Subscribe to Updates
Get the latest creative news from FooBar about art, design and business.
Author: Raghu Shetty
ಶಿವಮೊಗ್ಗ : ಸ್ವಾತಂತ್ರ್ಯಾನಂತರ ಈವರೆಗೆ ಮೃತರಾದ ಪೊಲೀಸ್ ಸಿಬ್ಬಂದಿ ಒಟ್ಟು ೩೬೦೦೦, ಸೇನೆಯ ಹೋರಾಟದಲ್ಲಿ ಮೃತರಾದ ಸೈನಿಕರ ಸಂಖ್ಯೆ ೨೩೦೦೦. ದೇಶದ ಗಡಿಕಾಯುವ ಸೈನಿಕರ ಸ್ಮರಣೀಯ ಸೇವೆಯನ್ನು ಮೀರಿ, ಅತೀ ಒತ್ತಡದಲ್ಲಿ, ಯಾವುದೇ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಸೇವೆ ಅತ್ಯಂತ ಮೌಲಿಕವಾದುದು ಮತ್ತು ಸ್ಮರಣೀಯವಾದುದು ಎಂದು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶ ಮಂಜುನಾಥನಾಯಕ್ಅವರು ಹೇಳಿದರು. ಅವರು ಪೊಲೀಸ್ ಇಲಾಖೆಯು ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹುತಾತ್ಮರ ಆರಕ್ಷಕರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತ್ತಿದ್ದರು. ಯಾವುದೇ ಸಂದರ್ಭದಲ್ಲಿ ಸದಾ ಸನ್ನದ್ಧರಾಗಿದ್ದು ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಅಭಿನಂದನೀಯವಾದುದ್ದು ಹಾಗೂ ಸೈನಿಕರ ಸೇವೆಗಿಂತ ಮಹತ್ವದ್ದಾಗಿದೆ ಎಂದರು. ಪೊಲೀಸ್ ಸಿಬ್ಬಂಧಿಗಳಿಗೆ ದೊರೆಯುವ ಗೌರವ ಅವರ ಕುಟುಂಬದ ಎಲ್ಲಾ ಸದಸ್ಯರಿಗೂ ದೊರೆಯುವಂತಾಗಬೇಕು. ಕೇವಲ ವೇತನ-ಭತ್ಯೆಗಳಿಂದ ಅವರನ್ನು ಸಮಾಧಾನಿಸುವುದು ಸಾಧ್ಯವಾಗದು ಎಂದ ಅವರು, ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಶಿವಮೊಗ್ಗ ಅತಿಸೂಕ್ಷ್ಮ ಪ್ರದೇಶ. ಆದಾಗ್ಯೂ ಶಿವಮೊಗ್ಗ ಜಿಲ್ಲೆಯ ಶಾಂತಿಯುತ ವಾತಾವರಣಕ್ಕೆ ಪೊಲೀಸ್ ಇಲಾಖೆಯ…
ಸಿದ್ದರಾಮಯ್ಯ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ ರಾಜಕೀಯ, ಮಳೆ ಬಗ್ಗೆ ಆಗಾಗ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿಯುತ್ತಲಿರುತ್ತಾರೆ. ಇನ್ನೂ ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಹಾಸನ ಜಿಲ್ಲೆ ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ತಾವು ಹಿಂದೆ ನುಡಿದ ಭವಿಷ್ಯವನ್ನು ಮತ್ತೆ ಪುನರುಚ್ಚಾರ ಮಾಡಿದ್ದಾರೆ. ಸದ್ಯ ಇದೀಗ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ವಿಚಾರದಲ್ಲಿ ಕೋಡಿಶ್ರೀಗಳು ಯುಗಾದಿ ಹಬ್ಬದ ವೇಳೆ ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ, ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನಲೆಗೆ ಬರುತ್ತಲಿದೆ. ಇದೇ ವೇಳೆಯೇ ಕೋಡಿಮಠ ಶ್ರೀಗಳು ಹೇಳಿರು ಹೇಳಿಕೆಯೊಂದು ಭಾರೀ ಕುತೂಹಲ ಸೃಷ್ಟಿಸಿದೆ. ಹಾಲು ಕೆಟ್ಟರೂ ಹಾಲುಮತ ಕೆಡುವುದಿಲ್ಲ ಎಂದು ಹೇಳಿದ್ದರು. ಉತ್ತರದ ನಾಡಿನಲ್ಲಿ ಹಗೆಯ ಬೇಗೆ ಎದ್ದೀತು, ಸುತ್ತುವರಿದು…
ಶಿವಮೊಗ್ಗ : ಶಿಕ್ಷಕರ ಕೊರತೆಯನ್ನು ನೀಗಿಸಲು ಸರ್ಕಾರವು ದಿಟ್ಟ ಹೆಜ್ಜೆ ಇರಿಸಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಸಂಬಂಧ ಖಾಲಿ ಇರುವ ೧೩೦೦೦ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಅರ್ಹ ಪದವೀಧರರಿಗೆ ಡಿಸೆಂಬರ್೦೭ ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಇಲಾಖೆಯು ಅಕ್ಟೋಬರ್೨೩ರಂದು ಅಧಿಸೂಚನೆ ಪ್ರಕಟಿಸಲಿದ್ದು, ಪರೀಕ್ಷೆಯಲ್ಲಿ ಹಾಜರಾಗಲಿಚ್ಚಿಸುವ ಅರ್ಹ ಪದವೀಧರರು ನವೆಂಬರ್ ೦೯ ರೊಳಗಾಗಿ ಅನೈಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ೩೦೦೦ಕೋಟಿ ರೂ.ಗಳ ಅಂದಾಜು ವೆಚ್ಚದ ಕರ್ನಾಟಕ ಪಬ್ಲಿಕ್ ಶಾಲೆಯ ಮಹತ್ವದ ಯೋಜನೆಗೆ ಶಿವಮೊಗ್ಗದಲ್ಲಿಯೇ ಚಾಲನೆ ದೊರೆಯಲಿರುವುದು ವಿಶೇಷವಾಗಿದೆ. ಈ ಹಿಂದೆ ಯುವನಿಧಿ ಯೋಜನೆಯನ್ನೂ ಮುಖ್ಯಮಂತ್ರಿಗಳು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಉದ್ಘಾಟಿಸಿದ್ದರು ಎಂದವರು ನುಡಿದರು. ಪ್ರಸ್ತುತ ಆರಂಭಿಸಲಾಗಿರುವ ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಿಂದಾಗಿ ಸರ್ಕಾರದಿಂದ ಜನರ ಹಿತಕ್ಕಾಗಿ ರೂಪಿಸಿ ಅನುಷ್ಠಾನಗೊಳಿಸುವ ಯೋಜನೆಗಳನ್ನು ಎಲ್ಲಾ…
ಶಿವಮೊಗ್ಗ : ನಗರದ ಸವಳಂಗ ರಸ್ತೆಯಲ್ಲಿರುವ ಅಕ್ಷರ ಸಂಯುಕ್ತ ಪದವಿಪೂರ್ವ ಕಾಲೇಜು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯೊಂದಿಗೆ ಸಂಯೋಜಿಸಿಕೊಂಡಿದೆ ಎಂದು ಮಾಜಿ ಶಾಸಕ ಕೆ.ಬಿ.