Author: Raghu Shetty

ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಒಂದು ವರ್ಷದ ಕರಾರಿನ ಆಧಾರದ ಮೇಲೆ ಖಾಲಿ ಇರುವ ಒಂದು ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವರು ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳನ್ನು ನಿರ್ವಹಿಸುವ ಕುರಿತು ಕನಿಷ್ಟ ೫ ವರ್ಷಗಳ ಅನುಭವ, ಕನ್ನಡ ಮತ್ತು ಇಂಗ್ಲೀಷ್ ಮಾತನಾಡು ಹಗೂ ಬರೆಯುವಲ್ಲಿ ಉತ್ತಮ ಕೌಶಲ್ಯ, ಕಂಪ್ಯೂಟರ್ ಜ್ಞಾನ, ಟ್ಯಾಲಿ ಸಾಫ್ಟ್ವೇರ್ ಉಪಯೋಗಿಸುವ ಜ್ಞಾನ ಮತ್ತು ಕೌಶಲ್ಯ ಹಾಗೂ ಕಚೇರಿ ಪತ್ರ ವ್ಯವಹಾರಗಳು ಹಾಗೂ ಲೆಕ್ಕ ಪತ್ರ ವ್ಯವಹಾರಗಳನ್ನು ಗಣಕೀಕೃತದಲ್ಲಿ ನಮೂದಿಸಿ ಕೇಂದ್ರ ಕಚೇರಿ ಗಣಕಯಂತ್ರದ ಮೂಲಕ ಕಳುಹಿಸುವ ಕುರಿತು ಪರಿಣಿತಿ ಹೊಂದಿರಬೇಕು. ಈ ಹುದ್ದೆಗೆ ೨೧,೯೦೯ ರೂ. ಗೌರವಧನ ನೀಡಲಾಗುವುದು. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಹಾಗೂ ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳು ಅರ್ಜಿ ಸಲ್ಲಿಸುವಂತಿಲ್ಲ. ಅರ್ಹ ಅಭ್ಯರ್ಥಿಗಳು ಅದಕ್ಕೆ ಸ್ವವಿವರ, ಅಂಕಪಟ್ಟಿ, ಅನುಭವ ಪ್ರಮಾಣ ಪತ್ರದೊಂದಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ…

Read More

ದುಷ್ಟನ ದುಷ್ಕೃತ್ಯಕ್ಕೆ ಭಗ್ನಗೊಂಡಿದ್ದ ದೇವಸ್ಥಾನ ಪುನರ್ ಪ್ರತಿಷ್ಠಾಪನೆ, ಬಡಾವಣೆ ನಿವಾಸಿಗಳ ಸಂತಸ ಶಿವಮೊಗ್ಗ : ನಗರದ ಶಾಂತಿನಗರ (ರಾಗಿಗುಡ್ಡ)ದ ಬಂಗಾರಪ್ಪ ಬಡಾವಣೆಯಲ್ಲಿ ನೂತನವಾಗಿ ರಾಷ್ಟ್ರಭಕ್ತರ ಬಳಗದಿಂದ ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಪುನರ್ ಪ್ರತಿಷ್ಠಾಪಿಸಿದ ಗಣಪತಿ ಮತ್ತು ಶ್ರೀ ನಾಗರ ದೇವರ ದೇವಾಲಯ ನ.೨ ಮತ್ತು ೩ ರಂದು ಅನೇಕ ಧಾರ್ಮಿಕ ಕಾರ್ಯಕ್ರಮಗಳಿಂದ ಉದ್ಘಾಟನೆಗೊಳ್ಳಲಿದೆ ಎಂದು ಜಾದವ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಜುಲೈ ೫ ರಂದು ಒಬ್ಬ ದುಷ್ಕರ್ಮಿ ತನ್ನ ಎದುರು ದೇವಸ್ಥಾನವಿದೆ ಎಂದು ಅದನ್ನು ಕುಡಿದ ಮತ್ತಿನಲ್ಲಿ ಕಾಲಿನಿಂದು ಒದ್ದು ಭಗ್ನಗೊಳಿಸಿ, ಬಡಾವಣೆಯಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದಾಗ, ಕೆ.ಎಸ್.ಈಶ್ವರಪ್ಪ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳು ಈ ದುಷ್ಕೃತ್ಯ ನಡೆಸಿದ ವ್ಯಕ್ತಿ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು. ಅದರ ಪರಿಣಾಮವಾಗಿ ಕಾನೂನು ರೀತಿಯಲ್ಲಿ ಅಧಿಕಾರಿಗಳು ಕಾನೂನು ರೀತಿಯಲ್ಲಿ ಆತನಿಗೆ ಶಿಕ್ಷೆ ನೀಡಿ ಜೈಲಿಗೆ ಕಳಿಸಿದ್ದಾರೆ, ಅದನ್ನು ರಾಗಿಗುಡ್ಡದ ಜನತೆ ಜಾತಿ-ಮತ-ಧರ್ಮ ಮರೆತು ಖಂಡಿಸಿ, ಇಂದು ಈ ದೇವಸ್ಥಾನ…

