Author: Raghu Shetty

ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ 2 ರಿಂದ 3 ವರ್ಷ ಹಳೆಯ ಬೀಟೆ ಜಾತಿಯ ಮರದ ನಾಟ ತುಂಡುಗಳನ್ನು ಅರಣ್ಯ ಇಲಾಖೆ ಪತ್ತೆ ಹಚ್ಚಿದೆ. ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಒತ್ತುವರಿ ಜಮೀನಿನಲ್ಲಿನ ಕೃಷಿ ಹೊಂಡದ ಪಕ್ಕದಲ್ಲಿ ಮಣ್ಣಿನಲ್ಲಿ ಮುಚ್ಚಿ ಇಡಲಾಗಿದ್ದ 14 ಬೀಟೆ ಜಾತಿಯ ಮರದ ನಾಟ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ. ಗಣೇಶ ಬಿನ್ ಬಾಬುಶೆಟ್ಟಿ (40), ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿವಾಸಿ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ 1963 ಹಾಗೂ ಕರ್ನಾಟಕ ಅರಣ್ಯ ಕಾನೂನು 1969ರ ಅಡಿಯಲ್ಲಿ ಹೊಸನಗರ ವಲಯ ಕಚೇರಿಯಲ್ಲಿ ಅರಣ್ಯ ಮೊಕದ್ದಮೆ ಸಂಖ್ಯೆ 14/2026-27 ದಾಖಲಿಸಲಾಗಿದೆ. ವಿಭಾಗದ ಪರವಾಗಿ ವಶಪಡಿಸಿಕೊಂಡಿರುವ ಮರದ ನಾಟ ತುಂಡುಗಳನ್ನು ಅಮಾನತ್ತುಪಡಿಸಲಾಗಿದೆ.

Read More

ಶಿವಮೊಗ್ಗ : ರಸ್ತೆ ಒತ್ತುವರಿ ಮಾಡಿಕೊಂಡಿದ್ದ ವ್ಯಾಪಾರಿಗಳನ್ನು ತೆರವು ಮಾಡುವಾಗ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ ಹೈಡ್ರಾಮಾ ನಡೆದಿದೆ. ವ್ಯಾಪಾರಿಯೊಬ್ಬ ಮಾವಿನ ಹಣ್ಣುಗಳನ್ನೆಲ್ಲ ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದಲ್ಲಿ ಕೆಲವರು ಮುಖ್ಯರಸ್ತೆಯ ಮೇಲೆಯೇ ವ್ಯಾಪಾರ ನಡೆಸುತ್ತಿದ್ದರು. ರಸ್ತೆ ಬಿಟ್ಟು ವ್ಯಾಪಾರ ನಡೆಸುವಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ವ್ಯಾಪಾರಿಗಳಿಗೆ ಸೂಚಿಸಿದರು. ಇಂದು ತೆರವು ಕಾರ್ಯಾಚರಣೆ ನಡೆಸಿದರು. ಈ ವೇಳೆ ವ್ಯಾಪಾರಿಯೊಬ್ಬ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಯೊಬ್ಬರು ಬುಟ್ಟಿಗಳಲ್ಲಿದ್ದ ಮಾವಿನ ಹಣ್ಣುಗಳನ್ನು ರಸ್ತೆಗೆ ಸುರಿದಿದ್ದಾರೆ. ಅಲ್ಲದೆ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಮಾವಿನ ಹಣ್ಣುಗಳನ್ನು ರಸ್ತೆಯಿಂದ ತೆರವುಗೊಳಿಸಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Read More