ಅಶೋಕ ನಾಯ್ಕ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ 2014 ರಲ್ಲಿ ಸ್ಪರ್ಧಾತ್ಮಕ ರೀತಿಯಲ್ಲಿ ಉತ್ತಮ ಶಿಕ್ಷಣ ನೀಡು ಮಹರ್ಷಿ ಹಾರಿರಾಮ್ ಅವರ ಹೆಸರಿನಲ್ಲಿ ಅಕ್ಷರ ವಿದ್ಯಾಸಂಸ್ಥೆಯನ್ನ ಆರಂಭಿಸಲಾಗಿತ್ತು. ಮಲೆನಾಡು ಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ ಉನ್ನತ ಶಿಕ್ಷಣಕ್ಕಾಗಿ ಮಂಗಳೂರು ಮತ್ತು ಉಡುಪಿ ಜಿಲ್ಲೆಗೆ ಹೋಗುತ್ತಿದ್ದರು. ಇದಕ್ಕಾಗಿ ಅಲ್ಲಿನ ಗುಣಮಟ್ಟದ ಶಿಕ್ಷಣ ಇಲ್ಲಿ ಆರಂಭಿಸಲು ಅಕ್ಷರ ವಿದ್ಯಾಸಂಸ್ಥೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯೊಂದಿಗೆ ಶೈಕ್ಷಣಿಕ ಸಹಭಾಗಿತ್ವ ಪಡೆದುಕೊಂಡಿದೆ. ನಮ್ಮ ಮಲೆನಾಡಿನಲ್ಲಿರುವ ಸಂಸ್ಥೆಯಿಂದ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿದ್ದಾರೆ. ಆದರೆ ನೀಟ್ ನತ್ತು ಜೆಇಇ ನಲ್ಲಿ ಮಲೆನಾಡಿಗರು ಪಾಸ್ ಕಡಿಮೆಯಾಗಿದೆ. ಹಾಗಾಗಿ ಈ ಶಿಕ್ಷಣ ಪಡೆಯಲು ಕರಾವಳಿಗೆ ಹೋಗುತ್ತಿರುವುದರಿಂದ ಅದನ್ನ ಶಿವಮೊಗ್ಗದಲ್ಲಿಯೇ ನೀಡಲು ಚಿಂತಿಸಲಾಗಿದೆ. ಇದರ ಫೀ ಸ್ಟ್ರಕ್ಚರ್ ಕ್ರಿಯೇಟಿವ್ ಸಂಸ್ಥೆಯ ಶುಲ್ಕದ ರೀತಿಯಲ್ಲಿಯೇ ಇರಲಿದೆ ಎಂದರು. ವಿಶ್ವವನ್ನು ಬದಲಾಯಿಸಲು ನಾವು ಬಳಸಬಹುದಾದ…
ಶಿವಮೊಗ್ಗ : 2041ರ ಹೊತ್ತಿಗೆ ಇರಬಹುದಾದ ಶಿವಮೊಗ್ಗ-ಭದ್ರಾವತಿಯ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಗರಾಭಿವೃಧ್ಧಿ ವ್ಯಾಪ್ತಿಯಲ್ಲಿ ಸರ್ವತೋಮುಖ ಅಭಿವೃದ್ಧಿಗೆ ಮಹಾಯೋಜನೆ ಸಿದ್ಧಪಡಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು. ಅವರು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ, ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಮಲೆನಾಡು ಭಾಗದ ಪ್ರಮುಖ ನಗರವಾಗಿರುವ ಶಿವಮೊಗ್ಗ ಜಿಲ್ಲೆ ಹಿಂದೆಂದಿಗಿಂತ ಹೆಚ್ಚು ವೇಗವಾಗಿ ಅಭಿವೃದ್ಧಿಪಥದತ್ತ ದಾಪುಗಾಲಿಡುತ್ತಿದೆ. ಇಂತಹ ವಿಶೇಷ ಸಂದರ್ಭದಲ್ಲಿ ಜಿಲ್ಲಾ ಕೇಂದ್ರವನ್ನು ಮುಂದಿನ ಕೆಲವು ದಶಕಗಳಲ್ಲಿ ಹೆಚ್ಚಾಗುವ ಜನಸಂಖ್ಯೆಯನ್ನಾಧರಿಸಿ, ಅಂದಿನ ಜನಸಂಖ್ಯೆ, ವಾಹನ ದಟ್ಟಣೆ, ಆಸ್ಪತ್ರೆ, ಶಾಲಾ-ಕಾಲೇಜುಗಳು, ಕೆರೆ-ಕಾಲುವೆಗಳು, ಸಂಪರ್ಕ ರಸ್ತೆಗಳು, ಉದ್ಯಾನವನಗಳು, ಒಟ್ಟಾರೆ ನಗರದ ಸೌಂದರ್ಯ ಮುಂತಾದವುಗಳನ್ನು ಗಮನದಲ್ಲಿಟ್ಟುಕೊಂಡು ಕ್ರಿಯಾಯೋಜನೆ ರೂಪಿಸಲು ಉದ್ದೇಶಿಸಲಾಗಿದೆ ಎಂದವರು ನುಡಿದರು. ಈ ಸಂಬಂಧ ಈಗಾಗಲೇ ಸಂಬಂಧಿತ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ, ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ 2 ಹಂತದ ಸಭೆಯನ್ನು ಆಯೋಜಿಸಿ, ವಿಸ್ತೃತವಾಗಿ ಸಮಾಲೋಚನೆ ನಡೆಸಲಾಗಿದೆ. ಇಂದೂ ಮಧ್ಯಾಹ್ನ…