Read More

ಶಿವಮೊಗ್ಗ : ಸಕ್ರಬೈಲಿ ಆನೆ ಬಿಡಾರದಲ್ಲಿರುವ ಬಾಲಣ್ಣ ಶಿವಮೊಗ್ಗ ನಗರದಲ್ಲಿ ಪಾಲಿಕೆಯಿಂದ ನಡೆದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಎಲ್ಲಾ ಮನಸೂರೆಗೊಂಡಿತ್ತು. ಆದರೆ ಮೆರವಣಿಗೆ ವೇಳೆ ಉಂಟಾದ ಕಾಲು ನೋವಿನಿಂದ ತೊಂದ್ರೆ ಅನುಭವಿಸುತ್ತಿದ್ದ ಬಾಲಣ್ಣನಿಗೆ ನೋವುನ್ನು ಹೋಗಲಾಡಿಸಲು ಕಿವಿಗೆ ಚುಚ್ಚುಮದ್ದನ್ನು ನೀಡಲಾಗಿತ್ತು. ಆದರೆ ಅದ್ದರಿಂದ ಕಿವಿ ಭಾಗದಲ್ಲಿ ಕೊಳೆಯುವ ಸ್ಥಿತಿ ನಿರ್ಮಾಣವಾಗಿ ಬಾಲಣ್ಣ ಆರೋಗ್ಯ ಹದಗೆಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದ್ದರಿಂದ ಅಧಿಕಾರಿಗಳು ಮತ್ತು ಸಕ್ರಬೈಲಿ ಆನೆ ಬಿಡಾರದಲ್ಲಿ ಸ್ವಲ್ಪ ಮಟ್ಟಿನ ಆತಂಕ ಸೃಷ್ಟಿಯಾಗಿತ್ತು. ಇದ್ದರಿಂದ ಹೆಚ್ಚತ್ತಾ ಅಧಿಕಾರಿಗಳು ಬಾಲಣ್ಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಿಂದ ತಜ್ಞ ವೈದರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದು. ಈಗ ಬಾಲಣ್ಣ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದಾನೆ ಎಂದು ಡಿಸಿಎಫ್ ಪ್ರಸನ್ನ ಪಟಾಗಾರ್ ಎ೧ಸುದ್ದಿ ತಿಳಿಸಿದ್ದಾರೆ.                                              ಬಾಲಣ್ಣ ಆರೋಗ್ಯದಲ್ಲಿ ಯಾವುದೇ…