ಶಿವಮೊಗ್ಗ : ಕಲಿಕೆ, ನವೀನತೆ ಮತ್ತು ಸೃಜನಶೀಲ ಚಿಂತನೆಯೇ ಯಶಸ್ವಿ ಇಂಜಿನಿಯರ್‌ನ ನಿಜವಾದ ಗುರುತು ಎಂದು ಎಸ್.ಎನ್. ನಾಗರಾಜ ಹೇಳಿದರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜುದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ‘ಮಿಸ್ಟಿರಿಯೊ ೬.೦’ ರಾಜ್ಯಮಟ್ಟದ ತಾಂತ್ರಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಎಲೆಕ್ಟ್ರಾನಿಕ್ಸ್ ಎಂದರೆ ಕೇವಲ ಸರ್ಕ್ಯೂಟ್‌ಗಳು, ಮೈಕ್ರೊಪ್ರೊಸೆಸರ್‌ಗಳು ಅಥವಾ ಯಂತ್ರಗಳ ಅಧ್ಯಯ ನವಲ್ಲ. ಅದು ಕಾಣದ ಬುದ್ಧಿವಂತಿಕೆಯನ್ನು ಅರಿಯುವ ಪ್ರಯಾಣವಾಗಿದೆ. ಒಂದು ಸಣ್ಣ ಮೈಕ್ರೋಪ್ರೊಸೆಸರ್ ಕ್ಷಣಾರ್ಧದಲ್ಲಿ ಕೋಟ್ಯಾಂತರ ಕಾರ್ಯಗಳನ್ನು ನಿರ್ವಹಿ ಸುತ್ತದೆ. ಕಣ್ಣಿಗೆ ಕಾಣದ ಆ ಎಲೆಕ್ಟ್ರಾನಿಕ್ ವ್ಯವಸ್ಥೆಯೇ ಇಂದಿನ ಜಗತ್ತನ್ನು ಚಲಾಯಿಸುತ್ತಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವಾಗ ಕೇವಲ ಯಂತ್ರಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂಬ ಭಾವನೆಯಲ್ಲದೆ, ಅದರ ಹಿಂದೆ ಅಡಗಿರುವ ವಿಜ್ಞಾನ ಮತ್ತು ತಾಂತ್ರಿಕತೆಯನ್ನು ಅರ್ಥೈಸಿಕೊಳ್ಳುವ ಕುತೂಹಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಡಾರ್ಕ್ ಕೋಡಿಂಗ್‌ನಂತಹ ಸವಾಲುಗಳು ಮನಸ್ಸಿನ ಸ್ಪಷ್ಟತೆ, ತಾರ್ಕಿಕ ಚಿಂತನೆ ಹಾಗೂ ಕೋಡಿಂಗ್…

Read More

ಶಿವಮೊಗ್ಗ : ಮೈದಾನದಲ್ಲಿ ಕುಳಿತು ಕ್ರಿಕೆಟ್ ಪಂದ್ಯ ವೀಕ್ಷಿಸುವಂತಹ (ಫ್ಯಾನ್ ಪಾರ್ಕ್) ಅನುಭವ ನೀಡುವ ಐಪಿಎಲ್ ಫ್ಯಾನ್ ಪಾರ್ಕ್‌ನ್ನು ಶಿವಮೊಗ್ಗದಲ್ಲಿ ಮೇ16ರಂದು ಸಂಜೆ 6.30ಕ್ಕೆ ಎನ್‌ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಐಪಿಎಲ್ ಶಿವಮೊಗ್ಗ ವಿಭಾಗದ ಸಂಚಾಲಕ ನಾಗೇಂದ್ರ ಪಂಡಿತ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎನ್‌ಇಎಸ್ ಮೈದಾನದಲ್ಲಿ ಫ್ಯಾನ್ ಪಾರ್ಕ್ ಸ್ಥಾಪನೆಗಾಗಿ ಸಿದ್ಧತೆ ಮಾಡಲಾಗಿದೆ. ಮೇ16ಸಂಜೆ ನಡೆಯುವ ಐಪಿಎಲ್ ಮ್ಯಾಚ್‌ಗಳನ್ನು ದೊಡ್ಡ ಸ್ಕ್ರೀನ್‌ನಲ್ಲಿ ತೋರಿಸಲಾಗುತ್ತಿದೆ. ಸುಮಾರು ೫ ಸಾವಿರ ನೋಡುಗರು ಇಲ್ಲಿಗೆ ಬರುವ ಸಾಧ್ಯತೆ ಇದೆ ಎಂದರು. ಬಹಳಷ್ಟು ಜನರು ಕ್ರಿಕೆಟ್ ಮ್ಯಾಚ್ ನೋಡಲು ಕ್ರೀಡಾಂಗಣಕ್ಕೆ ಹೋಗಲು ಸಾಧ್ಯವಾಗುವುದಿಲ್ಲ. ಅವರಿಗೆಲ್ಲಾ ಕ್ರೀಡಾಂಗಣದಲ್ಲೇ ಕುಳಿತು ನೋಡಿದ ಅನುಭವವಾಗುವಂತೆ ಈ ಫ್ಯಾನ್ ಪಾರ್ಕ್‌ನ್ನು ಸಿದ್ಧಪಡಿಸಲಾಗಿದೆ. ಇಲ್ಲಿ ಆಸನದ ವ್ಯವಸ್ಥೆ ಇರುವುದಿಲ್ಲ. ಜಮಖಾನದಲ್ಲಿ ಕುಳಿತುಕೊಂಡು ಅಥವಾ ಜನ ನಿಂತುಕೊಂಡೇ ಕ್ರಿಕೆಟ್ ಪಂದ್ಯದ ನೇರ ಪ್ರಸಾರವನ್ನು ಆನಂದಿಸಬೇಕು. ಕ್ರಿಕೆಟ್ ವೀಕ್ಷಣೆ ಜೊತೆಗೆ ಆಹಾರ ಮಳಿಗೆ, ಗೇಮ್ ಜೋನ್ ಇತ್ಯಾದಿಗಳು ಇರುತ್ತವೆ. ಈಗಾಗಲೇ ಹಲವು ನಗರಗಳಲ್ಲಿ ಈ…