ದೈಹಿಕ ಸಮಸ್ಯೆ ಮಾತ್ರವೇ ಆರೋಗ್ಯ ಸಮಸ್ಯೆ ಅಲ್ಲ: ಡಾ. ಕೆ.ಎಸ್. ಪಲ್ಲವಿ ಶಿವಮೊಗ್ಗದ ವಿನೋಬಾ ನಗರ ಸತ್ಸಂಗದಲ್ಲಿ ದನ್ವಂತರಿ ಜಯಂತಿ ಶಿವಮೊಗ್ಗ: ಆರೋಗ್ಯ ಸಮಸ್ಯೆ ಎಂದರೆ ಕೇವಲ ದೈಹಿಕವಾಗಿ ಅಸ್ವಸ್ಥವಾಗುವುದಲ್ಲ. ಮಾನಸಿಕವಾಗಿ, ಧಾರ್ಮಿಕವಾಗಿ, ಸಾಮಾಜಿಕವಾಗಿಯೂ ಕೂಡ ಸ್ವಸ್ಥವಾಗಿ ಇರುವುದೇ ನಿಜವಾದ ಆರೋಗ್ಯ ಎಂದು ಭಾರತಿಯ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಡಾ. ಕೆ.ಎಸ್. ಪಲ್ಲವಿ ತಿಳಿಸಿದ್ದಾರೆ. ವಿನೋಬಾ ನಗರದ ಸತ್ಸಂಗದಲ್ಲಿ ನಡೆದ ದನ್ವಂತರಿ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಧನ್ವಂತರಿ ಅವರ ಚರಕ ಸಂಹಿತೆ ಹಾಗೂ ಇತರೆ ಗ್ರಂಥಗಳ ಪ್ರಕಾರ, ದೇವತಾರಾಧನೆ ಕೂಡಾ ಒಂದು ಚಿಕಿತ್ಸೆ. ಇದನ್ನು ದೈವವ್ಯಪಾಶ್ರಯ ಚಿಕಿತ್ಸೆ ಎಂದು ಕರೆಯಲಾಗಿದೆ ಎಂದು ಅವರು ವಿವರಿಸಿದರು. ಸತ್ವಾವಜಯ ಚಿಕಿತ್ಸೆ ಮೂಲಕ ಮಾನಸಿಕ ಸಮಾಲೋಚನೆ ಹಾಗೂ ಯುಕ್ತಿವ್ಯಪಾಶ್ರಯದ ಮೂಲಕ ಮೂಲಕ ಔಷಧ ಚಿಕಿತ್ಸೆಯನ್ನು ಧನ್ವಂತರಿ ಅವರು ವಿವರಿಸಿದ್ದಾರೆ. ಈ ಹಿನ್ನಲೆಯಲ್ಲಿ ಭಜನೆಯಂತ ಚಟುವಟಿಕೆಗಳು ಆರೋಗ್ಯದ ಮೇಲೆ ಸತ್ಪರಿಣಾಮ ಬೀರುತ್ತವೆ ಎಂದು ವಿಶ್ಲೇಷಿಸಿದರು. ಈ ಸಂದರ್ಭದಲ್ಲಿ ಸತತ 24 ವರ್ಷಗಳಿಂದ ನಿರಂತರವಾಗಿ ಭಜನೆ, ಲಲಿತಾ…
ಶಿವಮೊಗ್ಗ : ನಗರದ ಕುವೆಂಪು ರಂಗಮಂದಿರದಲ್ಲಿ ಅ.19ರಂದು ಶ್ರೀ ಪಾಲಚಂದ್ರ ಡ್ಯಾನ್ಸ್ ಇನ್ಸ್ಟಿಟ್ಯೂಟ್ ಆಫ್ ಶಿವಮೊಗ್ಗ ಮತ್ತು ಶಿವ ತಾಂಡವ ನೃತ್ಯ ಸಂಸ್ಥೆಯಿಂದ ಪುನೀತ್ ರಾಜಕುಮಾರ್ ಕಪ್ ರಾಜ್ಯಮಟ್ಮದ ನೃತ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ದೀಪು ಸರ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಸುಮಾತು 10 ವರ್ಷಗಳ ನಂತರ ಈ ಸ್ಥರ್ಧೆಯನ್ನು ನಾವು ತಮ್ಮ ಗುರುಗಳ ಮಾರ್ಗದರ್ಶದಲ್ಲಿ ಮತ್ತೊಮ್ಮೆ ಏರ್ಪಡಿಸುತ್ತಿದ್ದೇವೆ. ನಮ್ಮ ಸಂಸ್ಥೆಯಿಂದ ಹಲವಾರು ಯುವಕ-ಯುವತಿಯರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಹುಮಾನ ತಂದು