Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಪ್ರಮುಖ ಸುದ್ದಿ»ನೀರಾನೆ ದಾಳಿ: ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಬಲಿ
ಪ್ರಮುಖ ಸುದ್ದಿ

ನೀರಾನೆ ದಾಳಿ: ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಬಲಿ

Hippopotamus attack: Veterinarian Dr. Samiksha Reddy killed
Raghu ShettyBy Raghu ShettyMarch 20, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ: ತಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿ ನಡೆದ ದುರಂತ ಘಟನೆಯಲ್ಲಿ ವನ್ಯಜೀವಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (೨೬) ಅವರು ನೀರಾನೆ ದಾಳಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಮೂಲತಃ ಬೆಂಗಳೂರು ನಗರದ ಬನ್ನೇರುಘಟ್ಟ ನಿವಾಸಿಯಾದ ಸಮೀಕ್ಷಾ ರೆಡ್ಡಿ, ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಪದವಿ ಪಡೆದಿದ್ದರು.
ಅವರು ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ತಾವರೆಕೊಪ್ಪ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ತರಬೇತಿ ಪಡೆಯುತ್ತಿದ್ದರು.
ಗುರುವಾರ ರಾತ್ರಿ ಸುಮಾರು ೧೧.೩೦ರ ಸುಮಾರಿಗೆ ಮೃಗಾಲಯದ ಆಸ್ಪತ್ರೆಗೆ ತೆರಳಿ ಹಕ್ಕಿಯೊಂದಕ್ಕೆ ಚಿಕಿತ್ಸೆ ನೀಡಿದ ನಂತರ, ಗರ್ಭಿಣಿಯಾಗಿದ್ದ ನೀರಾನೆ ಇರುವ ಆವರಣಕ್ಕೆ ತೆರಳಿದರು. ಥರ್ಮಲ್ ಕ್ಯಾಮೆರಾ ಬಳಸಿ ಅದರ ಆರೋಗ್ಯ ಸ್ಥಿತಿ ಪರಿಶೀಲಿಸುವಾಗ, ಆ ನೀರಾನೆ ಏಕಾಏಕಿ ದಾಳಿ ನಡೆಸಿ ಅವರಿಗೆ ಗಂಭೀರ ಗಾಯಗಳಾಗಿವೆ.

http://a1suddi.com/wp-content/uploads/2026/03/20.mp4

ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಯಿತು. ಆದರೆ ತೀವ್ರ ರಕ್ತಸ್ರಾವದಿಂದಾಗಿ ಅವರು ಚಿಕಿತ್ಸೆಗೂ ಸ್ಪಂದಿಸದೆ ಬೆಳಿಗ್ಗೆ ಸುಮಾರು ೬.೩೦ರ ಸುಮಾರಿಗೆ ನಿಧನರಾದರು.
ದಾಳಿ ನಡೆಸಿದ ನೀರಾನೆ ಗರ್ಭಿಣಿಯಾಗಿದ್ದು, ಇನ್ನೂ ನಾಲ್ಕು ದಿನಗಳಲ್ಲಿ ಹೆರಿಗೆಗಾಗಬೇಕಿತ್ತು. ಅದು ಆಹಾರ ಸೇವಿಸದ ಹಿನ್ನೆಲೆ ಆರೋಗ್ಯ ಪರಿಶೀಲನೆಗಾಗಿ ಡಾ. ಸಮೀಕ್ಷಾ ಅವರು ಆವರಣಕ್ಕೆ ತೆರಳಿದ್ದಾಗ ಈ ದುರ್ಘಟನೆ ನಡೆದಿದೆ.
ಈ ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುವಂತೆ ಸೂಚಿಸಿದ್ದು, ಮೃಗಾಲಯಗಳಲ್ಲಿ ಪಶುವೈದ್ಯರು ಚಿಕಿತ್ಸೆ ನೀಡುವ ವೇಳೆ ಕಟ್ಟುನಿಟ್ಟಾದ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕೆಂದು ಆದೇಶಿಸಿದ್ದಾರೆ.
ದುರಂತ ಸಂಭವಿಸಲು ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಿ, ಏಳು ದಿನಗಳ ಒಳಗೆ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಶಿವಮೊಗ್ಗ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನೀರಾನೆ ದಾಳಿಯಿಂದ ಯುವ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ತಮ್ಮ ವೃತ್ತಿ ಬದುಕನ್ನು ವನ್ಯಜೀವಿಗಳ ಸೇವೆಗೆ ಮುಡಿಪಾಗಿಟ್ಟ ಯುವ ವೈದ್ಯಯನ್ನು ಕಳೆದುಕೊಂಡಿರುವುದು ಕೇವಲ ಅವರ ಕುಟುಂಬ ಮತ್ತು ಇಲಾಖೆಗೆ ನಷ್ಟವಲ್ಲದೆ ಇಡೀ ಸಮಾಜಕ್ಕೆ ಆದ ನಷ್ಟ, ಇಂತಹ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಸರ್ಕಾರ ನಿಲ್ಲಲಿದ್ದು, ಈಗಾಗಲೇ ಅರಣ್ಯ ಸಚಿವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಈ ಸಂದರ್ಭದಲ್ಲಿ ದೇವರು ಅವರ ಅಗಲಿಕೆಯನ್ನು ಬರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಹಾಗೂ ಅವರ ಸಹಪಾಠಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
: ಎಸ್, ಮಧು ಬಂಗಾರಪ್ಪ
ಜಿಲ್ಲಾ ಉಸ್ತುವಾರಿ ಸಚಿವರು, ಶಿವಮೊಗ್ಗ.