Read More

ಸಾಗರ : ತಾಲೂಕಿನ ಆನಂದಪುರದ ಬಸ್ ನಿಲ್ದಾಣ ಮುಂಭಾಗ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಕಾರನ್ನು ನಿಲ್ಲಿಸದೆ ತೆರಳಿರುವ ಘಟನೆ ಗುರುವಾರ ಬೆಳಿಗ್ಗೆ 11 ಗಂಟೆಗೆ ನಡೆದಿದೆ. ಇನ್ನು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ತಕ್ಷಣ ಆನಂದಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಮಾಡಿ ಕಾರು ನಿಲ್ಲಿಸದೆ ತೆರಳಿದ್ದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಶಿವಮೊಗ್ಗ : ನಗರದ ಎಂಆರ್‌ಎಸ್‌ ವೃತ್ತದಲ್ಲಿದ್ದ ಹಳೆಯ ವಾಟರ್‌ ಟ್ಯಾಂಕ್‌ ಅನ್ನು ಇಂದು ಮಧ್ಯಾಹ್ನ ಕೆಡವಲಾಯಿತು. ಈ ವಾಟರ್‌ ಟ್ಯಾಂಕ್‌ನಿಂದಾಗಿ ಈ ಸರ್ಕಲ್‌ ಡಬಲ್‌ ಟ್ಯಾಂಕ್‌ ಎಂದೇ ಪ್ರಖ್ಯಾತವಾಗಿತ್ತು. ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಈ ನೀರಿನ ಟ್ಯಾಂಕ್‌ ಬಳಕೆಗೆ ಯೋಗ್ಯವಿರಲಿಲ್ಲ ಮತ್ತು ಹಳೆಯದಾಗಿದ್ದರಿಂದ ನೀರು ಸೋರಿಕೆಯಾಗುತ್ತಿತ್ತು. ಆದ್ದರಿಂದ, ಸಾರ್ವಜನಿಕರ ಹಿತದೃಷ್ಟಿಯಿಂದ ಇಲ್ಲಿಂದ ಸ್ವಲ್ಪ ದೂರದಲ್ಲಿ ಈಚೆಗೆ ಹೊಸ ಟ್ಯಾಂಕ್‌ ನಿರ್ಮಿಸಲಾಗಿತ್ತು. ಹಳೆಯ ಟ್ಯಾಂಕ್‌ ದುರ್ಬಲಗೊಂಡಿದ್ದರಿಂದ ಅದನ್ನು ಕೆಡವಲು ಅಧಿಕಾರಿಗಳು ನಿರ್ಧರಿಸಿದ್ದರು. ಇಂದು ಮಧ್ಯಾಹ್ನ ಜೆಸಿಬಿ ಹಾಗೂ ಆಧುನಿಕ ತಂತ್ರಜ್ಞಾನ ಬಳಸಿ ಹಳೆಯ ಟ್ಯಾಂಕ್‌ ಅನ್ನು ಕೆಡವಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಲ್‌ನಲ್ಲಿ ಕೆಲವು ಹೊತ್ತು ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಸರ್ಕಲ್‌ನ ಸುತ್ತಲೂ ನಿಂತು ನೂರಾರು ಜನರು ಟ್ಯಾಂಕ್‌ ಉರುಳುವ ದೃಶ್ಯವನ್ನು ಕುತೂಹಲದಿಂದ ವೀಕ್ಷಿಸಿದರು. ಈ ಕಾರ್ಯಾಚರಣೆಯು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಈಗ ಸಂಚಾರ ಸುಗಮವಾಗಿದೆ.