Read More

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಯಾವುದೇ ಪರಿಸರ ನಾಶವಗೊ ದಿಲ್ಲ. ಮುಂದಿನ ದಿನಗಳಲ್ಲಿ ವಿದ್ಯುತ್ ಅಭಾವನ್ನ ತಪ್ಪಿಸಲಿದೆ ಎಂದು ಕೆಪಿಸಿಎಲ್ ಅಧಿಕಾರಿ ಶಿಲ್ಪ ಕೆಪಿಸಿಎಲ್ ಸ್ಪಷ್ಟಪಡಿಸಿದರೂ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕರ್ನಾಟಕ ರಾಜ್ಯವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಶರಾವತಿ ಕಣಿವೆಯಲ್ಲಿ ೨೦೦೦ ಮೆಗಾವ್ಯಾಟ್ ಸಾಮರ್ಥ್ಯ ದ ಪಂಪ್ ಸ್ಟೋರೇಜ್ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ. ಪರಿಸರಕ್ಕೆ ಹೆಚ್ಚಿನ ಹಾನಿಯಾಗದೆ ಈ ಯೋಜನೆ ಯನ್ನು ಜಾರಿಗೊಳಿಸಲು ಕೆಪಿಸಿಎಲ್ ಎಲ್ಲಾ ರೀತಿಯ ಮುನ್ನೆ ಚ್ಚರಿಕಾ ಕ್ರಮಗಳನ್ನು ಕೈಗೊಂದು ಹೆಜ್ಜೆ ಇಡುತ್ತಿದೆ. ಪ್ರಸ್ತುತ ಪರಿಸರ ಸಂರಕ್ಷಣೆ ಜೊತೆಗೆ ಬೇಡಿಕೆಗೆ ಅನುಗುಣವಾಗಿ ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಈ ಯೋಜನೆ ಅನಿವಾರ್ಯ ಎಂದರು. ಈ ಯೋಜನೆ ಜಾರಿ ವೇಳೆ ಈಗಾಗಲೇ ನಿರ್ಮಾಣವಾಗಿರುವ ಗೇರುಸೊಪ್ಪ ಮತ್ತು ತಲಕಳಲೆ ಅಣೆಕಟ್ಟೆಗಳನ್ನು ಬಳಸಿಕೊಳ್ಳುವ ಪರಿಣಾಮ ಹೊಸ ಅಣೆಕಟ್ಟೆ ಅವಶ್ಯಕತೆ ಇಲ್ಲ. ೨೦೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಅತೀ ಕಡಿಮೆ ಭೂಮಿ ಬಳಕೆ ಮಾಡಿಕೊ…

Read More

ಶಿವಮೊಗ್ಗ : ಕಾಳಸಂತೆಯಲ್ಲಿ ರೇಷನ್ ಅಕ್ಕಿ ಮಾರಾಟವಾಗುತ್ತಿರುವುದಕ್ಕೆ ಕಡಿವಾಣ ಹಾಕಲು ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ​​ಮುನಿಯಪ್ಪ ತಿಳಿಸಿದರು. ಅವರು ಮಾದ್ಯಮ ಮಿತ್ರರೊಂದಿಗೆ ಮಾತನಾಡುತ್ತಾ ಯಾವುದೇ ಕಾರ್ಡ್‌ಗಳು ರದ್ದಾಗುತ್ತಿಲ್ಲ, ಅದರ ಭಯಬೇಡ, ತೆರಿಗೆ ಕಟ್ಟುತ್ತಿರುವವರಿಗೆ ಬಿಪಿಎಲ್ ಕಾರ್ಡ್‌ನಿಂದ ಎಪಿಎಲ್ ಕಾರ್ಡ್‌ಗಲಾಗಿ ಬದಲಾವಣೆಯಾಗುತ್ತಿದೆ ಎಂದರು. ಮನೆ ಕಟ್ಟುವುದಕ್ಕಾಗ ಲೋನ್ ಬೇಕದಾಗ ಐಟಿ ರಿಟಿನ್ಸ್ ಮಾಡುವವರಿಗೆ ಕಾರ್ಡ್‌ಗಳು ರದ್ದಾಗುವುದಿಲ್ಲ. ತೆರಿಗೆ ಕಟ್ಟುತ್ತು, ಬಿಪಿಎಲ್ ಕಾರ್ಡ್‌ನನ್ನು ದುರುಪಯೋಗ ಪಡಿಸಿಕೊಳ್ಳವವರಿಗೆ ಮಾತ್ರ ಕಾರ್ಡ್ ರದ್ದಾಗುತ್ತಿದೆ ಎಂದರು. ಬಿಪಿಎಲ್ ಕಾರ್ಡ್‌ಗಳ ಮಾನದಂಡ ಪರಿಷ್ಕರಣೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಕೂಡ ಇದರ ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೆಲವು ಮಾನದಂಡಗಳಲ್ಲಿ ಸರಳೀಕರಣಗೊಳಿಸಲಾಗುವುದು ಆದಾಯದ ಮಟ್ಟವನ್ನು ಹೆಚ್ಚಿಸುವ ಬಗ್ಗೆ ಗಮನ ಹರಿಸುತ್ತೇನೆ ಎಂದರು. ಕೆಲವು ಕುಟುಂಬಗಳಲ್ಲಿ ೧೦ ಕೆ.ಜಿ ಅಕ್ಕಿ ಜಾಸ್ತಿಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ೧೦ ಕೆಜಿ ಅಕ್ಕಿ ಬದಲು ೫ ಕೆಜಿ. ಅಕ್ಕಿ ಹಾಗೂ…

