Author: Raghu Shetty

ಶಿವಮೊಗ್ಗ : ಭವಿಷ್ಯದ ಕನಸುಗಳು ಒಂದೆಡೆ, ಜನ್ಮಕೊಟ್ಟ ತಂದೆಯ ಅಂತಿಮ ಕ್ಷಣಗಳು ಮತ್ತೊಂದೆಡೆ ಈ ಎರಡು ಭಾವನೆಗಳ ನಡುವೆ ಸಿಲುಕಿದ ಹೃದಯದ ಹೋರಾಟ ಎಷ್ಟು ಕಠಿಣವಾಗಿರಬಹುದು ಎಂಬುದಕ್ಕೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದ ವಿದ್ಯಾರ್ಥಿನಿ ಶರಣ್ಯ  ಜೀವಂತ ಉದಾಹರಣೆಯಾಗಿದ್ದಾಳೆ. “ತಂದೆಯ ಸಾವಿನ ನೋವಿನಲ್ಲಿ ಪರೀಕ್ಷೆ ಬರೆಯುವುದು ತುಂಬಾ ಕಷ್ಟವಾಯಿತು. ಆದರೂ ತಾಯಿ, ಶಿಕ್ಷಕರು ಮತ್ತು ಗ್ರಾಮಸ್ಥರ ಬೆಂಬಲದಿಂದ ಪರೀಕ್ಷೆಯನ್ನು ಚೆನ್ನಾಗಿ ಬರೆದಿದ್ದೇನೆ. ಆದರೆ ತಂದೆಯ ಕಳೆವಿನ ನೋವನ್ನು ಸಹಿಸಲು ಆಗುತ್ತಿಲ್ಲ. ನಮ್ಮ ಜೀವನ ಮುಂದೇ ಹೇಗಿರುತ್ತದೆ ಎಂಬುದು ಗೊತ್ತಿಲ್ಲ.” : ವಿದ್ಯಾರ್ಥಿನಿ ಶರಣ್ಯ ತಂದೆ ತಂಗರಾಜ್ ಮತ್ತು ತಾಯಿ ಮೀನಾ ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ಸಾಗಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳು ಉತ್ತಮವಾಗಿ ಓದಿ ಬದುಕಿನಲ್ಲಿ ದೊಡ್ಡ ಮಟ್ಟಕ್ಕೇರಬೇಕು ಎಂಬ ಕನಸು ತಂದೆಗೆ ಇತ್ತು. ಆದರೆ ಅನಾರೋಗ್ಯದ ಹಿನ್ನೆಲೆ ತಂಗರಾಜ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಕುಟುಂಬವನ್ನು ಸಂಕಷ್ಟಕ್ಕೆ ತಳ್ಳಿದರು. ಈ ದುರ್ಘಟನೆ ಮಂಗಳವಾರ ರಾತ್ರಿ ಸಂಭವಿಸಿತು. ಬುಧವಾರ ತರುಣ್ಯಗೆ…

Read More

ಶಿವಮೊಗ್ಗ: ತಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿ ನಡೆದ ದುರಂತ ಘಟನೆಯಲ್ಲಿ ವನ್ಯಜೀವಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (೨೬) ಅವರು ನೀರಾನೆ ದಾಳಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಮೂಲತಃ ಬೆಂಗಳೂರು ನಗರದ ಬನ್ನೇರುಘಟ್ಟ ನಿವಾಸಿಯಾದ ಸಮೀಕ್ಷಾ ರೆಡ್ಡಿ, ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಅವರು ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ತಾವರೆಕೊಪ್ಪ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಸುಮಾರು ೧೧.೩೦ರ ಸುಮಾರಿಗೆ ಮೃಗಾಲಯದ ಆಸ್ಪತ್ರೆಗೆ ತೆರಳಿ ಹಕ್ಕಿಯೊಂದಕ್ಕೆ ಚಿಕಿತ್ಸೆ ನೀಡಿದ ನಂತರ, ಗರ್ಭಿಣಿಯಾಗಿದ್ದ ನೀರಾನೆ ಇರುವ ಆವರಣಕ್ಕೆ ತೆರಳಿದರು. ಥರ್ಮಲ್ ಕ್ಯಾಮೆರಾ ಬಳಸಿ ಅದರ ಆರೋಗ್ಯ ಸ್ಥಿತಿ ಪರಿಶೀಲಿಸುವಾಗ, ಆ ನೀರಾನೆ ಏಕಾಏಕಿ ದಾಳಿ ನಡೆಸಿ ಅವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಯಿತು. ಆದರೆ ತೀವ್ರ ರಕ್ತಸ್ರಾವದಿಂದಾಗಿ ಅವರು ಚಿಕಿತ್ಸೆಗೂ ಸ್ಪಂದಿಸದೆ ಬೆಳಿಗ್ಗೆ ಸುಮಾರು ೬.೩೦ರ ಸುಮಾರಿಗೆ ನಿಧನರಾದರು. ದಾಳಿ ನಡೆಸಿದ ನೀರಾನೆ…

