Subscribe to Updates
Get the latest creative news from FooBar about art, design and business.
Author: Raghu Shetty
ಸಾಗರದ ಶ್ರೀ ಮಾರಿಕಾಂಬಾ ದೇವಿಯ 9 ದಿನಗಳ ಜಾತ್ರೆ ಜನಸಾಗರದ ನಡುವೆ ಮಂಗಳವಾರದಿಂದ ಆರಂಭಗೊಂಡಿದೆ. ಮೊದಲ ದಿನ ಅಮ್ಮನವರ ದರ್ಶನಕ್ಕೆ ಲಕ್ಷಾಂತರ ಭಕ್ತರು ಬರುವ ಮೂಲಕ ದಾಖಲೆ ನಿರ್ಮಾಣವಾಗಿದೆ. ಬರುವ ಭಕ್ತರಿಗೆ ಸುಲಲಿತವಾಗಿ ದೇವಿ ದರ್ಶನ ಮಾಡಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಂಡಿದ್ದರೇ, ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನ ಭಕ್ತರು ಸರದಿ ಸಾಲಿನಲ್ಲಿ ದೇವಿ ದರ್ಶನಕ್ಕೆ ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿsಸಲಾಗಿತ್ತು. ದೇವಿಯ ದರ್ಶನಕ್ಕೆ ಪಾಸ್ ವ್ಯವಸ್ಥೆ ಸಹ ಕಲ್ಪಿಸಲಾಗಿತ್ತು. ಕೆಲವರು ಪಾಸ್ ಮೂಲಕ ಕುಟುಂಬ ಸಮೇತರಾಗಿ ಅಮ್ಮನವರ ದರ್ಶನ ಪಡೆದರು. ಬೇರೆಬೇರೆ ಸಂಘ ಸಂಸ್ಥೆಗಳು ಅಮ್ಮನವರ ದರ್ಶನಕ್ಕೆ ಸರದಿ ಸಾಲಿನಲ್ಲಿ ನಿಂತ ಭಕ್ತರಿಗೆ ನೀರು, ಪಾನಕ ಇನ್ನಿತರೆ ನೀಡಿ ಸೇವೆ ಮಾಡಿದರು. ಸಾಗರದ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬೆ ದರ್ಶನಕ್ಕೆ ಭಕ್ತರು ನೂಗುನುಗ್ಗಲು ಮಾಡಿದ್ದು ಕಂಡು ಬಂದಿದೆ. ರಾತ್ರಿ ೯ ಗಂಟೆಯಿಂದಲೇ ಮಾರಿಕಾಂಬಾ ದೇವಿ ಪೂಜೆಗೆ ಜನರು ಸರದಿ ಸಾಲಿನಲ್ಲಿ ನಿಂತಿದ್ದರು. ರಾತ್ರಿ ನಿಂತವರಿಗೆ ಬೆಳಿಗ್ಗೆ ೫ ಗಂಟೆಗೆ…
ಶಿವಮೊಗ್ಗ: ಕೇಂದ್ರ ಹಣಕಾಸು ಸಚಿವರು ಮಂಡಿಸಿದ 9ನೇ ಬಜೆಟ್ ಆತ್ಮನಿರ್ಭರ ಭಾರತ, ವಿಕಸಿತ ಭಾರತ ಹಾಗೂ ಸ್ವಾವಲಂಬಿ ಭಾರತದ ನಿರ್ಮಾಣದ ಸ್ಪಷ್ಟ ದೃಷ್ಟಿಕೋನವನ್ನು ಹೊಂದಿದ್ದು, ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಜೆಟ್ ಜನಪ್ರಿಯತೆಯ ಲೆಕ್ಕಾಚಾರಕ್ಕಲ್ಲ, ರಾಷ್ಟ್ರದ ದೀರ್ಘಕಾಲೀನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ ಎಂದರು. ಜಾಗತಿಕ ಆರ್ಥಿಕ ಅಸ್ಥಿರತೆಗಳ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಧೈರ್ಯಶಾಲಿ ಸುಧಾರಣೆಗಳನ್ನು ಕೈಗೊಳ್ಳಲಾಗಿದೆ. ಕೈಗಾರಿಕೆ, ಸೆಮಿಕಂಡಕ್ಟರ್, ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ವಲಯಗಳಿಗೂ ಸಮಾನ ಆದ್ಯತೆ ನೀಡಲಾಗಿದ್ದು, ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿದೆ ಎಂದು ಹೇಳಿದರು. ಹಿಂದಿನ ಆರ್ಥಿಕ ವರ್ಷದಲ್ಲಿ ಹಣಕಾಸು ಕೊರತೆಯನ್ನು 4.4 ಶೇಕಡಕ್ಕೆ ಇಳಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮೂಲಭೂತ ಸೌಕರ್ಯಗಳಿಗೆ ಅಲ್ಪ ಅನುದಾನ ನೀಡಲಾಗುತ್ತಿದ್ದರೆ, ಎನ್ಡಿಎ ಸರ್ಕಾರದ ಕಾಲದಲ್ಲಿ ರಸ್ತೆ, ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳ…
ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೊಲೀಸ್ ಇಲಾಖೆ ಕುರಿತು ಜನಸಾಮಾನ್ಯರಲ್ಲಿ ಗಂಭೀರ ಪ್ರಶ್ನೆಗಳು ಮೂಡುತ್ತಿವೆ. ಸಮಾಜದ ರಕ್ಷಕರಾಗಬೇಕಾದ ಪೊಲೀಸರು ಕೆಲವೊಮ್ಮೆ ದರ್ಪ, ದೌರ್ಜನ್ಯ ಹಾಗೂ ನಿರ್ಲಕ್ಷ್ಯದ ಪ್ರತೀಕವಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪೊಲೀಸರು ನಮ್ಮ ರಕ್ಷಕರು, ಕಾನೂನಿನ ಜಾರಿಗಾರರು, ಸಮಾಜದ ಶಾಂತಿಯ ಕಾವಲುಗಾರರು ಎಂಬ ನಂಬಿಕೆ ಜನರಲ್ಲಿ ಇದ್ದರೂ, ಠಾಣೆಗಳಿಗೆ ಹೋಗಲು ಇನ್ನೂ ಭಯಪಡುವ ವಾತಾವರಣ ನಿರ್ಮಾಣವಾಗಿರುವುದು ಕಳವಳಕಾರಿಯಾಗಿದೆ. ದೂರುದಾರರೊಂದಿಗೆ ಕೆಲ ಪೊಲೀಸ್ ಸಿಬ್ಬಂದಿ ನಡೆದುಕೊಳ್ಳುವ ರೀತಿ, ಪ್ರಭಾವಿಗಳು ಹಾಗೂ ಹಣವಂತರಿಗೆ ಮಾತ್ರ ನ್ಯಾಯ ದೊರೆಯುತ್ತದೆ ಎಂಬ ಭಾವನೆ ಜನಸಾಮಾನ್ಯರಲ್ಲಿ ಗಟ್ಟಿಯಾಗಿ ಬೇರೂರುವಂತೆ ಮಾಡಿದೆ. ಓಸಿ ಬಿಡ್ಡರ್ಗಳು, ಕಳ್ಳರು, ರೌಡಿಗಳೇ ಇಂದು ಸಮಾಜದ ಮುಂಚೂಣಿ ನಾಯಕರೆಂಬಂತೆ ಹೊರಹೊಮ್ಮುತ್ತಿರುವುದು ಕಳವಳಕಾರಿ. ಅಕ್ರಮ ಹಣ ಮತ್ತು ಬಲದ ನೆರವಿನಿಂದ ದೇವಸ್ಥಾನ ಸಮಿತಿಗಳ ಅಧ್ಯಕ್ಷರು, ಸಮಾಜ ಸೇವಕರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರಾಗುತ್ತಿರುವ ಈ ವ್ಯಕ್ತಿಗಳ ರಾಜಕೀಯ–ಸಾಮಾಜಿಕ ಪ್ರಭಾವಕ್ಕೆ ಕಡಿವಾಣ ಹಾಕಿದರೆ, ಅಕ್ರಮ ದಂಧೆಗಳು ಸಹಜವಾಗಿಯೇ ಕುಂಠಿತವಾಗಲಿವೆ. ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ…
