Subscribe to Updates
Get the latest creative news from FooBar about art, design and business.
Author: Raghu Shetty
ಶಿವಮೊಗ್ಗ: ನಗರದ ಎಸ್.ಆರ್. ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ (ಎಸ್.ಆರ್.ಎನ್.ಎಂ) ಬಿಸಿಎ ಹಾಗೂ ಬಿಎಸ್ಸಿ ವಿಭಾಗದ ವಿದ್ಯಾರ್ಥಿಗಳು ಕುವೆಂಪು ವಿವಿ ೨೦೨೪ನೇ ಸಾಲಿನ ಪರೀಕ್ಷಾ ಫಲಿತಾಂಶಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ಎರಡು ಚಿನ್ನದ ಪದಕಗಳೊಂದಿಗೆ ಹಲವಾರು ರ್ಯಾಂಕ್ಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಬಿಸಿಎ ವಿಭಾಗದಲ್ಲಿ ಮಾನಸ ಟಿ.ಸಿ ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಬಿಎಸ್ಸಿ ವಿಭಾಗದಲ್ಲಿ ರಶ್ಮಿ ಆರ್.ಎ ದ್ವಿತೀಯ ರ್ಯಾಂಕ್ ಜೊತೆಗೆ ಎಲೆಕ್ಟ್ರಾನಿಕ್ಸ್ ವಿಷಯದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಬಿಎಸ್ಸಿ ವಿಭಾಗದಲ್ಲಿ ಹೇಮಾ ಜೆ. ಗೋರ್ಪಡೆ ಹಾಗೂ ಪ್ರೀತಿ ಎಸ್.ಎ ತೃತೀಯ ರ್ಯಾಂಕ್, ಅನು ಸೋಮಶೇಖರ್ ನಾಲ್ಕನೇ ರ್ಯಾಂಕ್, ತೇಜಶ್ರೀ ಎನ್.ಆರ್ ಆರನೇ ರ್ಯಾಂಕ್ ಹಾಗೂ ಸ್ನೇಹ ಕೆ.ಎಂ ಹತ್ತನೇ ರ್ಯಾಂಕ್ ಪಡೆದು ಗಮನಸೆಳೆದಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಎಲ್. ಅರವಿಂದ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಎನ್.ಇ.ಎಸ್ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.
ಶಿವಮೊಗ್ಗ, : ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET-UG 2026) ದಿನಾಂಕ 03.05.2026 ರಂದು ಮಧ್ಯಾಹ್ನ 02:00 ರಿಂದ ಸಂಜೆ 05:00 ರವರೆಗೆ ನಡೆಯಲಿದ್ದು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ(ಪ್ರ) ಹೇಮಂತ್ ಎನ್ ತಿಳಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ನೀಟ್ ಪರೀಕ್ಷೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಶಿವಮೊಗ್ಗ ನಗರದ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದ್ದು, ಒಟ್ಟು 4577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು. ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ…
ಶಿವಮೊಗ್ಗ : ಜಿಲ್ಲೆಯಲ್ಲಿ ಮನೆ ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲಾ ಪೊಲೀಸ್ ಇಲಾಖೆ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (ಎಲ್ಹೆಚ್ಬಿಎಸ್)’ ಎಂಬ ಹೊಸ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ತಿಳಿಸಿದ್ದಾರೆ. ಮನೆಗಳನ್ನು ಬೀಗ ಹಾಕಿ ಹೊರಗಡೆ ಹೋಗುವವರು ತಮ್ಮ ಮನೆಯ ಸುರಕ್ಷತೆಯ ಜವಾಬ್ದಾರಿಯನ್ನು ಪೊಲೀಸರಿಗೆ ಹಸ್ತಾಂತರಿಸಬಹುದಾಗಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಇದಕ್ಕಾಗಿ ನಾಗರಿಕರು ಮೂರು ಮುಖ್ಯ ಮಾಹಿತಿಗಳನ್ನು ನೀಡಬೇಕು, ಹೊರಡುವ ಮತ್ತು ಮರಳುವ ದಿನಾಂಕ, ಮನೆಯ ಸಂಪೂರ್ಣ ವಿಳಾಸ ಹಾಗೂ ತಮ್ಮ ಮನೆಯ ಮುಂದೆ ನಿಂತು ತೆಗೆದ ಸೆಲ್ಫಿಯನ್ನು ವಾಟ್ಸಾಪ್ ಮೂಲಕ 8277982901 ದೂರವಾಣಿ ಸಂಖ್ಯೆಗೆ ಕಳುಹಿಸಬೇಕು. ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವಿವರಗಳನ್ನು ಅಪ್ಲೋಡ್ ಮಾಡಬಹುದು. ಈ ಮಾಹಿತಿಯ ಆಧಾರದ ಮೇಲೆ ಪೊಲೀಸರು ನಿಯಮಿತವಾಗಿ ಮನೆಗಳ ಮೇಲೆ ಕಣ್ಗಾವಲು ಇಡಲಿದ್ದಾರೆ ಎಂದರು. ಮನೆಯ ಮುಂದೆ ಪತ್ರಿಕೆಗಳ ರಾಶಿ ಅಥವಾ ಹಾಲಿನ ಪ್ಯಾಕೇಟ್ಗಳು ಬಿದ್ದಿರುವುದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾಸದ…
ಶಿವಮೊಗ್ಗ, ಏಪ್ರಿಲ್ 25: ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ ಚಾನಲ್ ಪ್ರದೇಶದ ಬಳಿ ಮಂಗಳಮುಖಿಯೊಬ್ಬರ ಮೇಲೆ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಶೀಘ್ರವೇ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಪ್ರಿಲ್ 24ರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಮಂಗಳಮುಖಿಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ, 4,000 ರೂ. ನಗದು, ಮೊಬೈಲ್, ಕೊರಳ ಚೈನ್ ಹಾಗೂ ಬಂಗಾರದ ಉಂಗುರ ಕಿತ್ತುಕೊಂಡು ಪರಾರಿಯಾಗಿದ್ದ. ಈ ಕುರಿತು ಏಪ್ರಿಲ್ 25ರಂದು ದೂರು ದಾಖಲಾಗಿದ್ದು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 82/2026, ಬಿಎನ್ಎಸ್ ಕಲಂ 309(4) ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ತನಿಖೆಗೆ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ. ಹಾಗೂ ಡಿವೈಎಸ್ಪಿ ಸಂಜೀವ್ ಕುಮಾರ್ ಟಿ.ಡಿ. ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ಅವರ ಉಸ್ತುವಾರಿಯಲ್ಲಿ ಪಿಎಸ್ಐ ತಿರುಮಲೇಶ್ ಜಿ. ಮತ್ತು ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದರು. ತನಿಖಾ ತಂಡವು ಆರೋಪಿತ ದೇವರಾಜ…
ಶಿವಮೊಗ್ಗ : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಒಟ್ಟಾರೆ ಶೇ. 96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಜಿಲ್ಲೆಯಿಂದ ಒಟ್ಟು 21,692 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 20,946 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ತಾಲ್ಲೂಕುವಾರು ಸಾಧನೆ: ತಾಲ್ಲೂಕುವಾರು ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲ್ಲೂಕು ಶೇ. 99.60 ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಸಾಗರ ಶೇ. 99.01 ಮತ್ತು ಹೊಸನಗರ ಶೇ. 98.90 ಫಲಿತಾಂಶದೊಂದಿಗೆ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿವೆ. ಉಳಿದಂತೆ ಸೊರಬ ಶೇ. 96.77, ಶಿವಮೊಗ್ಗ ಶೇ. 96.55, ಶಿಕಾರಿಪುರ ಶೇ. 94.79 ಹಾಗೂ ಭದ್ರಾವತಿ ಶೇ. 94.00 ಫಲಿತಾಂಶ ದಾಖಲಿಸಿವೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರ ಪಟ್ಟಿಯಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ಅನಘ ಕೆ.ಎಸ್. 624 ಅಂಕ ಗಳಿಸಿ ಮುಂಚೂಣಿಯಲ್ಲಿದ್ದಾರೆ. ಶಿವಮೊಗ್ಗದ ಪ್ರಿಯದರ್ಶಿನಿ ಪ್ರೌಢಶಾಲೆಯ ಕೃತಿ ಪಿ.ಎಸ್. 623 ಅಂಕ, ಭದ್ರಾವತಿಯ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಅಕುಲ್ ವಿಷ್ಣು ಭಟ್…
ಶಿವಮೊಗ್ಗ : ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆಯುವ ಮೂಲಕ ತೀರ್ಥಹಳ್ಳಿಯ ಅನಘ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ತೀರ್ಥಹಳ್ಳಿ ವಾಗ್ದೇವಿ ಶಿಕ್ಷಣ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಅನಘ ಕೆ ಎಸ್ ೬೨೫/೬೨೪ ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಮೇಲಿನ ಕಡಗೋಡುವಿನ ಮಂಗಳ ಮತ್ತು ಶಿವಕುಮಾರ ದಂಪತಿಗಳ ಪುತ್ರಿ ಅನಘ ಈ ಸಾಧನೆ ಮಾಡಿದ್ದಾಳೆ.