Read More

ಶಿವಮೊಗ್ಗ: ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದ ೧೩೧ ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ  ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ. ಇಂಡಿಗೋ ಸಂಸ್ಥೆಯು ಏಪ್ರಿಲ್ ೩೦ರ ವರೆಗಷ್ಟೇ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಿದ್ದು, ಮೇ ೧ರಿಂದ ಯಾವುದೇ ಬುಕ್ಕಿಂಗ್ ಲಭ್ಯವಿಲ್ಲ. ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದ ಹಿನ್ನೆಲೆ ಡಿಜಿಸಿಎ (ಆಉಅಂ) ವಿಮಾನಯಾನ ನಿಯಮಗಳನ್ನು ಅತ್ಯಂತ ಕಠಿಣಗೊಳಿಸಿದೆ. ಪೈಲಟ್‌ಗಳ ಕೆಲಸದ ಅವಧಿ ಮತ್ತು ವಿಮಾನಗಳ ನಿರ್ವಹಣೆಗೆ ಸಂಬಂಧಿಸಿದ ಹೊಸ ನಿಯಮಗಳಿಂದಾಗಿ ಇಂಡಿಗೋ ಸಂಸ್ಥೆಗೆ ಪೈಲಟ್‌ಗಳು ಕೊರತೆ ಎದುರಾಗಿದೆ. ಈ ತಾಂತ್ರಿಕ ಕಾರಣದಿಂದಾಗಿ ಸಂಸ್ಥೆಯು ಸಣ್ಣ ನಗರಗಳಿಗೆ ನೀಡುತ್ತಿದ್ದ ಎಟಿಆರ್ ವಿಮಾನ ಸೇವೆಗಳನ್ನು ಕಡಿತಗೊಳಿಸಲು ಮುಂದಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ಸ್ಥಗಿತ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮಾರ್ಗಸೂಚಿಗಳ ಪ್ರಕಾರ, ಪೈಲಟ್‌ಗಳ ಕೊರತೆಯಿಂದಾಗಿ ಇಂಡಿಗೋ ಏರ್‌ಲೈನ್ಸ್ ಮೇ ೧ರಿಂದ ಶಿವಮೊಗ್ಗ ಮತ್ತು ಬೆಂಗಳೂರು ನಡುವಿನ ವಿಮಾನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ…

Read More

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದ ಕಾಡಂಚಿನಲ್ಲಿ‌ ಕಾಡಾನೆಗಳು ಪ್ರತ್ಯಕ್ಷವಾಗಿವೆ. ಪುರದಾಳು ಗ್ರಾಮ ಸಮೀಪದ ನರಸೀಪುರ ಕಾಡಿನಲ್ಲಿ ಕಾಡಾನೆಗಳ ಹಿಂಡು ಪ್ರತ್ಯೇಕ್ಷವಾಗಿವೆ. ನರಸೀಪುರದ ಕೆರೆಯಲ್ಲಿ ಮೂರು ಕಾಡಾನೆಗಳು ನೀರು ಕುಡಿಯುವ ದೃಶ್ಯವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಪುರದಾಳು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಕಾಡಾನೆಗಳು ರೈತರ ಅಡಿಕೆ-ಬಾಳೆ ತೋಟ, ಭತ್ತದ ಗದ್ದೆಗಳನ್ನು ನಾಶ ಮಾಡಿದ್ದವು. ಈಗ ಮತ್ತೆ ಕಾಡಾನೆಗಳು ಪ್ರತ್ಯೇಕ್ಷವಾಗಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