ಪಶು ವೈದ್ಯೆ ಡಾ.ಸಮೀಕ್ಷಾರೆಡ್ಡಿ ಸಾವು ಜಿಲ್ಲೆಗೆ ತುಂಬಲಾರದ ನಷ್ಟವಾಗಿದ್ದು, ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ.
: ಎಸ್.ಎನ್. ಚನ್ನಬಸಪ್ಪ, ಶಾಸಕರು.

http://a1suddi.com/wp-content/uploads/2026/03/WhatsApp-Video-2026-03-20-at-5.10.18-PM.mp4

ಕಳೆದ ಮೂರ್ನಾಲ್ಕು ದಿನಗಳಿಂದ ನೀರಾನೆಯು ನೀರಿನಲ್ಲಿಯೇ ಕುಳಿತಿತ್ತು.ಗುರುವಾರ ರಾತ್ರಿ ಡಾ. ಸಮೀಕ್ಷಾ ಅವರು ಪಕ್ಷಿಯೊಂದಕ್ಕೆ ಚಿಕಿತ್ಸೆ ನೀಡಲು ಮೃಗಾಲಯಕ್ಕೆ ಬಂದಿದ್ದರು. ಆ ಸಮಯದಲ್ಲಿ ನೀರಾನೆಯ ದೇಹದ ಉಷ್ಣಾಂಶವನ್ನು ಪರೀಕ್ಷಿಸಲು ಮುಂದಾದಾಗ ಈ ದುರ್ಘಟನೆ ಸಂಭವಿಸಿದೆ.ಮೃತ ಡಾ. ಸಮೀಕ್ಷಾ ಅವರು ಫೆಬ್ರವರಿ ೧ರಂದು ಟ್ರೈನಿ ವೈದ್ಯೆಯಾಗಿ ಮೃಗಾಲಯಕ್ಕೆ ಸೇರ್ಪಡೆಗೊಂಡಿದ್ದರು. ರಾತ್ರಿ ವೇಳೆ ನೀರಾನೆ ಬಳಿ ಹೋಗುವಾಗ ಅಲ್ಲಿದ್ದ ಹಿರಿಯ ಪಶುವೈದ್ಯಾಧಿಕಾರಿಗಳು ಅವರಿಗೆ ಯಾವ ಸೂಚನೆ ನೀಡಿದ್ದರು ಎಂಬುದು ನಮಗೆ ತಿಳಿದಿರಲಿಲ್ಲ. ಈ ಬಗ್ಗೆ ನಾವು ಆಂತರಿಕವಾಗಿ ಚರ್ಚೆ ನಡೆಸುತ್ತೇವೆ ಮತ್ತು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ.
: ಅಮರಾಕ್ಷರ್,
ಕಾರ್ಯನಿರ್ವಾಹಕ ನಿರ್ದೇಶಕರು,ಹುಲಿ-ಸಿಂಹಧಾಮ,ತ್ಯಾವರೆಕೊಪ್ಪ

ಡಾ. ಸಮೀಕ್ಷಾ ಅವರು ಫೆಬ್ರವರಿ ೧ರಂದು ಅಪ್ರೆಂಟಿಸ್‌ಶಿಪ್‌ಗಾಗಿ ಮೃಗಾಲಯಕ್ಕೆ ಸೇರಿದ್ದರು. ಕೇವಲ ಒಂದೂವರೆ ತಿಂಗಳ ಸೇವಾವಧಿಯಲ್ಲಿದ್ದ ತರಬೇತಿ ನಿರತ ವೈದ್ಯೆಯನ್ನು ಇಂತಹ ಅಪಾಯಕಾರಿ ಪ್ರಾಣಿಯ ಬಳಿ ಒಂಟಿಯಾಗಿ ಕಳುಹಿಸಿದ್ದು ಯಾಕೆ.ಅವಳು ತಂದೆ-ತಾಯಿಗೆ ಒಬ್ಬಳೇ ಮಗಳು. ಸಣ್ಣ ಪಕ್ಷಿಗಳಾಗಿದ್ದರೆ ಪರವಾಗಿಲ್ಲ, ನೀರಾನೆಯಂತಹ ದೈತ್ಯ ಪ್ರಾಣಿಯ ಬಳಿ ಒಬ್ಬ ತರಬೇತಿ ಪಡೆಯುತ್ತಿರುವ ವೈದ್ಯೆಯನ್ನು ಮಾರ್ಗದರ್ಶಕರಿಲ್ಲದೆ ಬಿಟ್ಟಿದ್ದು ಸರಿಯಲ್ಲ.
: ರಾಜಶೇಖರ್,
ಮೃತರ ಸೋದರ ಮಾವ.

 

Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

June 11, 2026

ಶುಲ್ಕ ಪಾರದರ್ಶಕತೆ ಕಡ್ಡಾಯ; ಉಲ್ಲಂಘಿಸಿದರೆ ಕಠಿಣ ಶಿಕ್ಷೆ

June 11, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,311 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026395 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026356 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025298 Views
Don't Miss
ಅಪರಾಧ ಲೋಕ

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

By Raghu ShettyJune 13, 20260

ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ನರಸಿಂಹ ಹತ್ಯೆ ಪ್ರಕರಣವನ್ನು ಭೇದಿಸಿರುವ ಶಿವಮೊಗ್ಗ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ…

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.