Read More

ಬೆಂಗಳೂರು, ಅಕ್ಟೋಬರ್ 24: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಎರಡು ಮತ್ತು ಮೂರನೇ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ. ಜೊತೆಗೆ ಆಕ್ಷೇಪಣೆಗೂ ಆಹ್ವಾನಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ತಿಳಿಸಿದ್ದಾರೆ. ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ ಆರ್ಚ್ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಇಂದು ಶುಕ್ರವಾರ (ಅಕ್ಟೋಬರ್ 24) ಕೆಇಎ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳಲ್ಲಿ ಯಾರಾದರೂ ಅಕ್ಟೋಬರ್ 25ರಂದು ಮಧ್ಯಾಹ್ನ 1 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದೆಂದು ಹೇಳಿದರು. ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆಗೆ 23-10-2025 ರ ಬೆಳಗ್ಗೆ 10.30 ರವರೆಗೆ ನಮೂದಿಸಿದ Options ಗಳನ್ನು ಪರಿಗಣಿಸಲಾಗಿದೆ. ಇದು PGCET-2025 ರ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವಾಗಿದೆ. ಅಭ್ಯರ್ಥಿಗಳು ತಾತ್ಕಾಲಿಕವಾಗಿ ಹಂಚಿಕೆಯಾಗಿರುವ ಸೀಟಿಗೆ ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಿಲ್ಲ…

Read More

ಶಿವಮೊಗ್ಗ : ನಗರದ ನವುಲೆ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ನಡುವೆ ರಣಜಿ ಟ್ರೋಫಿ ಪಂದ್ಯವನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವತಿಯಿಂದ ಅ.25 ರಿಂದ 28 ರವೆಗೆ ಆಯೋಜಿಸಲಾಗಿದೆ ಎಂದು ವಲಯ ಸಂಚಾಲಕರು ಹಾಗೂ ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ರಣಜಿ ಟ್ರೋಪಿ ಭಾರತೀಯ ಕ್ರಿಕೆಟ್‌ನ ರಾಷ್ಟ್ರೀಯ ಮಟ್ದ ಅತ್ಯಂತ ಪ್ರಾಚೀನ ಹಾಗೂ ಗೌರವಾನ್ವಿತ ಪ್ರಥಮ ದರ್ಜೆ ಕ್ರಿಕೆಟ್ ಸ್ಪರ್ಧೆಯಾಗಿದ್ದು, ಈ ಸ್ಪರ್ಧೆಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ   1934ರಲ್ಲಿ ಪ್ರಾರಂಭಿಸಿತರು. ಇದಕ್ಕೆ ಭಾರತ ಕ್ರಿಕೆಟ್ ಚಾಂಪಿಯನ್ ಶಿಪ್ ಎಂಬ ಹೆಸರನ್ನು ಕೊಟ್ಟರೂ ನಂತರ ಇಂಗ್ಲೆಂಡ್ ಪರವಾಗಿ1896 ರಿಂದ 1902ರವರೆಗೆ ಕ್ರಿಕಟ್ ಆಡಿದ್ದು ಕುಮಾರ್ ರಂಜಿತ್ ಸಿಂಗ್‌ಜಿಯ ಸ್ಮರಣಾರ್ಥವಾಗಿ ರಣಜಿ ಟ್ರೋಪಿ ಎಂದು ಮರು ಹೆಸರಿಸಲಾಯಿತು ಎಂದರು. ರಣಜಿ ಟ್ರೋಫಿಯ ರಚನೆ ಭಾರತದಲ್ಲಿ ರಾಜ್ಯಗಳ ಮತ್ತು ಪ್ರದೇಶಗಳ ಪುನರ್‌ವ್ಯವಸ್ಥೆಯೊಂದಿಗೆ ಕ್ರಮೇಣ ವಿಕಸಿತವಾಯಿತು. ಮೊದಲಿನಿಂದಲೇ ರಾಜ್ಯ…