Read More

ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ: ಯುವತಿ ದುರ್ಮರ• ಶಿವಮೊಗ್ಗ, ಮಾ.12: ನಗರದ McGann Hospital ಆವರಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ವಾಟರ್ ಟ್ಯಾಂಕರ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಕಾರ್ಕಳ ಮೂಲದ ಲಾವಣ್ಯ (25) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನದಲ್ಲಿದ್ದ ಓವೇರಿಯಾ ಎಂಬ ಮತ್ತೊಬ್ಬ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ನೀರು ಪೂರೈಕೆ ಮಾಡಲು ಟ್ಯಾಂಕರ್ ಲಾರಿ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಭದ್ರಾವತಿ: ನ್ಯೂಟನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಕಳುವಾದ ಬಂಗಾರದ ಸರವನ್ನು ವಶಪಡಿಸಿಕೊಂಡಿದ್ದಾರೆ. ಜನ್ನಾಪುರದ ಎನ್.ಟಿ.ಬಿ ಕಚೇರಿ ಸಮೀಪ ವಾಸವಾಗಿರುವ ನಗರಸಭೆ ನೌಕರರಾದ ಶ್ರೀಮತಿ ಸೌಭಾಗ್ಯ (48)  ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿತ್ತು. ನಾ.19-2025  ರಂದು ಬೆಳಿಗ್ಗೆ 5:30 ರಿಂದ 10:00 ಗಂಟೆ ನಡುವಿನ ಅವಧಿಯಲ್ಲಿ ಅವರ ಮನೆಯ ಡ್ರೆಸ್ಸಿಂಗ್ ಟೇಬಲ್ ಮೇಲೆ ಇಟ್ಟಿದ್ದ ಸುಮಾರು 10 ಗ್ರಾಂ ತೂಕದ, ಸುಮಾರು ₹1,00,000 ಮೌಲ್ಯದ ಬಂಗಾರದ ಸರವನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಸಂಬಂಧ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 263/2025 ಅಡಿಯಲ್ಲಿ ಬಿ.ಎನ್.ಎಸ್ ಕಾಯ್ದೆ ಕಲಂ 305 ಪ್ರಕಾರ ಪ್ರಕರಣ ದಾಖಲಾಗಿತ್ತು. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್.ಬಿ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎ.ಜಿ. ಕಾರಿಯಪ್ಪ ಮತ್ತು ರಮೇಶ್ ಅವರ ನಿರ್ದೇಶನದಲ್ಲಿ, ಭದ್ರಾವತಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ…

Read More

ಶಿವಮೊಗ್ಗ: ಶಿರಾಳಕೊಪ್ಪದ 23 ವರ್ಷದ ವ್ಯಕ್ತಿಯೊಬ್ಬನು 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ–1) ತೀರ್ಪು ನೀಡಿದೆ. ಶಿರಾಳಕೊಪ್ಪ ನಿವಾಸಿಯಾದ ಆರೋಪಿಯು ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ, ಪೋಕ್ಸೋ ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.  ತನಿಖಾಧಿಕಾರಿಗಳಾದ ಶಿಕಾರಿಪುರದ ಡಿವೈಎಸ್ಪಿ ಕೇಶವ ಕೆ.ವಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.  ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಪಾಟೀಲ್  ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ…

Read More

ಶಿವಮೊಗ್ಗ: ಜಿಲ್ಲೆಯ ಹೊಸನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ, ಭಟ್ಕಳ ಮೂಲದ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 2025ರ ಡಿಸೆಂಬರ್ 27ರಂದು ನಿಟ್ಟೂರು ನಾಗೋಡಿ ಗ್ರಾಮದ ನಿವಾಸಿ ರಾಜೇಂದ್ರ ಶೆಟ್ಟಿ ಅವರ ಮನೆಯ ಮುಂಭಾಗಿಲಿನ ಬೀಗವನ್ನು ಮುರಿದು ಕಳ್ಳರು ಒಳನುಗ್ಗಿದ್ದರು. ಮನೆಯಲ್ಲಿ ಇರಿಸಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿ ಪರಾರಿಯಾಗಿದ್ದರು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಾಂತ್ರಿಕ ಮಾಹಿತಿ ಮತ್ತು ಬೆರಳಚ್ಚು ವಿಭಾಗದ ನೆರವಿನಿಂದ ಆರೋಪಿಗಳನ್ನು ಪತ್ತೆಹಚ್ಚಿದ ಪೊಲೀಸರು, ಮಹಮ್ಮದ್ ಇಮ್ರಾನ್ ಇಕ್ಕೇರಿ (25), ಮಹಮ್ಮದ್ ಅಖೀಲ್ (24), ಅಮೀರ್ ಹಸನ್ ಬ್ಯಾರಿ (29) ಹಾಗೂ ಬೇಬಿ ಹಾಜಿರ (55) ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ಸುಮಾರು ₹7,90,000 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ₹3,87,000 ಮೌಲ್ಯದ 30 ಗ್ರಾಂ ಚಿನ್ನದ ನೆಕ್ಲಸ್, ₹93,000 ಮೌಲ್ಯದ 6 ಗ್ರಾಂ ಚಿನ್ನದ ಬ್ರೇಸ್‌ಲೆಟ್, 50 ಗ್ರಾಂ…