ಶಿವಮೊಗ್ಗ: 37 ವರ್ಷಗಳ ನಂತರ ತರಳಬಾಳು ಹುಣ್ಣಿಮೆ ಉತ್ಸವ ನಡೆಯುತ್ತಿರುವುದು ಸಂತಸದ ವಿಷಯ ಎಂದು ತಿಳಿಸಿದ್ದಾರೆ. ಅವರು ಕನಕಪುರದ ಕನಕೋತ್ಸವ ಕಾರ್ಯಕ್ರಮದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಈ ಬಾರಿ ಐದು ಗ್ಯಾರಂಟಿ ಯೋಜನೆಯಡಿ ಮನೆಗೊಂದು ರಂಗೋಲಿ ಸ್ಪರ್ಧೆ ಆಯೋಜನೆಯಾಗಿದೆ. ಈ ಕಾರ್ಯಕ್ರಮದಲ್ಲಿ 73,000ಕ್ಕೂ ಹೆಚ್ಚು ಜನ ಭಾಗವಹಿಸಿದ್ದು, 11,000 ಮುಸ್ಲಿಂ ಮಹಿಳೆಯರು ಮೆಹಂದಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು. ಉಪಮುಖ್ಯಮಂತ್ರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆಯನ್ನು ಪಕ್ಷದ ತೀರ್ಮಾನದಂತೆ ಮುಂದೂಡಲಾಗಿದೆ ಎಂದು ತಿಳಿಸಿದ್ದರು. ಅವರು ಈ ಚುನಾವಣೆಗೆ ಅರ್ಜಿ ಹಾಕಿಲ್ಲ ಮತ್ತು ಜಾರ್ಜ್ ರಾಜೀನಾಮೆ ಬಗ್ಗೆ ಯಾವುದೇ ಮಾಹಿತಿ ಹೊಂದಿಲ್ಲವೆಂದು ಹೇಳಿದ್ದಾರೆ. ಆಧಿಕಾರಿಗಳೊಂದಿಗೆ ಸಮಾಲೋಚನೆ: ಡಿ.ಕೆ.ಶಿವಕುಮಾರ್ ಆಡಳಿತದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡುವಲ್ಲಿ ತಪ್ಪಿಲ್ಲ ಎಂದು ಹೇಳಿದರು. “ಯಾರಾದರೂ ಅಧಿಕಾರಿಗಳೊಂದಿಗೆ ಚರ್ಚಿಸಬಹುದು. ಅಧಿಕಾರಿಗಳು ತಮ್ಮ ಜವಾಬ್ದಾರಿಯಂತೆ ಸಲಹೆ ನೀಡುತ್ತಾರೆ. ಅದರಲ್ಲಿ ದೋಷವಿಲ್ಲ” ಎಂದು ಅವರು ಹೇಳಿದರು. ಮನರೇಗಾ ಯೋಜನೆ ಮತ್ತು ಗ್ರಾಮೀಣ ಅಭಿವೃದ್ಧಿ: ಅವರ ಹೇಳಿಕೆಯಿಂದ, ಮನರೇಗಾ ಯೋಜನೆಯಲ್ಲಿ ತಮ್ಮ ಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ…
ಶಿವಮೊಗ್ಗ : ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ ಹೊತ್ತಿದ ಬೆಂಕಿಗೆ ಮನೆ ಮಾಲೀಕ ಮಲ್ಲಿಕಾರ್ಜುನ್ ತೀವ್ರ ರೀತಿ ಗಾಯಗೊಂಡಿರುವ ಘಟನೆ ಶಿಕಾರಿಪುರ ಪಟ್ಟಣದ ಕುಂಬಾರಗುಂಡಿ ಬಡಾವಣೆಯಲ್ಲಿ ನಡೆದಿದೆ. ಮನೆಗೆ ಬಂದ ತುಂಬಿದ ಅಡುಗೆ ಅನಿಲ ಸಿಲಿಂಡರ್ ಅನ್ನು ಮಲ್ಲಿಕಾರ್ಜುನ್ ಹಾಗೂ ಅವರ ಪತ್ನಿ ಓಲೆಗೆ ಸಂಪರ್ಕ ನೀಡುವ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹರಡಿಕೊಂಡಿದೆ. ಬೆಂಕಿಯಿಂದ ತೀವ್ರ ರೀತಿ ಗಾಯಗೊಂಡ ಮನೆ ಮಾಲೀಕ ಮಲ್ಲಿಕಾರ್ಜುನ್ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಕಿಯ ತೀವ್ರತೆಗೆ ಮನೆಯ ಮೇಲ್ಚಾವಣಿ ಹಾರಿ ಹೋಗಿ ಮನೆಗೆ ಬಹುತೇಕ ಹಾನಿಯಾಗಿದೆ. ಅಡುಗೆ ಮನೆಯಲ್ಲಿದ್ದ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಸಂದರ್ಭದಲ್ಲಿ ಮನೆಯಿಂದ ಹೊರಗೆ ಓಡಿ ಬಂದ ಮಲ್ಲಿಕಾರ್ಜುನ್ ಅಕ್ಕ ಹಾಗೂ ಪತ್ನಿ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಬೆಂಕಿ ಹರಡಿದ ಸಂದರ್ಭದಲ್ಲಿ ಮನೆ ಸಮೀಪವಿದ್ದ ಎದುರು ಮನೆ ಮಹಿಳೆ ಕಮಲಮ್ಮ ಅವರ ಕಾಲಿಗೆ ಬೆಂಕಿ ತಗುಲಿದ ಪರಿಣಾಮ ಸಣ್ಣ…