Read More

ಶಿವಮೊಗ್ಗ : ಸ್ವಾತಂತ್ರ್ಯಾನಂತರ ಈವರೆಗೆ ಮೃತರಾದ ಪೊಲೀಸ್ ಸಿಬ್ಬಂದಿ ಒಟ್ಟು ೩೬೦೦೦, ಸೇನೆಯ ಹೋರಾಟದಲ್ಲಿ ಮೃತರಾದ ಸೈನಿಕರ ಸಂಖ್ಯೆ ೨೩೦೦೦. ದೇಶದ ಗಡಿಕಾಯುವ ಸೈನಿಕರ ಸ್ಮರಣೀಯ ಸೇವೆಯನ್ನು ಮೀರಿ, ಅತೀ ಒತ್ತಡದಲ್ಲಿ, ಯಾವುದೇ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಸೇವೆ ಅತ್ಯಂತ ಮೌಲಿಕವಾದುದು ಮತ್ತು ಸ್ಮರಣೀಯವಾದುದು ಎಂದು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶ ಮಂಜುನಾಥನಾಯಕ್‌ಅವರು ಹೇಳಿದರು. ಅವರು ಪೊಲೀಸ್ ಇಲಾಖೆಯು ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹುತಾತ್ಮರ ಆರಕ್ಷಕರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತ್ತಿದ್ದರು. ಯಾವುದೇ ಸಂದರ್ಭದಲ್ಲಿ ಸದಾ ಸನ್ನದ್ಧರಾಗಿದ್ದು ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಅಭಿನಂದನೀಯವಾದುದ್ದು ಹಾಗೂ ಸೈನಿಕರ ಸೇವೆಗಿಂತ ಮಹತ್ವದ್ದಾಗಿದೆ ಎಂದರು. ಪೊಲೀಸ್ ಸಿಬ್ಬಂಧಿಗಳಿಗೆ ದೊರೆಯುವ ಗೌರವ ಅವರ ಕುಟುಂಬದ ಎಲ್ಲಾ ಸದಸ್ಯರಿಗೂ ದೊರೆಯುವಂತಾಗಬೇಕು. ಕೇವಲ ವೇತನ-ಭತ್ಯೆಗಳಿಂದ ಅವರನ್ನು ಸಮಾಧಾನಿಸುವುದು ಸಾಧ್ಯವಾಗದು ಎಂದ ಅವರು, ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಶಿವಮೊಗ್ಗ ಅತಿಸೂಕ್ಷ್ಮ ಪ್ರದೇಶ. ಆದಾಗ್ಯೂ ಶಿವಮೊಗ್ಗ ಜಿಲ್ಲೆಯ ಶಾಂತಿಯುತ ವಾತಾವರಣಕ್ಕೆ ಪೊಲೀಸ್ ಇಲಾಖೆಯ…

