗ ನಿಯಂತ್ರಣ ಕ್ರಮಕ್ಕೆ ಕೇಂದ್ರ ಮತ್ತು ರಾಜ್ಯ ಕ್ರಮವಾಗಿ ಶೇ.60 ಮತ್ತು 40 ಹಣ ನೀಡಲು ಸಿದ್ದವಿದ್ದು, ಮುಖ್ಯವಾಗಿ ರೋಗ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ವಿಜ್ಞಾನಿಗಳ ಅಭಿಪ್ರಾಯ ಮತ್ತು ಮಾರ್ಗದರ್ಶನದ ಮೇಲೆ ಮಾರ್ಗಸೂಚಿಯನ್ನು ತಯಾರಿಸಲಾಗುತ್ತಿದೆ. ಇಲಾಖೆಗಳು, ಗ್ರಾ.ಪಂ, ಸಹಕಾರ ಸಂಘಗಳು,…

Read More

ಶಿವಮೊಗ್ಗ : ನಗರದ ಶ್ರೀ ಪ್ರತ್ಯಾಂಗೀರಾ ದೇವಿ ದೇವಸ್ಥಾನದ ದೇವಿ ಉಪಾಸಕರಾದ ಬ್ರಹ ಡಾ.ಸುಪ್ರೀತ್ ಗುರೂಜಿ ಹುಟ್ಟು ಹಬ್ಬದ ಪ್ರಯುಕ್ತ, ಡಿ. 16 ಕ್ಕೆ ದೇವಾಲಯದಲ್ಲಿ ಶ್ರೀಗಳ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶ್ರೀ ಪ್ರತ್ಯಾಗೀರಾ ದೇವಿ ದೇವಾಲಯದ ಪ್ರಧಾನ ಕಾರ್ಯದರ್ಶಿ ಉದೀತ್ ವಿ ತಿಳಿಸಿದ್ದಾರೆ. ಶಿವಮೊಗ್ಗ ಸಮೀಪದ ಸೋಗಾನೆ ಬಳಿಯ ಶಿವಮೊಗ್ಗ ವಿಮಾನ ನಿಲ್ದಾಣದ ಮುಂಭಾಗದಲ್ಲಿರುವ ಶ್ರೀ ಪ್ರತ್ಯಾಂಗೀರಾ ದೇವಿ ದೇವಸ್ಥಾನವು ನಾಡಿನ ಅಸಂಖ್ಯಾ ಭಕ್ತರ ಆಕರ್ಷಣೀಯ ತಾಣವಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದಲೂ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಅಂದು ಗುರೂಜಿಗೆ ಗುರುವಂದನೆ ಸೇರಿ ಹಲವು ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಅಂದು ಬೆಳಗ್ಗೆ 11 ಗಂಟೆಗೆ ದೇವಾಲಯದಲ್ಲಿ ಗುರು ವಂದನಾ ಕಾರ್ಯಕ್ರಮ ಜರುಗಲಿದೆ. ಹಾಗೆಯೇ, ಆಶಾ ಜ್ಯೋತಿ ಸ್ವಯಂ ರಕ್ತ ದಾನ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ ಮತ್ತು ವಾಸನ್ ಐ ಕೇರ್ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ದೇವಿಯ ಭಕ್ತರು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದು…

Read More

28, 29 మత్తు 30రందు యాదగిరియల్లి ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳ ಶಿವಮೊಗ್ಗ-ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತು ವತಿಯಿಂದ 2025 ಡಿಸೆಂಬರ್ 28, 29, ಮತ್ತು 30 ರಂದು ಮೂರುದಿನಗಳ ಕಾಲ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನವನ್ನು ಯಾದಗಿರಿಯ ಜಿಲ್ಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವೈಜ್ಞಾನಿಕ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಡಿ.ರವಿಕುಮಾರ್ ಹೇಳಿದರು. ಅವರು ಬಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಚಿರಾತನಾಡಿ ಡಾಲಿಕಲ್ ನಟರಾಜ್ -ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹೆಸರಾಂತ ವಿಜ್ಞಾನಿ ಇಸ್ರೋದ ಮಾಜಿ ಅಧ್ಯಕ್ಷರಾದ ಡಾ.ಎ.ಎಸ್.ಕಿರಣ್ ಕುಮಾರ್ ಹಾಗೂ ಜಸ್ಟೀಸ್ ನಾಗಮೋಹನ್ ದಾಸ್ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಪರಿಷತ್ತು ಆರಂಭವಾಗಿ ಐದು ವರ್ಷಗಳು ತುಂಬಿದ್ದು ಈಗಾಗಲೇ ರಾಜ್ಯದ ಉದ್ದಗಲಕ್ಕೂ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಶಾಖೆಗಳನ್ನು ಆರಂಭಿಸಿ ಈ ಮೂಲಕ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದೆ. ಈಗಾಗಲೇ ಐವತ್ತು ಸಾವಿರಕ್ಕೂ ಹೆಚ್ಚಿನ ಸದಸ್ಯರನ್ನು ಹೊಂದಿರುವ ಸಂಸ್ಥೆ ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸತ್ತ…

Read More