ಶಿವಮೊಗ್ಗ : ಮನೆಯ ಬಾತ್ ರೂಂ ನಲ್ಲಿ ಹೆಬ್ಬಾವುವೊಂದು ಕಾಣಿಸಿಕೊಂಡು ಮನೆಯವರಿಗೆ ಭಯ ಹುಟ್ಟಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಗೋಪಾಳದ ತುಳಸಿ ಬಡಾವಣೆಯ ವಿನಯ್ ಎಂಬುವರ ಮನೆಯ ಬಾತ್ ರೂಂ ನಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿದೆ. ಇದನ್ನ ಕಂಡ ಮನೆಯವರು ಶಾಕ್ ಆಗಿದ್ದಾರೆ. ವಿನಯ್ ಮನೆಯಲ್ಲಿ ಕಳೆದ ರಾತ್ರಿ ಏಕಾಏಕಿ ಹೆಬ್ಬಾವು ಕಾಣಿಸಿಕೊಂಡಿದೆ. ಮನೆಯೊಳಗೆ ಬಂದ ಹೆಬ್ಬಾವು ಬಾತ್ ರೂಂ ಕಾಣಿಸಿಕೊಂಡಿದೆ. ಕೂಡಲೇ ಉರಗ ತಜ್ಞ ಸ್ನೇಕ್ ಕಿರಣ್ ಗೆ ಮನೆಯವರು ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹೆಬ್ಬಾವು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಇದರಿಂದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಶಿವಮೊಗ್ಗ ನಗರದ ರಾಗಿಗುಡ್ಡ ಪ್ರದೇಶದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಶಾಲೆಯಲ್ಲಿರುವ 14 ವಿದ್ಯಾರ್ಥಿನಿಯರಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗಿದೆ. ಕೆಮ್ಮು ತೀವ್ರಗೊಂಡ ಕಾರಣ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 6 ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ವಸತಿ ಶಾಲೆಯ ವಾರ್ಡನ್ ನಿರಂತರ ಕೆಮ್ಮಿನ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದಾರೆ. ಇದು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಬಾಲಕಿಯರ ವಸತಿ ಶಾಲೆ ಆಗಿದ್ದು, ಪ್ರಕರಣದ ಗಂಭೀರತೆಯನ್ನು ಗಮನಿಸಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ, ತಹಶೀಲ್ದಾರ್ (THO) ಹಾಗೂ ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ಹೆಚ್ಚಿನ ತನಿಖೆ ಮತ್ತು ಅಗತ್ಯ ಕ್ರಮಗಳನ್ನು ಆರೋಗ್ಯ ಇಲಾಖೆ ಕೈಗೊಂಡಿದೆ.