Read More

ಶಿವಮೊಗ್ಗ : ಪ್ರೇಯಸಿಯೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಹೆಂಡತಿ ಹಾಗೂ ಆಕೆಯ ಪ್ರೀಯಕರನಿಗೆ ಗಲ್ಲು ಶಿಕ್ಷೆ ವಿಧಿಸಿ ಭದ್ರಾವತಿ ಕೋರ್ಟ್ ತೀರ್ಪು ನೀಡಿದೆ. ಜನವರಿ 15, 2020 ರಂದು ಭದ್ರಾವತಿ ಪೇಪರ್ ಟೌನ್ ಪೊಲಿಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ವಾಸಿಯಾದ ಫ್ಲೋರಾ ನ್ಯಾನ್ಸಿ ಎಂಬ ಮಹಿಳೆ ರಾಜಶೇಖರಯ್ಯ ಎಂಬುವವನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡು, ಆಕೆಯ ಗಂಡನಾದ ಪ್ರಕಾಶ್ ಬಾಬು ಇವರಿಬ್ಬರ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಆರೋಪಿತರಿಬ್ಬರು ಸೇರಿ ಪ್ರಕಾಶ್ ಬಾಬುವಿಗೆ ಮತ್ತು ಬರುವ ಔಷದಿಯನ್ನು ಹಾಕಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ರು. ಈ ಬಗ್ಗೆ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಮಂಜುನಾಥ್ ಈ.ಓ ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಭದ್ರಾವತಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ರವರು ಆರೋಪಿತರಿಗೆ ಗಲ್ಲು ಶಿಕ್ಷೆ ಹಾಗೂ…

Read More

ಶಿವಮೊಗ್ಗ : ಹಳೇ ದ್ವೇಷದ ಹಿನ್ನೆಲೆ ಅಡಿಕೆ ಮರಗಳನ್ನೇ ದುಷ್ಕರ್ಮಿಗಳು ಕಡಿದು ನಾಶ ಮಾಡಿರುವ ಘಟನೆ ಹೊಸನಗರ ತಾಲೂಕಿನ ಬ್ರಾಹ್ಮಣ ತರುವೆ ಗ್ರಾಮದ ಚಕ್ರೆ ಎಂಬಲ್ಲಿ ನಡೆದಿದೆ. ಚಕ್ರೆಯ ನಾರಾಯಣ ಮೂರ್ತಿ ಎಂಬುವವರಿಗೆ ಸೇರಿದ ಅಡಿಕೆ ತೋಟಕ್ಕೆ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಪುಂಡಾಟ ಮೆರೆದಿದ್ದಾರೆ. ಅಲ್ಲದೇ ತೋಟದಲ್ಲಿದ್ದ ಜೆಟ್ ಪೈಪ್ ಸೇರಿದಂತೆ ಹಲವು ವಸ್ತುಗಳನ್ನ ನಾಶ ಪಡಿಸಿದ್ದಾರೆ. ತಂತಿ ಬೇಲಿಯನ್ನೂ ಕಟ್ ಮಾಡಿದ್ದಾರೆ. ಏಕಾಏಕಿ ರಾತ್ರಿ ವೇಳೆ ಅಡಿಕೆ ತೋಟಕ್ಕೆ ನುಗ್ಗಿದ ಐದಾರು ಜನರ ತಂಡ ಕೃತ್ಯ ಎಸಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ: ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ತಿಳಿಸಿದರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಲಾಗಿದ್ದ 35 ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೋಲುಗಳು ಜೀವನದ ಅವಿಭಾಜ್ಯ ಅಂಗವಾಗಿದ್ದು, ಅವುಗಳಿಂದ ಪಾಠ ಕಲಿದು ಮುಂದಕ್ಕೆ ಸಾಗುವುದು ಯಶಸ್ಸಿನ ಮೂಲವೆಂದು ತಿಳಿಸಿದರು. ಪದವಿ ಕೇವಲ ಜ್ಞಾನದ ಸಂಕೇತವಲ್ಲದೆ, ಸಮಾಜಕ್ಕೆ ಉತ್ತಮ ದಿಕ್ಕು ನೀಡಬಲ್ಲ ನಿಮ್ಮ ಸಾಮರ್ಥ್ಯದ ಪ್ರತೀಕವಾಗಿದೆ ಎಂದು ಹೇಳಿದರು. ಈ ಸಾಧನೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮಹತ್ತರವಾಗಿದ್ದು, ಅವರ ಮಾರ್ಗದರ್ಶನವಿಲ್ಲದೆ ಈ ಸಾಧನೆ ಸಾಧ್ಯವಾಗುತ್ತಿರಲಿಲ್ಲ ಎಂದು ಅಭಿನಂದಿಸಿದರು. ಇಂದಿನ ಜಗತ್ತು ವಿಜ್ಞಾನ, ತಂತ್ರಜ್ಞಾನ ಮತ್ತು ನವೀನತೆಯ ವೇಗದ ಬದಲಾವಣೆಯನ್ನು ಅನುಭವಿಸುತ್ತಿದೆ. ಕೃತಕ ಬುದ್ಧಿಮತ್ತೆ, ಡೇಟಾ ಸೈನ್ಸ್ ಮತ್ತು ಡಿಜಿಟಲ್ ಕ್ರಾಂತಿ ಹೊಸ ಅವಕಾಶಗಳ ಜೊತೆಗೆ ಸವಾಲುಗಳನ್ನೂ ತಂದಿವೆ. ವಿದ್ಯಾರ್ಥಿಗಳು ನಿರಂತರವಾಗಿ ಕಲಿಯುವ ಮನೋಭಾವ ಬೆಳೆಸಿ ತಮ್ಮ ಕೌಶಲ್ಯಗಳನ್ನು ಕಾಲಕ್ಕೆ ತಕ್ಕಂತೆ ನವೀಕರಿಸಿಕೊಳ್ಳಬೇಕು…