Read More

ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಲಂಚ ಸ್ವೀಕರಿಸುವಾಗ Karnataka Lokayukta Police ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ವಿವರ: ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಭತ್ಯೆಗಳನ್ನು ಮಂಜೂರು ಮಾಡಲು ₹4 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದಾಗಿ ಆರೋಪ. ಲಿಂಗರಾಜು ಎಂಬ ಶಿಕ್ಷಕರು ತಮ್ಮ ಬಾಕಿ ಉಳಿದಿರುವ ವೇತನ ಬಡ್ತಿಗಳು ಹಾಗೂ ಸೌಲಭ್ಯಗಳನ್ನು ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಈ ವೇಳೆ ಬಿಇಒ ನಾಗೇಂದ್ರಪ್ಪ ಹಾಗೂ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ ಖಾಸಗಿ ವ್ಯಕ್ತಿ ಮಂಜುನಾಥ ಇಬ್ಬರೂ ಸೇರಿ ಲಂಚದ ಹಣ ಕೇಳಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ದೂರು ಆಧರಿಸಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಟ್ರ್ಯಾಪ್ ಕಾರ್ಯಾಚರಣೆ: ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ, ನಾಗೇಂದ್ರಪ್ಪ ಹಾಗೂ ಮಧ್ಯವರ್ತಿ ಮಂಜುನಾಥ ಅವರು ಲಿಂಗರಾಜು ಅವರಿಂದ ₹1,00,000 ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಟ್ರ್ಯಾಪ್ ಮಾಡಿದ್ದಾರೆ. * ಲಂಚದ ಹಣವನ್ನು ಜಪ್ತಿಪಡಿಸಲಾಗಿದೆ.…

Read More

ಶಿವಮೊಗ್ಗ, : ನಗರದ ಪ್ರಸಿದ್ಧ ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ದೇವಿಯನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿ ಮೆರವಣಿಗೆಯೊಂದಿಗೆ ಮಾರಿಕಾಂಬಾ ವನಕ್ಕೆ ಬಿಡಲಾಯಿತು. ಜಾತ್ರೆಯ ಅಂಗವಾಗಿ ನಗರದಲ್ಲಿ ಭವ್ಯವಾಗಿ ಪ್ರತಿಷ್ಠಾಪಿಸಲಾಗಿದ್ದ ದೇವಿಯ ಮೂರ್ತಿಗೆ ಪೂಜೆ, ಅಲಂಕಾರ ಹಾಗೂ ವಿಶೇಷ ಧಾರ್ಮಿಕ ವಿಧಿವಿಧಾನಗಳು ನೆರವೇರಿಸಲಾಯಿತು. ನಂತರ ಸಾವಿರಾರು ಭಕ್ತರ ಜಯಘೋಷ, ಡೊಳ್ಳು-ತಾಳ, ನಾದಸ್ವರಗಳ ಮಧ್ಯೆ ಮೆರವಣಿಗೆ ಆರಂಭವಾಯಿತು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು, ಮಹಿಳಾ ಬಳಗಗಳು, ಯುವಕರ ತಂಡಗಳು ಭಾಗವಹಿಸಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿವೆ. ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿದ ಮೆರವಣಿಗೆಗೆ ಎಲ್ಲೆಡೆ ಭಕ್ತರು ಹೂವಿನ ಮಳೆ ಸುರಿಸಿ ಭಕ್ತಿಭಾವ ವ್ಯಕ್ತಪಡಿಸಿದರು. ಭದ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಹಾಗೂ ನಗರ ಪಾಲಿಕೆ ವತಿಯಿಂದ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಮಾರಿಕಾಂಬಾ ವನದಲ್ಲಿ ವಿಧಿವಿಧಾನಗಳೊಂದಿಗೆ ದೇವಿಯ ವಿಸರ್ಜನೆ ನೆರವೇರಿತು. ಜಾತ್ರೆಯ ಯಶಸ್ವಿ ಆಯೋಜನೆಗೆ ದೇವಸ್ಥಾನ ಸಮಿತಿ, ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರ ಗಮನಾರ್ಹವಾಗಿದೆ. ಹಬ್ಬದ ಅಂಗವಾಗಿ ನಗರದಲ್ಲಿ ಭಕ್ತಿಪರ ವಾತಾವರಣ…

Read More