ಶಿವಮೊಗ್ಗ: ಮನೆ ಬೋಗ್ಯ ಕೊಡಿಸುವುದಾಗಿ ಹೇಳಿ ಅಕ್ರಮವಾಗಿ 5 ಲಕ್ಷ ಹಣ ಪಡೆದು ಮೋಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಕಚೇರಿ ಮುಂಭಾಗ ಡಿಎಸ್ಎಸ್ ಸಂಚಾಲಕ ಚಿನ್ನಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಚಂದ್ರಿಕಾ ಎಂಬ ಮಹಿಳೆಯಿಂದ ಸುಮಾರು ಮೂರು ತಿಂಗಳ ಹಿಂದೆ ಕರಾರು ಮಾಡಿಕೊಂಡು ಹಣ ಪಡೆದು, ಅರ್ಚನಾ ಎಂಬ ಮಹಿಳೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ, ಡಿವೈಎಸ್ಪಿಯವರಿಗೆ ದೂರು ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣದಲ್ಲಿ ಕ್ರಮ ಕೈಗೊಳ್ಳದ ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ಅವರನ್ನು ತಕ್ಷಣವೇ ಇಲ್ಲಿಂದ ವಾಪಸ್ ಕರೆಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇಂದಿನ ಪೊಲೀಸ್ ಠಾಣೆಗಳು ಮಧ್ಯವರ್ತಿಗಳಂತೆ ವರ್ತಿಸುವುದನ್ನು ಬಿಟ್ಟು, ನೊಂದವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದರು. ಡಿಎಸ್ಎಸ್ ರಾಜ್ಯ ಖಜಾಂಚಿ ಸತ್ಯ ಮಾತನಾಡಿ ನೊಂದ ದಲಿತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದಲೇ ಸರ್ಕಾರ…
ಭದ್ರಾವತಿ: ತರಳಬಾಳು ಹುಣ್ಣಿಮೆ ತನ್ನದೆ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪೂಜ್ಯರು ನಗರದ ಉಂಬ್ಳೆಬೈಲು ರಸ್ತೆಯ ಬೊಮ್ಮನಕಟ್ಟೆ ವಿಐಎಸ್ಎಲ್ ಹೆಲಿಪ್ಯಾಡ್ ಬಳಿ ಹಮ್ಮಿಕೊಂಡಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವದ ಕಾರ್ಯಕ್ರಮದ ಭರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಮಹಾಮಂಟಪ, ರಾಷ್ಟ್ರಕವಿ ಕುವೆಂಪು ಮಹಾವೇದಿಕೆಯಲ್ಲಿ ನಡೆದ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು. ಯಡಿಯೂರಪ್ಪ ನವರು ಸಿಎಂ ಆಗಿದ್ದ ಸಂಧರ್ಭದಲ್ಲಿ ಶ್ರೀ ಮಠಕ್ಕೆ ಏನಾದರೂ ಕೊಡುಗೆ ಕೊಡಬೇಕು ಎಂದು ಕೊಂಡಿದ್ದೇನೆ ಏನು ಕೊಡಲಿ ಎಂದು ಹೇಳಿದಾಗ ಶ್ರೀ ಮಠಕ್ಕೆ ಕೊಡುಗೆ ಕೊಟ್ಟರೆ ನೀವು ಕೆಟ್ಟ ಹೆಸರು ಪಡೆಯುತ್ತೀರಾ, ಹಾಗಾಗಿ ಮಠಕ್ಕೆ ಕೊಡುಗೆ ನೀಡುವ ಬದಲಿಗೆ ಮಠದವತಿಯಿಂದ ಹಮ್ಮಿಕೊಂಡಿರುವ ನೀರಾವರಿ ಯೊಜನೆಗಳಿಗೆ ಅನುದಾನ ನೀಡಿ ಎಂದಾಗ ೨೫ ಕೋಟಿ ರೂಗಳನ್ನ ಮಂಜೂರು ಮಾಡುವ ಮೂಲಕ ಜಗಳೂರು, ಭರಮಸಾಗರ, ಹಳೇಬೀಡುಗಳಲ್ಲಿ ಏತ ನೀರಾವರಿ ಯೋಜನೆಗಳು ಅನುಷ್ಟಾನಗೊಳ್ಳಲು ಕಾರಣೀಭೂತರಾದರು ಎಂದು ಅವರ ಕೊಡುಗೆಯನ್ನು ಸ್ಮರಿಸಿದರು. ರಾಜಪ್ರಭುತ್ವದ ಕಾಲದಲ್ಲಿ ವಿಐಎಸ್ಎಲ್ ಕಾರ್ಖಾನೆ…
ಅಪಹರಿಸಿ, ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ 9 ಗೋವುಗಳು ಶಿವಮೊಗ್ಗ : ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 9 ಗೋವುಗಳನ್ನು ರಕ್ಷಿಸಿರುವ ಮಾಳೂರು ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಡಗದ್ದೆ ಸಮೀಪದ ನೆಲ್ಲಿಸರ ಕ್ಯಾಂಪ್ ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸುತ್ತಮುತ್ತಲ ಹಳ್ಳಿಗಳಿಂದ ಹಸುಗಳು ಮತ್ತು ಕರುಗಳನ್ನು ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿರುವಾಗ ಗಸ್ತಿನಲ್ಲಿದ್ದ ಮಾಳೂರು ಪೊಲೀಸರು ಅನುಮಾನಗೊಂಡು ಗೋವುಗಳಿದ್ದ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿ ಪರಿಶೀಲಿಸಿದಾಗ ಹಸುಗಳಿರುವುದು ಪತ್ತೆಯಾಗಿದೆ. ಸಣ್ಣ ವಾಹನದಲ್ಲಿ ಒಂಬತ್ತು ಹಸುಗಳನ್ನು ಸ್ವಲ್ಪವೂ ಜಾಗವಿಲ್ಲದೆ ಇಕ್ಕಟ್ಟಾಗಿ ಬಂಧಿಸಿ ಸಾಗಿಸುತ್ತಿದ್ದರು. ಕೂಡಲೆ ಹಸುಗಳನ್ನು ವಶಕ್ಕೆ ಮಾಳೂರು ಠಾಣಾ ಪೊಲೀಸರು ಪಡೆದಿದ್ದಾರೆ. ಶಿವಮೊಗ್ಗದ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ವಶಕ್ಕೆ ಪಡೆದ ಗೋವುಗಳನ್ನು ಸುರಕ್ಷಿತವಾಗಿ ಶಿವಮೊಗ್ಗದ ಗೋಶಾಲೆಯೊಂದಕ್ಕೆ ಕಳುಹಿಸಲಾಗಿದೆ ಎಂದು ಮಾಳೂರು ಪಿಎಸ್ಐ ಸಂತೋಷ್ ತಿಳಿಸಿದ್ದಾರೆ.