Read More

ಸಿದ್ದರಾಮಯ್ಯ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ ರಾಜಕೀಯ, ಮಳೆ ಬಗ್ಗೆ ಆಗಾಗ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿಯುತ್ತಲಿರುತ್ತಾರೆ. ಇನ್ನೂ ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಹಾಸನ ಜಿಲ್ಲೆ ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ತಾವು ಹಿಂದೆ ನುಡಿದ ಭವಿಷ್ಯವನ್ನು ಮತ್ತೆ ಪುನರುಚ್ಚಾರ ಮಾಡಿದ್ದಾರೆ. ಸದ್ಯ ಇದೀಗ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ವಿಚಾರದಲ್ಲಿ ಕೋಡಿಶ್ರೀಗಳು ಯುಗಾದಿ ಹಬ್ಬದ ವೇಳೆ ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ, ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನಲೆಗೆ ಬರುತ್ತಲಿದೆ. ಇದೇ ವೇಳೆಯೇ ಕೋಡಿಮಠ ಶ್ರೀಗಳು ಹೇಳಿರು ಹೇಳಿಕೆಯೊಂದು ಭಾರೀ ಕುತೂಹಲ ಸೃಷ್ಟಿಸಿದೆ. ಹಾಲು ಕೆಟ್ಟರೂ ಹಾಲುಮತ ಕೆಡುವುದಿಲ್ಲ ಎಂದು ಹೇಳಿದ್ದರು. ಉತ್ತರದ ನಾಡಿನಲ್ಲಿ ಹಗೆಯ ಬೇಗೆ ಎದ್ದೀತು, ಸುತ್ತುವರಿದು…

Read More

ಶಿವಮೊಗ್ಗ : ಶಿಕ್ಷಕರ ಕೊರತೆಯನ್ನು ನೀಗಿಸಲು ಸರ್ಕಾರವು ದಿಟ್ಟ ಹೆಜ್ಜೆ ಇರಿಸಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಸಂಬಂಧ ಖಾಲಿ ಇರುವ ೧೩೦೦೦ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಅರ್ಹ ಪದವೀಧರರಿಗೆ ಡಿಸೆಂಬರ್೦೭ ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಇಲಾಖೆಯು ಅಕ್ಟೋಬರ್೨೩ರಂದು ಅಧಿಸೂಚನೆ ಪ್ರಕಟಿಸಲಿದ್ದು, ಪರೀಕ್ಷೆಯಲ್ಲಿ ಹಾಜರಾಗಲಿಚ್ಚಿಸುವ ಅರ್ಹ ಪದವೀಧರರು ನವೆಂಬರ್ ೦೯ ರೊಳಗಾಗಿ ಅನೈಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ೩೦೦೦ಕೋಟಿ ರೂ.ಗಳ ಅಂದಾಜು ವೆಚ್ಚದ ಕರ್ನಾಟಕ ಪಬ್ಲಿಕ್ ಶಾಲೆಯ ಮಹತ್ವದ ಯೋಜನೆಗೆ ಶಿವಮೊಗ್ಗದಲ್ಲಿಯೇ ಚಾಲನೆ ದೊರೆಯಲಿರುವುದು ವಿಶೇಷವಾಗಿದೆ. ಈ ಹಿಂದೆ ಯುವನಿಧಿ ಯೋಜನೆಯನ್ನೂ ಮುಖ್ಯಮಂತ್ರಿಗಳು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಉದ್ಘಾಟಿಸಿದ್ದರು ಎಂದವರು ನುಡಿದರು. ಪ್ರಸ್ತುತ ಆರಂಭಿಸಲಾಗಿರುವ ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಿಂದಾಗಿ ಸರ್ಕಾರದಿಂದ ಜನರ ಹಿತಕ್ಕಾಗಿ ರೂಪಿಸಿ ಅನುಷ್ಠಾನಗೊಳಿಸುವ ಯೋಜನೆಗಳನ್ನು ಎಲ್ಲಾ…

Read More