ತುಮರಿ: ಸಮೀಪದ ಕಾರಣಿ ಗ್ರಾಮದ ಮಂಜಪ್ಪ ಎಂಬುವವರ ಸಾಕು ನಾಯಿಯ ಮೇಲೆ ಭಾನುವಾರ ರಾತ್ರಿ ಚಿರತೆ ದಾಳಿ ಮಾಡಿದೆ. ಈ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮನೆಯ ಆವರಣಕ್ಕೆ ನುಗ್ಗಿದ ಚಿರತೆಯು ನಾಯಿಯ ಕುತ್ತಿಗೆ ಭಾಗಕ್ಕೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ. ನಾಯಿ ಜೋರಾಗಿ ಕೂಗಿಕೊಳ್ಳುತ್ತಿದ್ದಂತೆ ಚಿರತೆ ಸ್ಥಳದಿಂದ ಕಾಲ್ಕಿತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಇದೇ ಗ್ರಾಮದ ರೈತರೊಬ್ಬರ ನಾಯಿಯನ್ನು ಚಿರತೆ ಹೊತ್ತೊಯ್ದು ಕೊಂದು ಹಾಕಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