ಜಿಲ್ಲೆ ಮತ್ತು ನಮಗೆ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದರು. ನೃತ್ಯ ಸ್ಪರ್ಧೆಯಲ್ಲಿ ನಾಲ್ಕು ವಿಭಾಗಗಳಾಗಿ ವಿಗಂಡಿಸಲಾಗಿದೆ. ಅದರಲ್ಲಿ ಸಬ್ ಜೂನಿಯರ್ 3 ರಿಂದ 6 ವರ್ಷ ಮಕ್ಕಳಿಗೆ ಸೋಲೋ ಸ್ಪರ್ಧೆ, ಇದರಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹಮಾನವಿದ್ದು ಆರ್ಕಷಕ ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಇದಕ್ಕೆ ಪ್ರವೇಶ ಶುಲ್ಕ 300 ರೂ ನಿಗಧಿ ಪಡಿಸಲಾಗಿದೆ ಎಂದರು.…
ಶಿವಮೊಗ್ಗ, : ರೈತರು ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಉಪ ಬೆಳೆಗಳನ್ನು ಬೆಳೆಯಬೇಕು. ಆ ಮೂಲಕ ಮಾಲ್ ಹಾಗೂ ಸೂಪರ್ ಮಾರ್ಕೆಟ್ಗಳಲ್ಲಿ ತಮ್ಮ ಸ್ಥಾನವನ್ನು ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಬೆಂಗಳೂರು ಕೃಷಿ ತಂತ್ರಜ್ಞಾನ ಅನ್ವಯಿಕ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ||ವಿ. ವೆಂಕಟಸುಬ್ರಮಣಿಯನ್ ತಿಳಿಸಿದರು. ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ ಅಂಗವಾಗಿ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ “ ಕೃಷಿ ಯಾನ- ಕೃಷಿ ಪ್ರವಾಸೋದ್ಯಮ ಕೇಂದ್ರ” ಹಾಗೂ “ ಸಹ್ಯಾದ್ರಿ ಆಹಾರೋತ್ಪನ್ನಗಳ ಮಾರಾಟ ಮಳಿಗೆ”ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತರ ಹಿತದೃಷ್ಟಿಯಿಂದ ಕೃಷಿ ವಿಶ್ವವಿದ್ಯಾಲಯವು ಹೊಸ ಉತ್ಪನ್ನಗಳನ್ನು ತಯಾರು ಮಾಡಲು ಅನೇಕ ಸೌಲಭ್ಯಗಳು ಹಾಗೂ ಸಹಕಾರವನ್ನು ನೀಡುತ್ತಿದ್ದು,…
: RAVI.A.kallambi ಸೊರಬ: ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಲ್ಲಿನ ವಿಳಂಭ ಧೋರಣೆ ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗುರುವಾರ ಮಲೆನಾಡು ರೈತರ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ನೇತೃತ್ವ ವಹಿಸಿದ್ದ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಮಾತನಾಡಿ, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬದುಕುಕಟ್ಟಿಕೊಂಡಿರುವ ರೈತರಿಗೆ ಹಕ್ಕು ಪತ್ರ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶವಿದ್ದರೂ ಅನುಷ್ಠಾನಗೊಂಡಿಲ್ಲ. 1978ರ ಏಪ್ರೀಲ್ 27ಕ್ಕಿಂತ ಹಿಂದೆ ಅರಣ್ಯ ಭೂಮಿ ಸಾಗುವಳಿ ಮಾಡಿದ ರೈತರಿಗೆ ಹಕ್ಕು ಪತ್ರ ನೀಡುವಂತೆ ಆದೇಶ ಮಾಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಯ್ದೆಯ ಅನ್ವಯ 1996ರಲ್ಲಿ 43 ಸಾವಿರ ಎಕರೆ ಭೂಮಿಯನ್ನು ಬಿಡುಗಡೆ ಮಾಡಿದೆ. ಆದರೆ, ತಾಲೂಕಿನಲ್ಲಿ 900 ರೈತರು ಅರ್ಜಿಗಳನ್ನು ಸಲ್ಲಿಸಿದ್ದರೂ, ರೈತರಿಗೆ ಕಚೇರಿಗೆ ಅಲೆದಾಡಿಸಲಾಗುತ್ತಿದೆ ಎಂದು ಆರೋಪಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ರೈತರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡುವಂತೆ ತಾಲೂಕು ಕಚೇರಿಗೆ ಕಳುಹಿಸಿದ್ದಾರೆ. ಆದರೆ, ಈ ಬಗ್ಗೆ…
ಕೇದಾರ ಶ್ರೀಗಳಿಗೆ ಶಿವಮೊಗ್ಗದಲ್ಲಿ ಅದ್ಧೂರಿ ಸ್ವಾಗತ ಶಿವಮೊಗ್ಗ : ಮಲೆನಾಡು ಜಿಲ್ಲೆ ಶಿವಮೊಗ್ಗಕ್ಕೆ ಕೇದಾರ ಶ್ರೀಗಳಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಶಿವಮೊಗ್ಗ ನಗರದಲ್ಲಿ ಆಯೋಜಿಸಿರುವ ಇಷ್ಠಲಿಂಗ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕಾಗಮಿಸಿದ ಉತ್ತರಾಖಂಡದ ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿಗಳಿಗೆ ಭಕ್ತರು ಅದ್ದೂರಿ ಸ್ವಾಗತ ಕೋರಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಶ್ರೀಗಳ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಶಿವಶಕ್ತಿ ಸಮಾಜ, ಜಿಲ್ಲಾ ವೀರಶೈವ ಜಂಗಮ ಅಚರ್ಕರು ಹಾಗೂ ಪುರೋಹಿತರ ಕ್ಷೇಮಾಭಿವೃದ್ದಿ ಸಂಘದ ಪ್ರಮುಖರು ಸೇರಿದಂತೆ ವೀರಶೈವ ಸಮಾಜ ಬಾಂಧವರು ಉಪಸ್ಥಿತರಿದ್ದರು. ಈ ವೇಳೆ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ ತಂಡಗಳು, ವಿವಿಧ ವೇಷಭೂಷಣ ತೊಟ್ಟ ಕಲಾವಿದರು ಗಮನ ಸೆಳೆದರು. ಅದರಂತೆ ನಗರದ ಘಂಟಾಕರಣ ಸಭಾಭವನದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಲಾಯಿತು. ಉತ್ತರಾಖಂಡದ ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದರು. ಈ ವೇಳೆ, ಶಿವಶಕ್ತಿ ಸಮಾಜ ಸಮಿತಿ ಅಧ್ಯಕ್ಷೆ ಹೆಚ್. ಪಾರ್ವತಮ್ಮ ಹಾಗೂ ಸದಸ್ಯರು ಹಾಗೂ ಕುಟುಂಬಸ್ಥರು, ಶ್ರೀಗಳಿಗೆ ಗೌರವಿಸಿದರು.