Read More

ಶಿವಮೊಗ್ಗ: ಮೇ.೪ ರಂದು ಪೂರ್ವ ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಮಂಜುನಾಥ್ ಮತ್ತು ಸಿಪಿಸಿ ಸಂತೋಷ್ ನಗರದ ಗಾಂಧಿ ಬಜಾರ್ ಪ್ರದೇಶದಲ್ಲಿ ಸಂಚಾರ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೆ ಸಂಚಾರ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನವನ್ನು ಚಲಾಯಿಸುತ್ತಿದ್ದ ಸವಾರನನ್ನು ಗಮನಿಸಿ, ತಡೆದು ನಿಲ್ಲಿಸಲು ಸೂಚಿಸಿದ ವೇಳೆ ಬೈಕ್ ಸವಾರ ಸಯ್ಯದ್ ಮುಜಾಮಿಲ್ ರಸ್ತೆ ಮಧ್ಯೆ ವಾಹನವನ್ನು ನಿಲ್ಲಿಸಿ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವ ಮಹತ್ವದ ಬಗ್ಗೆ ಪೊಲೀಸರು ತಿಳಿಸುತ್ತಿದ್ದಾಗ, ಅಲ್ಲಿಗೆ ಬಂದ ಜಬಿವುಲ್ಲಾ ಎಂಬ ಮತ್ತೊಬ್ಬ ವ್ಯಕ್ತಿ “ನಾವು ಹೆಲ್ಮೆಟ್ ಹಾಕುವುದಿಲ್ಲ, ಏನು ಮಾಡುತ್ತೀಯ?” ಎಂದು ಹೇಳಿ ಇಬ್ಬರೂ ಸೇರಿ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪೊಲೀಸ್ ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ತಳ್ಳಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟುಮಾಡಿ, ಬೈಕ್ ಕೀ ಕಿತ್ತುಕೊಂಡು ಬೆದರಿಕೆ ಹಾಕಿ ವಾಹನವನ್ನು ತೆಗೆದುಕೊಂಡು ಹೋಗಿರುವುದು ವರದಿ ಅಡಿಯಲ್ಲಿ ಪ್ರಕರಣ ದಾಖಸಿಕೊಂಡು. ಇಬ್ಬರೂ ಆರೋಪಿತರನ್ನು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read More