ಶಿವಮೊಗ್ಗ: ಪ್ರಾಮಾಣಿಕತೆ ಮೆರೆದ ಘಟನೆ ಒಂದು ನಗರದಲ್ಲಿ ಗಮನಸೆಳೆದಿದೆ. ಏ.16ರಂದು ಗಾಯತ್ರಿ ಎಂಬ ಗ್ರಾಹಕಿ ದುರ್ಗಿಗುಡಿಯ ನ್ಯೂ ಇತಿಹಾಸ ಕಲೆಕ್ಷನ್ ಬಟ್ಟೆ ಅಂಗಡಿಯಲ್ಲಿ ವ್ಯಾನಿಟಿ ಬ್ಯಾಗ್ ಅನ್ನು ಮರೆತು ಬಿಟ್ಟು ಹೋಗಿದ್ದರು. ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕು. ಸ್ವಾತಿ ಮತ್ತು ಕು. ಸಂಗೀತ ಅವರುಗಳು ಆ ಬ್ಯಾಗ್ ಅನ್ನು ಕಂಡು ಅಂಗಡಿ ಮಾಲೀಕರಾದ ಮಾರ್ತಾಂಡ ಅವರಿಗೆ ಒಪ್ಪಿಸಿದರು. ನಂತರ ಏ.21 ರಂದು ಬ್ಯಾಗ್ ಅನ್ನು ಜಯನಗರ ಪೊಲೀಸ್ ಠಾಣೆಗೆ ತಂದು ಹಾಜರುಪಡಿಸಲಾಯಿತು. ಪೊಲೀಸ್ ನಿರೀಕ್ಷಕರ ಸಮಕ್ಷಮದಲ್ಲಿ ಸುಮಾರು 5,00,000 ರೂ. ಮೌಲ್ಯದ ಬಂಗಾರ ಹಾಗೂ ಇತರೆ ವಸ್ತುಗಳಿದ್ದ ವ್ಯಾನಿಟಿ ಬ್ಯಾಗ್ ಅನ್ನು ಅದರ ಮಾಲೀಕೆಯಾದ ಗಾಯತ್ರಿ ಅವರಿಗೆ ಸುರಕ್ಷಿತವಾಗಿ ಮರಳಿ ನೀಡಲಾಯಿತು. ಪ್ರಾಮಾಣಿಕತೆ ಮತ್ತು ನಿಷ್ಠೆಯನ್ನು ತೋರಿದ ಕು. ಸ್ವಾತಿ, ಕು. ಸಂಗೀತ ಹಾಗೂ ಮಾರ್ತಾಂಡ ಅವರನ್ನು ಜಯನಗರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಶಿವಮೊಗ್ಗದಲ್ಲಿ ಫೇಸ್ಬುಕ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ನಕಲಿ ಕಥೆ ಹೇಳಿ ಯುವತಿಯನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ವಂಚನೆ ಪ್ರಕರಣದಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ಯುವತಿ ಸುಮಾರು ₹2,15,000 ಕಳೆದುಕೊಂಡಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಎರಡು ತಿಂಗಳ ಹಿಂದೆ ಯುವತಿಗೆ “ಮೈಕೆಲ್” ಎಂಬ ಹೆಸರಿನ ವ್ಯಕ್ತಿಯ ಪರಿಚಯ ಫೇಸ್ಬುಕ್ನಲ್ಲಿ ಆಗಿತ್ತು. ಆತ ವಿಶ್ವಾಸ ಗಳಿಸಿ ಏಪ್ರಿಲ್ 6ರಂದು ಶಿವಮೊಗ್ಗಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದ. ಆದರೆ ಆ ದಿನ ಆತ ವಾಟ್ಸಾಪ್ ಮೂಲಕ ಸಂಪರ್ಕಿಸಿ, ತಾನು ಮುಂಬೈ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆಯಿಂದ ಸಿಲುಕಿಕೊಂಡಿರುವುದಾಗಿ ಹೇಳಿದ್ದಾನೆ. ಸ್ವಲ್ಪ ಸಮಯದ ನಂತರ, ಮಹಿಳೆಯೊಬ್ಬರು ಕರೆ ಮಾಡಿ ತಮ್ಮನ್ನು ವಿಮಾನ ನಿಲ್ದಾಣ ಸಿಬ್ಬಂದಿ ಎಂದು ಪರಿಚಯಿಸಿಕೊಂಡು, ಮೈಕೆಲ್ ಅವರನ್ನು ಬಿಡಿಸಲು ದಂಡ ಪಾವತಿಸಬೇಕೆಂದು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದನ್ನು ನಂಬಿದ ಯುವತಿ ಏಪ್ರಿಲ್ 6 ಮತ್ತು 7 ರಂದು ನೆಟ್ ಬ್ಯಾಂಕಿಂಗ್ ಮತ್ತು ಫೋನ್ಪೇ ಮೂಲಕ ವಿವಿಧ ಖಾತೆಗಳಿಗೆ ಹಣ ವರ್ಗಾಯಿಸಿದ್ದಾರೆ. ಒಟ್ಟು ₹2,15,000…
ಶಿವಮೊಗ್ಗ: ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಉದ್ದೇಶದಿಂದ ‘ಅಕ್ಕ ಪಡೆಯು’ ಕಾರ್ಯ ನಿರ್ವಹಿಸುತ್ತಿದೆ. ಸೋಮವಾರ ಸಂಜೆ 5 ಗಂಟೆಗೆ ಅಕ್ಕ ಪಡೆಯು ಶಿವಮೊಗ್ಗ ನಗರದ ಬಸ್ ನಿಲ್ದಾಣ, ಮಾರುಕಟ್ಟೆ, ದೇವಸ್ಥಾನಗಳು ಹಾಗೂ ಉದ್ಯಾನವನಗಳ ಬಳಿ ಗಸ್ತು ತಿರುಗಿತು. ಈ ವೇಳೆ ಸಾರ್ವಜನಿಕರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ, ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಯಿತು. ಅಸಭ್ಯವಾಗಿ ವರ್ತಿಸುವವರು ಹಾಗೂ ಮಹಿಳೆಯರಿಗೆ ತೊಂದರೆ ಉಂಟುಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಡೆಯು ಎಚ್ಚರಿಕೆ ನೀಡಿತು. ಸಾರ್ವಜನಿಕರು ಸಹ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಸುರಕ್ಷಿತ ವಾತಾವರಣ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಲಾಯಿತು.
ಶಿವಮೊಗ್ಗ; ಏಪ್ರಿಲ್-18 ; (ಕರ್ನಾಟಕ ವಾರ್ತೆ): ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಶಿವಮೊಗ್ಗ ನಗರದ ದೈನಂದಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಅಥವಾ ಯಾವುದೇ ಸಮಸ್ಯೆಯಾದಲ್ಲಿ ತಮ್ಮ ವಾರ್ಡ್ ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ತಮ್ಮ ದೂರಗಳನ್ನು ನೀಡಲು ವಾರ್ಡ್ವಾರು ಅಭಿಯಂತರರ ಹಾಗೂ 24/7 ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ದೂರವಾಣಿ ಸಂಖ್ಯೆಯನ್ನು ಪ್ರಕಟಗೊಳಿಸಿದೆ. ಸಾರ್ವಜನಿಕರು ಈ ಕೆಳಕಂಡ ಅಭಿಯಂತರರ ಹಾಗೂ ಸಿಬ್ಬಂದಿಗಳ ದೂರವಾಣಿಗೆ ಕರೆ ಮಾಡಿ ದೂರನ್ನು ಸಲ್ಲಿಸುವಂತೆ ಹಾಗೂ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಶಿವಮೊಗ್ಗ ನಗರ ಕಾರ್ಯಪಾಲಕ ಅಭಿಯಂತರರು ರಾಘವೇಂದ್ರ ಡಿ.-9480689673, ಸಹಾಯಕ ಕಾರ್ಯಪಾಲಕ ಅಭಿಯಂತರರು ಜೀವನ್ ಯು.-9686731931. ಸಹ್ಯಾದ್ರಿನಗರ, ಅಶ್ವಥನಗರ, ಮಲ್ಲೇಶ್ವರನಗರ, ಗುಡ್ಡೆಕಲ್ಲು, ಗಾಂಧಿನಗರ, ರವೀಂದ್ರನಗರ, ಬಸವನಗುಡಿ, ಟ್ಯಾಂಕ್ಮೊಹಲ್ಲಾ, ಅರಮನೆ, ವಿದ್ಯಾನಗರ, ಹರಿಗೆ, ಮಲವಗೊಪ್ಪ, ಶರಾವತಿನಗರ, ಹೊಸಮನೆ, ದುರ್ಗಿಗುಡಿ, ಗಾಂಧೀಬಜಾರ್ (ಪೂರ್ವ ಮತ್ತು ಪಶ್ಚಿಮ) – ಸಹಾಯಕ ಅಭಿಯಂತರರು ಜೀವನ್ ಯು.-9686731931.…